Homeಮುಖಪುಟಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

ಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

- Advertisement -
- Advertisement -

ಹೊಸದಿಲ್ಲಿ: ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಹೊಸ ವರ್ಷದ ದಿನದಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕಾಗಿ ಪ್ರತಿಭಟನಾನಿರತ ರೈತ ಮುಖಂಡರಿಂದ ತೀವ್ರ ಟೀಕೆ ವ್ಯಕ್ತವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಹಿಂದೆ ರೈತರ ಆಂದೋಲನಕ್ಕೆ ಬೆಂಬಲ ನೀಡಿದ ದಿಲ್ಜಿತ್ ದೋಸಾಂಜ್ ಅವರ ಈ ಭೇಟಿಯ ಕುರಿತು ನಿರಾಶೆಯನ್ನು ವ್ಯಕ್ತಪಡಿಸಿದ ರೈತರು, ಈ ಕಾರಣಕ್ಕಾಗಿ ರೈತ ಹೋರಾಟದ ಕುರಿತು ಗಾಯಕನ ಬದ್ಧತೆಯನ್ನು ಪ್ರಶ್ನಿಸಿದ್ದಾರೆ. ದಿಲ್ಜಿತ್ ದೋಸಾಂಜ್ ಅವರು ಮೋದಿಯೊಂದಿಗಿನ ತನ್ನ ಭೇಟಿಯನ್ನು ಹೊಸ ವರ್ಷಕ್ಕೆ “ಅದ್ಭುತ ಆರಂಭ” ಎಂದು ಬಣ್ಣಿಸಿದ್ದಾರೆ.  ಅಂತರಾಷ್ಟ್ರೀಯ ತಾರಾಪಟ್ಟಿಗೆ  ವಿನಮ್ರ  ಆರಂಭ ಎಂದು  ಪ್ರಧಾನಿಯು ಗಾಯಕನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ.

“ದಿಲ್ಜಿತ್ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ, ಅವರು ಸಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಿರತ  ದಲ್ಲೆವಾಲ್ ಜಿ ಅವರೊಂದಿಗೆ ಜೊತೆಗೂಡಿ ನಮ್ಮೊಂದಿಗೆ ಸೇರುತ್ತಿದ್ದರು. ನಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದರು ಮತ್ತು ತಮ್ಮ ಹಿಂದಿನ ರೈತಪರ ಹೇಳಿಕೆಗಳಿಗೆ ಬದ್ಧರಾಗಿರುತ್ತಿದ್ದರು. ಬದಲಾಗಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವುದು ಅವರ ಮುಂದಿನ ಉದ್ದೇಶಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗಡಿಯಲ್ಲಿನ ರೈತ ನಾಯಕರೊಬ್ಬರು ಪ್ರಶ್ನಿಸಿದ್ದಾರೆ.

2020ರಲ್ಲಿ ದಿಲ್ಜಿತ್ ದೋಸಾಂಜ್ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಅಂದು ದಿಲ್ಜಿತ್ ದೋಸಾಂಜ್ ಅವರು ರೈತರಿಗೆ ಬೆಂಬಲವಾಗಿ Instagram ನಲ್ಲಿ ಪೋಸ್ಟ್ ಮಾಡಿದ್ದು,  ನಾವೆಲ್ಲರೂ ರೈತ ಸಮುದಾಯದೊಂದಿಗೆ ನಿಲ್ಲುತ್ತೇವೆ. ಪಂಜಾಬ್‌ನ ಎಲ್ಲಾ ವಯೋಮಾನದ ಪ್ರತಿಯೊಬ್ಬ ವ್ಯಕ್ತಿಯೂ ರೈತರೊಂದಿಗೆ ನಿಂತಿದ್ದಾರೆ. ರೈತ ವಿರೋಧಿ ಮಸೂದೆಗಳನ್ನು ಸಮರ್ಥಿಸುವ ಪ್ರತಿಯೊಬ್ಬರೂ ಕನಿಷ್ಠ ರೈತರೊಂದಿಗೆ ಮಾತನಾಡಲು ಪ್ರಯತ್ನಿಸಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ಭಾಷೆಗಳಿಂದ ಪಂಜಾಬಿ ಭಾಷೆಯನ್ನು ನಿರ್ಮೂಲನೆ ಮಾಡಲಾಗಿದೆ. ಏನಾಗುತ್ತಿದೆ? ಎಂದಿದ್ದರು.

ಇಷ್ಟರ ಮಧ್ಯೆ ಈಗ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಖಾನೂರಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ದಲ್ಲೇವಾಲ್ ಅವರನ್ನು ಬೆಂಬಲಿಸಲು ಸಾವಿರಾರು ರೈತರು, ಅನೇಕ ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪಂಜಾಬ್ ಸರ್ಕಾರವು ವೈದ್ಯಕೀಯ ಸಹಾಯವನ್ನು ನೀಡಲು ದಲ್ಲೆವಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ನಿರಾಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ದಲ್ಲೆವಾಲ್ ಅವರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಆಸ್ಪತ್ರೆಗೆ ಸಂಬಂಧಿಸಿದ ಆದೇಶಗಳನ್ನು ಅನುಸರಿಸಲು ಪಂಜಾಬ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಬುಧವಾರ ನಡೆದ ಹೊಸ ವರ್ಷದ ಸಭೆಯಲ್ಲಿ ದಿಲ್ಜಿತ್ ಅವರ ಸಾಧನೆಗಳಿಗಾಗಿ ಪ್ರಧಾನಿ ಮೋದಿಯವರು ಶ್ಲಾಘಿಸಿದರು. “ಹಿಂದೂಸ್ತಾನದ ಒಂದು ಸಣ್ಣ ಹಳ್ಳಿಯ ಹುಡುಗ ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವುದು ಅದ್ಭುತವಾಗಿದೆ. ನಿಮ್ಮ ಕುಟುಂಬವು ನಿಮಗೆ ದಿಲ್ಜಿತ್ ಎಂದು ಹೆಸರಿಸಿದೆ ಮತ್ತು ನಿಮ್ಮ ಹೆಸರೇ ಸೂಚಿಸುವಂತೆ ಜನರ ಹೃದಯವನ್ನು ಗೆಲ್ಲುವುದಕ್ಕೆ ಮುಂದುವರಿಯಿರಿ” ಎಂದು ಪ್ರಧಾನಿ ಹೇಳಿದ್ದರು.

“ನಾವು ‘ಮೇರಾ ಭಾರತ್ ಮಹಾನ್’ ಎಂದು ಶಾಲೆಗಳಲ್ಲಿ ಓದುತ್ತಿದ್ದೆವು. ಆದರೆ ನಾನು ಭಾರತದಾದ್ಯಂತ ಪ್ರಯಾಣಿಸಿದಾಗ, ಜನರು ಏಕೆ ಹೀಗೆ ಹೇಳುತ್ತಾರೆಂದು ನನಗೆ ಅರಿವಾಯಿತು” ಎಂದು ಈ ಭೇಟಿಯ ಸಮಯದಲ್ಲಿ ದಿಲ್ಜಿತ್ ಉತ್ತರಿಸಿದ್ದರು.

ಪ್ರಧಾನಿ ಮೋದಿಯವರ ವೈಯಕ್ತಿಕ ಪ್ರಯಾಣವನ್ನು ಮೆಚ್ಚಿದ ಗಾಯಕ, “ನಿಮ್ಮ ಸಂದರ್ಶನವನ್ನು ನಾನು ನೋಡಿದ್ದೇನೆ, ಪ್ರಧಾನಿ ಸ್ಥಾನ ಅದ್ಭುತವಾಗಿದೆ. ಈ ಸ್ಥಾನದ ಹಿಂದೆ ತಾಯಿ, ಮಗ ಮತ್ತು ಮನುಷ್ಯ ಇದ್ದಾರೆ. ಅನೇಕ ಬಾರಿ, ನೀವು ತಾಯಿ ಮತ್ತು ಪವಿತ್ರ ಗಂಗೆಯನ್ನು ನಿಮ್ಮೊಂದಿಗೆ ಹೊತ್ತುಕೊಂಡಾಗ ಈ ಅರ್ಧ ಸತ್ಯವು ತುಂಬಾ ವಿಶಾಲವಾಗಿದೆ. ಅದು ಹೃದಯ ಸ್ಪರ್ಶಿಯಾಗಿದೆ” ಎಂದು ಹೇಳಿದ್ದರು.

ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...