Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...