Homeಅಂತರಾಷ್ಟ್ರೀಯ30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

30 ವರ್ಷಗಳಿಂದ ಅಮೆರಿಕದಲ್ಲಿ ನೆಲೆಸಿದ್ದ ಪಂಜಾಬಿ ಮಹಿಳೆ ಗಡಿಪಾರು: ವರದಿ

- Advertisement -
- Advertisement -

ಕಳೆದ ಮೂರು ದಶಕಗಳಿಗೂ ಹೆಚ್ಚು ಸಮಯದಿಂದ ಅಮೆರಿಕದಲ್ಲಿ ನೆಲೆಸಿದ್ದ 73 ವರ್ಷದ ಪಂಜಾಬಿ ಮಹಿಳೆ
ಹರ್ಜಿತ್ ಕೌರ್ ಅವರನ್ನು ಈ ವಾರ ಭಾರತಕ್ಕೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನು ವಲಸಿಗರ ಹಕ್ಕುಗಳ ಕಾರ್ಯಕರ್ತರು ‘ಕ್ರೂರ ಮತ್ತು ಅನಗತ್ಯ’ ಎಂದು ಕರೆದಿದ್ದಾರೆ.

ಕೌರ್ ಸೆಪ್ಟೆಂಬರ್ 23ರಂದು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ ಎಂದು indianexpress.com ವರದಿ ಮಾಡಿದೆ.

ಭಾನುವಾರ (ಸೆ.21) ರಾತ್ರಿ ಕೌರ್ ಅವರನ್ನು ಯುಎಸ್ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಅಧಿಕಾರಿಗಳು ಅಮೆರಿಕದ ಬೇಕರ್ಸ್‌ಫೀಲ್ಡ್‌ನಿಂದ ಲಾಸ್ ಏಂಜಲೀಸ್‌ಗೆ ಇದ್ದಕ್ಕಿದ್ದಂತೆ ಕರೆದೊಯ್ದರು. ನಂತರ ಚಾರ್ಟರ್ಡ್ ವಿಮಾನದಲ್ಲಿ ಜಾರ್ಜಿಯಾಕ್ಕೆ ಕಳುಹಿಸಿದರು. ಅಲ್ಲಿಂದ ಭಾರತಕ್ಕೆ ಗಡಿಪಾರು ಮಾಡಿದರು ಎಂದು ಕೌರ್ ಪರ ವಕೀಲ ದೀಪಕ್ ಅಹ್ಲುವಾಲಿಯಾ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಕೌರ್ ಅವರ ಗಡಿಪಾರು ಬಹಳ ಕ್ರೂರವಾಗಿ ನಡೆದಿದೆ. ಅವರನ್ನು ದೀರ್ಘ ಸಮಯ ಸಂಕೋಲೆ, ಬರಿಯ ಕಾಂಕ್ರೀಟ್ ಕೊಠಡಿಗಳಲ್ಲಿ ಬಂಧಿಸಲಾಗಿತ್ತು. ಮೂಲಭೂತ ಸೌಕರ್ಯಗಳನ್ನು ನಿರಾಕರಿಸಲಾಗಿತ್ತು. ಕೊನೆಯದಾಗಿ ಆಕೆಗೆ ತನ್ನ ಕುಟುಂಬಕ್ಕೆ ವಿದಾಯ ಹೇಳಲು, ಆಕೆಯ ಅಗತ್ಯ ವಸ್ತುಗಳನ್ನು ತೆಗೆದುಕೊಳ್ಳಲೂ ಕೂಡ ಅವಕಾಶ ನೀಡಿರಲಿಲ್ಲ. ಈ ಗಡಿಪಾರು ಅಮಾನವೀಯ ಎಂದು ಅಹ್ಲುವಾಲಿಯಾ ವಿವರಿಸಿದ್ದಾರೆ.

ಕೌರ್ ಅವರ ಕುಟುಂಬವು ಅವರ ಪ್ರಯಾಣದ ದಾಖಲೆಗಳನ್ನು ಸಿದ್ದಗೊಳಿಸಿ ಅವರನ್ನು ವಾಣಿಜ್ಯ ವಿಮಾನದಲ್ಲಿ ವಾಪಸ್ ಕಳುಹಿಸುವಂತೆ ವಿನಂತಿಸಿತ್ತು. ಕೌರ್ ಅವರನ್ನು ವಾಣಿಜ್ಯ ವಿಮಾನದಲ್ಲಿ ಕಳುಹಿಸಿ, ಕೊನೆಯದಾಗಿ ಕೆಲ ಗಂಟೆಗಳ ಕಾಲ ಕುಟುಂಬಕ್ಕೆ ಭೇಟಿಯಾಗಲು ಅವಕಾಶ ಮಾಡಿಕೊಡಿ ಎಂದು ಎರಡು ಬೇಡಿಕೆಗಳನ್ನು ಅಧಿಕಾರಿಗಳ ಮುಂದೆ ಇಡಲಾಗಿತ್ತು. ಆದರೆ, ಅಧಿಕಾರಿಗಳು ಅವುಗಳನ್ನು ತಿರಸ್ಕರಿಸಿದರು ಎಂದು ಅಹ್ಲುವಾಲಿಯಾ ತಿಳಿಸಿದ್ದಾರೆ.

ಹರ್ಜಿತ್ ಕೌರ್ ಅವರ ಗಡಿಪಾರಿಗೆ ವಿರೋಧ ವ್ಯಕ್ತಪಡಿಸಿದ್ದ ಸಿಖ್ ಒಕ್ಕೂಟ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿರುವ ವೃದ್ಧ ವಿಧವೆಯ ಗಡಿಪಾರು ಸ್ವೀಕಾರ್ಹವಲ್ಲ ಎಂದಿತ್ತು.

ಸೆಪ್ಟೆಂಬರ್ 8ರಂದು ಕೌರ್ ಅವರನ್ನು ಬಂಧಿಸಲಾಗಿತ್ತು. ಸ್ಯಾನ್ ಫ್ರಾನ್ಸಿಸ್ಕೋ ಐಸಿಇ ಕಚೇರಿಯಲ್ಲಿ ನಿಯಮಿತ ತಪಾಸಣೆಗಾಗಿ ಹೋಗಿದ್ದಾಗ ಬಂಧಿಸಿ, ಫ್ರೆಸ್ನೋ ಮತ್ತು ಬೇಕರ್ಸ್‌ಫೀಲ್ಡ್‌ನಲ್ಲಿರುವ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಈ ವೇಳೆ ಅವರಿಗೆ ವೈದ್ಯರು ನಿರಂತರವಾಗಿ ತೆಗೆದುಕೊಳ್ಳಲು ಸೂಚಿಸಿರುವ ಔಷಧಿಗಳನ್ನು ಎರಡು ವಾರಗಳ ನಿರಾಕರಿಸಿಲಾಗಿತ್ತು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಕೌರ್ 1992ರಲ್ಲಿ ಒಂಟಿ ತಾಯಿಯಾಗಿ ಅಮೆರಿಕಕ್ಕೆ ವಲಸೆ ಹೋದವರು. ಭಾರತೀಯ ಸೀರೆ ಅಂಗಡಿಯಲ್ಲಿ ಹೊಲಿಗೆಗಾರ್ತಿಯಾಗಿ ಕೆಲಸ ಮಾಡಿದವರು. ಅಮೆರಿಕ ಸರ್ಕಾರಕ್ಕೆ ತೆರಿಗೆಗಳನ್ನೂ ಪಾವತಿಸಿದವರು. ಅಲ್ಲಿನ ಗುರುದ್ವಾರಗಳಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದವರು.

ಅವರ ಆಶ್ರಯ ಕೋರಿಕೆಯನ್ನು ತಿರಸ್ಕರಿಸಿ 2005 ರಲ್ಲಿ ಗಡಿಪಾರು ಆದೇಶ ಹೊರಡಿಸಲಾಗಿತ್ತು. ಆದರೂ, 13 ವರ್ಷಗಳಿಗಿಂತ ಹೆಚ್ಚು ಕಾಲ ಅವರು ಐಸಿಇ ನಿಯಮಗಳನ್ನು ಪಾಲಿಸಿಕೊಂಡು, ಚೆಕ್-ಇನ್‌ಗಳಿಗೆ ಹಾಜರಾಗಿಕೊಂಡು ಹಾಗೂ ಭಾರತೀಯ ಕಾನ್ಸುಲೇಟ್‌ನಿಂದ ವಿಳಂಬವಾದ ಪ್ರಯಾಣ ದಾಖಲೆಗಳಿಗಾಗಿ ಕಾಯುತ್ತಾ ಕೆಲಸದ ಪರವಾನಗಿಗಳನ್ನು ನವೀಕರಿಸಿಕೊಂಡು ಇದ್ದರು.

ಅಮೆರಿಕದೊಂದಿಗಿನ ದೀರ್ಘಕಾಲದ ಸಂಬಂಧ ಮತ್ತು ಶುದ್ಧ ದಾಖಲೆಯ ಹೊರತಾಗಿಯೂ, ಹರ್ಜಿತ್ ಕೌರ್ ಅವರ ಅನಿರೀಕ್ಷಿತ ಗಡಿಪಾರು ವಿರೋಧಿಸಿ ಕ್ಯಾಲಿಫೋರ್ನಿಯಾದಲ್ಲಿ ಪ್ರತಿಭಟನೆಗಳು ನಡೆದಿವೆ. ಎಲ್ ಸೋಬ್ರಾಂಟೆಯಲ್ಲಿ ನೂರಾರು ಜನರು ಒಟ್ಟುಗೂಡಿ, “ನಮ್ಮ ಅಜ್ಜಿಯನ್ನು ಬಿಟ್ಟು ಬಿಡಿ, ಹರ್ಜಿತ್ ಕೌರ್ ಇಲ್ಲಿಗೆ ಸೇರಿದವರು” ಎಂದು ಬರೆದಿರುವ ಫಲಕಗಳನ್ನು ಹಿಡಿದು ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಯುಎಸ್‌ ಕಾಂಗ್ರೆಸ್ ಸದಸ್ಯ ಜಾನ್ ಗರಮೆಂಡಿ, ಕ್ಯಾಲಿಫೋರ್ನಿಯಾ ಸೆನೆಟರ್ ಜೆಸ್ಸಿ ಅರೆಗ್ವಿನ್ ಮತ್ತು ಸ್ಥಳೀಯ ನಾಯಕರು ಐಸಿಇಗೆ ತನ್ನ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ. ಕೌರ್ ಅವರ ಬಂಧನ ‘ತಪ್ಪಾದ ಆದ್ಯತೆ’ ಎಂದು ಹೇಳಿದ್ದಾರೆ.

Courtesy : indianexpress.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...