Homeಮುಖಪುಟಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

ಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

- Advertisement -
- Advertisement -

ಹೊಸದಿಲ್ಲಿ: ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಹೊಸ ವರ್ಷದ ದಿನದಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕಾಗಿ ಪ್ರತಿಭಟನಾನಿರತ ರೈತ ಮುಖಂಡರಿಂದ ತೀವ್ರ ಟೀಕೆ ವ್ಯಕ್ತವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಹಿಂದೆ ರೈತರ ಆಂದೋಲನಕ್ಕೆ ಬೆಂಬಲ ನೀಡಿದ ದಿಲ್ಜಿತ್ ದೋಸಾಂಜ್ ಅವರ ಈ ಭೇಟಿಯ ಕುರಿತು ನಿರಾಶೆಯನ್ನು ವ್ಯಕ್ತಪಡಿಸಿದ ರೈತರು, ಈ ಕಾರಣಕ್ಕಾಗಿ ರೈತ ಹೋರಾಟದ ಕುರಿತು ಗಾಯಕನ ಬದ್ಧತೆಯನ್ನು ಪ್ರಶ್ನಿಸಿದ್ದಾರೆ. ದಿಲ್ಜಿತ್ ದೋಸಾಂಜ್ ಅವರು ಮೋದಿಯೊಂದಿಗಿನ ತನ್ನ ಭೇಟಿಯನ್ನು ಹೊಸ ವರ್ಷಕ್ಕೆ “ಅದ್ಭುತ ಆರಂಭ” ಎಂದು ಬಣ್ಣಿಸಿದ್ದಾರೆ.  ಅಂತರಾಷ್ಟ್ರೀಯ ತಾರಾಪಟ್ಟಿಗೆ  ವಿನಮ್ರ  ಆರಂಭ ಎಂದು  ಪ್ರಧಾನಿಯು ಗಾಯಕನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ.

“ದಿಲ್ಜಿತ್ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ, ಅವರು ಸಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಿರತ  ದಲ್ಲೆವಾಲ್ ಜಿ ಅವರೊಂದಿಗೆ ಜೊತೆಗೂಡಿ ನಮ್ಮೊಂದಿಗೆ ಸೇರುತ್ತಿದ್ದರು. ನಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದರು ಮತ್ತು ತಮ್ಮ ಹಿಂದಿನ ರೈತಪರ ಹೇಳಿಕೆಗಳಿಗೆ ಬದ್ಧರಾಗಿರುತ್ತಿದ್ದರು. ಬದಲಾಗಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವುದು ಅವರ ಮುಂದಿನ ಉದ್ದೇಶಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗಡಿಯಲ್ಲಿನ ರೈತ ನಾಯಕರೊಬ್ಬರು ಪ್ರಶ್ನಿಸಿದ್ದಾರೆ.

2020ರಲ್ಲಿ ದಿಲ್ಜಿತ್ ದೋಸಾಂಜ್ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಅಂದು ದಿಲ್ಜಿತ್ ದೋಸಾಂಜ್ ಅವರು ರೈತರಿಗೆ ಬೆಂಬಲವಾಗಿ Instagram ನಲ್ಲಿ ಪೋಸ್ಟ್ ಮಾಡಿದ್ದು,  ನಾವೆಲ್ಲರೂ ರೈತ ಸಮುದಾಯದೊಂದಿಗೆ ನಿಲ್ಲುತ್ತೇವೆ. ಪಂಜಾಬ್‌ನ ಎಲ್ಲಾ ವಯೋಮಾನದ ಪ್ರತಿಯೊಬ್ಬ ವ್ಯಕ್ತಿಯೂ ರೈತರೊಂದಿಗೆ ನಿಂತಿದ್ದಾರೆ. ರೈತ ವಿರೋಧಿ ಮಸೂದೆಗಳನ್ನು ಸಮರ್ಥಿಸುವ ಪ್ರತಿಯೊಬ್ಬರೂ ಕನಿಷ್ಠ ರೈತರೊಂದಿಗೆ ಮಾತನಾಡಲು ಪ್ರಯತ್ನಿಸಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ಭಾಷೆಗಳಿಂದ ಪಂಜಾಬಿ ಭಾಷೆಯನ್ನು ನಿರ್ಮೂಲನೆ ಮಾಡಲಾಗಿದೆ. ಏನಾಗುತ್ತಿದೆ? ಎಂದಿದ್ದರು.

ಇಷ್ಟರ ಮಧ್ಯೆ ಈಗ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಖಾನೂರಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ದಲ್ಲೇವಾಲ್ ಅವರನ್ನು ಬೆಂಬಲಿಸಲು ಸಾವಿರಾರು ರೈತರು, ಅನೇಕ ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪಂಜಾಬ್ ಸರ್ಕಾರವು ವೈದ್ಯಕೀಯ ಸಹಾಯವನ್ನು ನೀಡಲು ದಲ್ಲೆವಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ನಿರಾಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ದಲ್ಲೆವಾಲ್ ಅವರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಆಸ್ಪತ್ರೆಗೆ ಸಂಬಂಧಿಸಿದ ಆದೇಶಗಳನ್ನು ಅನುಸರಿಸಲು ಪಂಜಾಬ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಬುಧವಾರ ನಡೆದ ಹೊಸ ವರ್ಷದ ಸಭೆಯಲ್ಲಿ ದಿಲ್ಜಿತ್ ಅವರ ಸಾಧನೆಗಳಿಗಾಗಿ ಪ್ರಧಾನಿ ಮೋದಿಯವರು ಶ್ಲಾಘಿಸಿದರು. “ಹಿಂದೂಸ್ತಾನದ ಒಂದು ಸಣ್ಣ ಹಳ್ಳಿಯ ಹುಡುಗ ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವುದು ಅದ್ಭುತವಾಗಿದೆ. ನಿಮ್ಮ ಕುಟುಂಬವು ನಿಮಗೆ ದಿಲ್ಜಿತ್ ಎಂದು ಹೆಸರಿಸಿದೆ ಮತ್ತು ನಿಮ್ಮ ಹೆಸರೇ ಸೂಚಿಸುವಂತೆ ಜನರ ಹೃದಯವನ್ನು ಗೆಲ್ಲುವುದಕ್ಕೆ ಮುಂದುವರಿಯಿರಿ” ಎಂದು ಪ್ರಧಾನಿ ಹೇಳಿದ್ದರು.

“ನಾವು ‘ಮೇರಾ ಭಾರತ್ ಮಹಾನ್’ ಎಂದು ಶಾಲೆಗಳಲ್ಲಿ ಓದುತ್ತಿದ್ದೆವು. ಆದರೆ ನಾನು ಭಾರತದಾದ್ಯಂತ ಪ್ರಯಾಣಿಸಿದಾಗ, ಜನರು ಏಕೆ ಹೀಗೆ ಹೇಳುತ್ತಾರೆಂದು ನನಗೆ ಅರಿವಾಯಿತು” ಎಂದು ಈ ಭೇಟಿಯ ಸಮಯದಲ್ಲಿ ದಿಲ್ಜಿತ್ ಉತ್ತರಿಸಿದ್ದರು.

ಪ್ರಧಾನಿ ಮೋದಿಯವರ ವೈಯಕ್ತಿಕ ಪ್ರಯಾಣವನ್ನು ಮೆಚ್ಚಿದ ಗಾಯಕ, “ನಿಮ್ಮ ಸಂದರ್ಶನವನ್ನು ನಾನು ನೋಡಿದ್ದೇನೆ, ಪ್ರಧಾನಿ ಸ್ಥಾನ ಅದ್ಭುತವಾಗಿದೆ. ಈ ಸ್ಥಾನದ ಹಿಂದೆ ತಾಯಿ, ಮಗ ಮತ್ತು ಮನುಷ್ಯ ಇದ್ದಾರೆ. ಅನೇಕ ಬಾರಿ, ನೀವು ತಾಯಿ ಮತ್ತು ಪವಿತ್ರ ಗಂಗೆಯನ್ನು ನಿಮ್ಮೊಂದಿಗೆ ಹೊತ್ತುಕೊಂಡಾಗ ಈ ಅರ್ಧ ಸತ್ಯವು ತುಂಬಾ ವಿಶಾಲವಾಗಿದೆ. ಅದು ಹೃದಯ ಸ್ಪರ್ಶಿಯಾಗಿದೆ” ಎಂದು ಹೇಳಿದ್ದರು.

ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...