Homeಮುಖಪುಟಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

ಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

- Advertisement -
- Advertisement -

ಹೊಸದಿಲ್ಲಿ: ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಹೊಸ ವರ್ಷದ ದಿನದಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕಾಗಿ ಪ್ರತಿಭಟನಾನಿರತ ರೈತ ಮುಖಂಡರಿಂದ ತೀವ್ರ ಟೀಕೆ ವ್ಯಕ್ತವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಹಿಂದೆ ರೈತರ ಆಂದೋಲನಕ್ಕೆ ಬೆಂಬಲ ನೀಡಿದ ದಿಲ್ಜಿತ್ ದೋಸಾಂಜ್ ಅವರ ಈ ಭೇಟಿಯ ಕುರಿತು ನಿರಾಶೆಯನ್ನು ವ್ಯಕ್ತಪಡಿಸಿದ ರೈತರು, ಈ ಕಾರಣಕ್ಕಾಗಿ ರೈತ ಹೋರಾಟದ ಕುರಿತು ಗಾಯಕನ ಬದ್ಧತೆಯನ್ನು ಪ್ರಶ್ನಿಸಿದ್ದಾರೆ. ದಿಲ್ಜಿತ್ ದೋಸಾಂಜ್ ಅವರು ಮೋದಿಯೊಂದಿಗಿನ ತನ್ನ ಭೇಟಿಯನ್ನು ಹೊಸ ವರ್ಷಕ್ಕೆ “ಅದ್ಭುತ ಆರಂಭ” ಎಂದು ಬಣ್ಣಿಸಿದ್ದಾರೆ.  ಅಂತರಾಷ್ಟ್ರೀಯ ತಾರಾಪಟ್ಟಿಗೆ  ವಿನಮ್ರ  ಆರಂಭ ಎಂದು  ಪ್ರಧಾನಿಯು ಗಾಯಕನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ.

“ದಿಲ್ಜಿತ್ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ, ಅವರು ಸಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಿರತ  ದಲ್ಲೆವಾಲ್ ಜಿ ಅವರೊಂದಿಗೆ ಜೊತೆಗೂಡಿ ನಮ್ಮೊಂದಿಗೆ ಸೇರುತ್ತಿದ್ದರು. ನಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದರು ಮತ್ತು ತಮ್ಮ ಹಿಂದಿನ ರೈತಪರ ಹೇಳಿಕೆಗಳಿಗೆ ಬದ್ಧರಾಗಿರುತ್ತಿದ್ದರು. ಬದಲಾಗಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವುದು ಅವರ ಮುಂದಿನ ಉದ್ದೇಶಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗಡಿಯಲ್ಲಿನ ರೈತ ನಾಯಕರೊಬ್ಬರು ಪ್ರಶ್ನಿಸಿದ್ದಾರೆ.

2020ರಲ್ಲಿ ದಿಲ್ಜಿತ್ ದೋಸಾಂಜ್ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಅಂದು ದಿಲ್ಜಿತ್ ದೋಸಾಂಜ್ ಅವರು ರೈತರಿಗೆ ಬೆಂಬಲವಾಗಿ Instagram ನಲ್ಲಿ ಪೋಸ್ಟ್ ಮಾಡಿದ್ದು,  ನಾವೆಲ್ಲರೂ ರೈತ ಸಮುದಾಯದೊಂದಿಗೆ ನಿಲ್ಲುತ್ತೇವೆ. ಪಂಜಾಬ್‌ನ ಎಲ್ಲಾ ವಯೋಮಾನದ ಪ್ರತಿಯೊಬ್ಬ ವ್ಯಕ್ತಿಯೂ ರೈತರೊಂದಿಗೆ ನಿಂತಿದ್ದಾರೆ. ರೈತ ವಿರೋಧಿ ಮಸೂದೆಗಳನ್ನು ಸಮರ್ಥಿಸುವ ಪ್ರತಿಯೊಬ್ಬರೂ ಕನಿಷ್ಠ ರೈತರೊಂದಿಗೆ ಮಾತನಾಡಲು ಪ್ರಯತ್ನಿಸಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ಭಾಷೆಗಳಿಂದ ಪಂಜಾಬಿ ಭಾಷೆಯನ್ನು ನಿರ್ಮೂಲನೆ ಮಾಡಲಾಗಿದೆ. ಏನಾಗುತ್ತಿದೆ? ಎಂದಿದ್ದರು.

ಇಷ್ಟರ ಮಧ್ಯೆ ಈಗ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಖಾನೂರಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ದಲ್ಲೇವಾಲ್ ಅವರನ್ನು ಬೆಂಬಲಿಸಲು ಸಾವಿರಾರು ರೈತರು, ಅನೇಕ ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪಂಜಾಬ್ ಸರ್ಕಾರವು ವೈದ್ಯಕೀಯ ಸಹಾಯವನ್ನು ನೀಡಲು ದಲ್ಲೆವಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ನಿರಾಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ದಲ್ಲೆವಾಲ್ ಅವರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಆಸ್ಪತ್ರೆಗೆ ಸಂಬಂಧಿಸಿದ ಆದೇಶಗಳನ್ನು ಅನುಸರಿಸಲು ಪಂಜಾಬ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಬುಧವಾರ ನಡೆದ ಹೊಸ ವರ್ಷದ ಸಭೆಯಲ್ಲಿ ದಿಲ್ಜಿತ್ ಅವರ ಸಾಧನೆಗಳಿಗಾಗಿ ಪ್ರಧಾನಿ ಮೋದಿಯವರು ಶ್ಲಾಘಿಸಿದರು. “ಹಿಂದೂಸ್ತಾನದ ಒಂದು ಸಣ್ಣ ಹಳ್ಳಿಯ ಹುಡುಗ ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವುದು ಅದ್ಭುತವಾಗಿದೆ. ನಿಮ್ಮ ಕುಟುಂಬವು ನಿಮಗೆ ದಿಲ್ಜಿತ್ ಎಂದು ಹೆಸರಿಸಿದೆ ಮತ್ತು ನಿಮ್ಮ ಹೆಸರೇ ಸೂಚಿಸುವಂತೆ ಜನರ ಹೃದಯವನ್ನು ಗೆಲ್ಲುವುದಕ್ಕೆ ಮುಂದುವರಿಯಿರಿ” ಎಂದು ಪ್ರಧಾನಿ ಹೇಳಿದ್ದರು.

“ನಾವು ‘ಮೇರಾ ಭಾರತ್ ಮಹಾನ್’ ಎಂದು ಶಾಲೆಗಳಲ್ಲಿ ಓದುತ್ತಿದ್ದೆವು. ಆದರೆ ನಾನು ಭಾರತದಾದ್ಯಂತ ಪ್ರಯಾಣಿಸಿದಾಗ, ಜನರು ಏಕೆ ಹೀಗೆ ಹೇಳುತ್ತಾರೆಂದು ನನಗೆ ಅರಿವಾಯಿತು” ಎಂದು ಈ ಭೇಟಿಯ ಸಮಯದಲ್ಲಿ ದಿಲ್ಜಿತ್ ಉತ್ತರಿಸಿದ್ದರು.

ಪ್ರಧಾನಿ ಮೋದಿಯವರ ವೈಯಕ್ತಿಕ ಪ್ರಯಾಣವನ್ನು ಮೆಚ್ಚಿದ ಗಾಯಕ, “ನಿಮ್ಮ ಸಂದರ್ಶನವನ್ನು ನಾನು ನೋಡಿದ್ದೇನೆ, ಪ್ರಧಾನಿ ಸ್ಥಾನ ಅದ್ಭುತವಾಗಿದೆ. ಈ ಸ್ಥಾನದ ಹಿಂದೆ ತಾಯಿ, ಮಗ ಮತ್ತು ಮನುಷ್ಯ ಇದ್ದಾರೆ. ಅನೇಕ ಬಾರಿ, ನೀವು ತಾಯಿ ಮತ್ತು ಪವಿತ್ರ ಗಂಗೆಯನ್ನು ನಿಮ್ಮೊಂದಿಗೆ ಹೊತ್ತುಕೊಂಡಾಗ ಈ ಅರ್ಧ ಸತ್ಯವು ತುಂಬಾ ವಿಶಾಲವಾಗಿದೆ. ಅದು ಹೃದಯ ಸ್ಪರ್ಶಿಯಾಗಿದೆ” ಎಂದು ಹೇಳಿದ್ದರು.

ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...