Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...