Homeಮುಖಪುಟಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

ಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

- Advertisement -
- Advertisement -

ಹೊಸದಿಲ್ಲಿ: ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಹೊಸ ವರ್ಷದ ದಿನದಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕಾಗಿ ಪ್ರತಿಭಟನಾನಿರತ ರೈತ ಮುಖಂಡರಿಂದ ತೀವ್ರ ಟೀಕೆ ವ್ಯಕ್ತವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಹಿಂದೆ ರೈತರ ಆಂದೋಲನಕ್ಕೆ ಬೆಂಬಲ ನೀಡಿದ ದಿಲ್ಜಿತ್ ದೋಸಾಂಜ್ ಅವರ ಈ ಭೇಟಿಯ ಕುರಿತು ನಿರಾಶೆಯನ್ನು ವ್ಯಕ್ತಪಡಿಸಿದ ರೈತರು, ಈ ಕಾರಣಕ್ಕಾಗಿ ರೈತ ಹೋರಾಟದ ಕುರಿತು ಗಾಯಕನ ಬದ್ಧತೆಯನ್ನು ಪ್ರಶ್ನಿಸಿದ್ದಾರೆ. ದಿಲ್ಜಿತ್ ದೋಸಾಂಜ್ ಅವರು ಮೋದಿಯೊಂದಿಗಿನ ತನ್ನ ಭೇಟಿಯನ್ನು ಹೊಸ ವರ್ಷಕ್ಕೆ “ಅದ್ಭುತ ಆರಂಭ” ಎಂದು ಬಣ್ಣಿಸಿದ್ದಾರೆ.  ಅಂತರಾಷ್ಟ್ರೀಯ ತಾರಾಪಟ್ಟಿಗೆ  ವಿನಮ್ರ  ಆರಂಭ ಎಂದು  ಪ್ರಧಾನಿಯು ಗಾಯಕನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ.

“ದಿಲ್ಜಿತ್ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ, ಅವರು ಸಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಿರತ  ದಲ್ಲೆವಾಲ್ ಜಿ ಅವರೊಂದಿಗೆ ಜೊತೆಗೂಡಿ ನಮ್ಮೊಂದಿಗೆ ಸೇರುತ್ತಿದ್ದರು. ನಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದರು ಮತ್ತು ತಮ್ಮ ಹಿಂದಿನ ರೈತಪರ ಹೇಳಿಕೆಗಳಿಗೆ ಬದ್ಧರಾಗಿರುತ್ತಿದ್ದರು. ಬದಲಾಗಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವುದು ಅವರ ಮುಂದಿನ ಉದ್ದೇಶಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗಡಿಯಲ್ಲಿನ ರೈತ ನಾಯಕರೊಬ್ಬರು ಪ್ರಶ್ನಿಸಿದ್ದಾರೆ.

2020ರಲ್ಲಿ ದಿಲ್ಜಿತ್ ದೋಸಾಂಜ್ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಅಂದು ದಿಲ್ಜಿತ್ ದೋಸಾಂಜ್ ಅವರು ರೈತರಿಗೆ ಬೆಂಬಲವಾಗಿ Instagram ನಲ್ಲಿ ಪೋಸ್ಟ್ ಮಾಡಿದ್ದು,  ನಾವೆಲ್ಲರೂ ರೈತ ಸಮುದಾಯದೊಂದಿಗೆ ನಿಲ್ಲುತ್ತೇವೆ. ಪಂಜಾಬ್‌ನ ಎಲ್ಲಾ ವಯೋಮಾನದ ಪ್ರತಿಯೊಬ್ಬ ವ್ಯಕ್ತಿಯೂ ರೈತರೊಂದಿಗೆ ನಿಂತಿದ್ದಾರೆ. ರೈತ ವಿರೋಧಿ ಮಸೂದೆಗಳನ್ನು ಸಮರ್ಥಿಸುವ ಪ್ರತಿಯೊಬ್ಬರೂ ಕನಿಷ್ಠ ರೈತರೊಂದಿಗೆ ಮಾತನಾಡಲು ಪ್ರಯತ್ನಿಸಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ಭಾಷೆಗಳಿಂದ ಪಂಜಾಬಿ ಭಾಷೆಯನ್ನು ನಿರ್ಮೂಲನೆ ಮಾಡಲಾಗಿದೆ. ಏನಾಗುತ್ತಿದೆ? ಎಂದಿದ್ದರು.

ಇಷ್ಟರ ಮಧ್ಯೆ ಈಗ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಖಾನೂರಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ದಲ್ಲೇವಾಲ್ ಅವರನ್ನು ಬೆಂಬಲಿಸಲು ಸಾವಿರಾರು ರೈತರು, ಅನೇಕ ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪಂಜಾಬ್ ಸರ್ಕಾರವು ವೈದ್ಯಕೀಯ ಸಹಾಯವನ್ನು ನೀಡಲು ದಲ್ಲೆವಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ನಿರಾಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ದಲ್ಲೆವಾಲ್ ಅವರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಆಸ್ಪತ್ರೆಗೆ ಸಂಬಂಧಿಸಿದ ಆದೇಶಗಳನ್ನು ಅನುಸರಿಸಲು ಪಂಜಾಬ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಬುಧವಾರ ನಡೆದ ಹೊಸ ವರ್ಷದ ಸಭೆಯಲ್ಲಿ ದಿಲ್ಜಿತ್ ಅವರ ಸಾಧನೆಗಳಿಗಾಗಿ ಪ್ರಧಾನಿ ಮೋದಿಯವರು ಶ್ಲಾಘಿಸಿದರು. “ಹಿಂದೂಸ್ತಾನದ ಒಂದು ಸಣ್ಣ ಹಳ್ಳಿಯ ಹುಡುಗ ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವುದು ಅದ್ಭುತವಾಗಿದೆ. ನಿಮ್ಮ ಕುಟುಂಬವು ನಿಮಗೆ ದಿಲ್ಜಿತ್ ಎಂದು ಹೆಸರಿಸಿದೆ ಮತ್ತು ನಿಮ್ಮ ಹೆಸರೇ ಸೂಚಿಸುವಂತೆ ಜನರ ಹೃದಯವನ್ನು ಗೆಲ್ಲುವುದಕ್ಕೆ ಮುಂದುವರಿಯಿರಿ” ಎಂದು ಪ್ರಧಾನಿ ಹೇಳಿದ್ದರು.

“ನಾವು ‘ಮೇರಾ ಭಾರತ್ ಮಹಾನ್’ ಎಂದು ಶಾಲೆಗಳಲ್ಲಿ ಓದುತ್ತಿದ್ದೆವು. ಆದರೆ ನಾನು ಭಾರತದಾದ್ಯಂತ ಪ್ರಯಾಣಿಸಿದಾಗ, ಜನರು ಏಕೆ ಹೀಗೆ ಹೇಳುತ್ತಾರೆಂದು ನನಗೆ ಅರಿವಾಯಿತು” ಎಂದು ಈ ಭೇಟಿಯ ಸಮಯದಲ್ಲಿ ದಿಲ್ಜಿತ್ ಉತ್ತರಿಸಿದ್ದರು.

ಪ್ರಧಾನಿ ಮೋದಿಯವರ ವೈಯಕ್ತಿಕ ಪ್ರಯಾಣವನ್ನು ಮೆಚ್ಚಿದ ಗಾಯಕ, “ನಿಮ್ಮ ಸಂದರ್ಶನವನ್ನು ನಾನು ನೋಡಿದ್ದೇನೆ, ಪ್ರಧಾನಿ ಸ್ಥಾನ ಅದ್ಭುತವಾಗಿದೆ. ಈ ಸ್ಥಾನದ ಹಿಂದೆ ತಾಯಿ, ಮಗ ಮತ್ತು ಮನುಷ್ಯ ಇದ್ದಾರೆ. ಅನೇಕ ಬಾರಿ, ನೀವು ತಾಯಿ ಮತ್ತು ಪವಿತ್ರ ಗಂಗೆಯನ್ನು ನಿಮ್ಮೊಂದಿಗೆ ಹೊತ್ತುಕೊಂಡಾಗ ಈ ಅರ್ಧ ಸತ್ಯವು ತುಂಬಾ ವಿಶಾಲವಾಗಿದೆ. ಅದು ಹೃದಯ ಸ್ಪರ್ಶಿಯಾಗಿದೆ” ಎಂದು ಹೇಳಿದ್ದರು.

ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...