Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...