Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...