Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...