Homeಮುಖಪುಟಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

ಹೊಸ ವರ್ಷಕ್ಕೆ ಮೋದಿ ಭೇಟಿಯಾದ ಪಂಜಾಬಿ ಗಾಯಕ ದಿಲ್ಜಿತ್: ಪ್ರತಿಭಟನಾನಿರತ ರೈತ ಮುಖಂಡರ ಛೀಮಾರಿ

- Advertisement -
- Advertisement -

ಹೊಸದಿಲ್ಲಿ: ಪಂಜಾಬಿ ಗಾಯಕ ಮತ್ತು ನಟ ದಿಲ್ಜಿತ್ ದೋಸಾಂಜ್ ಅವರು ಹೊಸ ವರ್ಷದ ದಿನದಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಕ್ಕಾಗಿ ಪ್ರತಿಭಟನಾನಿರತ ರೈತ ಮುಖಂಡರಿಂದ ತೀವ್ರ ಟೀಕೆ ವ್ಯಕ್ತವಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಈ ಹಿಂದೆ ರೈತರ ಆಂದೋಲನಕ್ಕೆ ಬೆಂಬಲ ನೀಡಿದ ದಿಲ್ಜಿತ್ ದೋಸಾಂಜ್ ಅವರ ಈ ಭೇಟಿಯ ಕುರಿತು ನಿರಾಶೆಯನ್ನು ವ್ಯಕ್ತಪಡಿಸಿದ ರೈತರು, ಈ ಕಾರಣಕ್ಕಾಗಿ ರೈತ ಹೋರಾಟದ ಕುರಿತು ಗಾಯಕನ ಬದ್ಧತೆಯನ್ನು ಪ್ರಶ್ನಿಸಿದ್ದಾರೆ. ದಿಲ್ಜಿತ್ ದೋಸಾಂಜ್ ಅವರು ಮೋದಿಯೊಂದಿಗಿನ ತನ್ನ ಭೇಟಿಯನ್ನು ಹೊಸ ವರ್ಷಕ್ಕೆ “ಅದ್ಭುತ ಆರಂಭ” ಎಂದು ಬಣ್ಣಿಸಿದ್ದಾರೆ.  ಅಂತರಾಷ್ಟ್ರೀಯ ತಾರಾಪಟ್ಟಿಗೆ  ವಿನಮ್ರ  ಆರಂಭ ಎಂದು  ಪ್ರಧಾನಿಯು ಗಾಯಕನ ಬೆಳವಣಿಗೆಯನ್ನು ಶ್ಲಾಘಿಸಿದ್ದಾರೆ.

“ದಿಲ್ಜಿತ್ ಅವರಿಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದಿದ್ದರೆ, ಅವರು ಸಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಿರತ  ದಲ್ಲೆವಾಲ್ ಜಿ ಅವರೊಂದಿಗೆ ಜೊತೆಗೂಡಿ ನಮ್ಮೊಂದಿಗೆ ಸೇರುತ್ತಿದ್ದರು. ನಮ್ಮ ಸಮಸ್ಯೆಗಳನ್ನು ಆಲಿಸುತ್ತಿದ್ದರು ಮತ್ತು ತಮ್ಮ ಹಿಂದಿನ ರೈತಪರ ಹೇಳಿಕೆಗಳಿಗೆ ಬದ್ಧರಾಗಿರುತ್ತಿದ್ದರು. ಬದಲಾಗಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿರುವುದು ಅವರ ಮುಂದಿನ ಉದ್ದೇಶಗಳ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಗಡಿಯಲ್ಲಿನ ರೈತ ನಾಯಕರೊಬ್ಬರು ಪ್ರಶ್ನಿಸಿದ್ದಾರೆ.

2020ರಲ್ಲಿ ದಿಲ್ಜಿತ್ ದೋಸಾಂಜ್ ರೈತರ ಪ್ರತಿಭಟನೆಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು. ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿದ್ದರು.

ಅಂದು ದಿಲ್ಜಿತ್ ದೋಸಾಂಜ್ ಅವರು ರೈತರಿಗೆ ಬೆಂಬಲವಾಗಿ Instagram ನಲ್ಲಿ ಪೋಸ್ಟ್ ಮಾಡಿದ್ದು,  ನಾವೆಲ್ಲರೂ ರೈತ ಸಮುದಾಯದೊಂದಿಗೆ ನಿಲ್ಲುತ್ತೇವೆ. ಪಂಜಾಬ್‌ನ ಎಲ್ಲಾ ವಯೋಮಾನದ ಪ್ರತಿಯೊಬ್ಬ ವ್ಯಕ್ತಿಯೂ ರೈತರೊಂದಿಗೆ ನಿಂತಿದ್ದಾರೆ. ರೈತ ವಿರೋಧಿ ಮಸೂದೆಗಳನ್ನು ಸಮರ್ಥಿಸುವ ಪ್ರತಿಯೊಬ್ಬರೂ ಕನಿಷ್ಠ ರೈತರೊಂದಿಗೆ ಮಾತನಾಡಲು ಪ್ರಯತ್ನಿಸಿ. ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರಿ ಭಾಷೆಗಳಿಂದ ಪಂಜಾಬಿ ಭಾಷೆಯನ್ನು ನಿರ್ಮೂಲನೆ ಮಾಡಲಾಗಿದೆ. ಏನಾಗುತ್ತಿದೆ? ಎಂದಿದ್ದರು.

ಇಷ್ಟರ ಮಧ್ಯೆ ಈಗ ರೈತರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಪಟ್ಟು ಹಿಡಿದಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಚಾಲಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಖಾನೂರಿ ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಹಲವು ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಿದ್ದಾರೆ.

ದಲ್ಲೇವಾಲ್ ಅವರನ್ನು ಬೆಂಬಲಿಸಲು ಸಾವಿರಾರು ರೈತರು, ಅನೇಕ ಟ್ರ್ಯಾಕ್ಟರ್-ಟ್ರಾಲಿಗಳೊಂದಿಗೆ ಖಾನೌರಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಪಂಜಾಬ್ ಸರ್ಕಾರವು ವೈದ್ಯಕೀಯ ಸಹಾಯವನ್ನು ನೀಡಲು ದಲ್ಲೆವಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರೂ, ಅವರು ನಿರಾಕರಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ, ದಲ್ಲೆವಾಲ್ ಅವರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರ ಆಸ್ಪತ್ರೆಗೆ ಸಂಬಂಧಿಸಿದ ಆದೇಶಗಳನ್ನು ಅನುಸರಿಸಲು ಪಂಜಾಬ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಬುಧವಾರ ನಡೆದ ಹೊಸ ವರ್ಷದ ಸಭೆಯಲ್ಲಿ ದಿಲ್ಜಿತ್ ಅವರ ಸಾಧನೆಗಳಿಗಾಗಿ ಪ್ರಧಾನಿ ಮೋದಿಯವರು ಶ್ಲಾಘಿಸಿದರು. “ಹಿಂದೂಸ್ತಾನದ ಒಂದು ಸಣ್ಣ ಹಳ್ಳಿಯ ಹುಡುಗ ಜಾಗತಿಕ ವೇದಿಕೆಯಲ್ಲಿ ಮಿಂಚುತ್ತಿರುವುದು ಅದ್ಭುತವಾಗಿದೆ. ನಿಮ್ಮ ಕುಟುಂಬವು ನಿಮಗೆ ದಿಲ್ಜಿತ್ ಎಂದು ಹೆಸರಿಸಿದೆ ಮತ್ತು ನಿಮ್ಮ ಹೆಸರೇ ಸೂಚಿಸುವಂತೆ ಜನರ ಹೃದಯವನ್ನು ಗೆಲ್ಲುವುದಕ್ಕೆ ಮುಂದುವರಿಯಿರಿ” ಎಂದು ಪ್ರಧಾನಿ ಹೇಳಿದ್ದರು.

“ನಾವು ‘ಮೇರಾ ಭಾರತ್ ಮಹಾನ್’ ಎಂದು ಶಾಲೆಗಳಲ್ಲಿ ಓದುತ್ತಿದ್ದೆವು. ಆದರೆ ನಾನು ಭಾರತದಾದ್ಯಂತ ಪ್ರಯಾಣಿಸಿದಾಗ, ಜನರು ಏಕೆ ಹೀಗೆ ಹೇಳುತ್ತಾರೆಂದು ನನಗೆ ಅರಿವಾಯಿತು” ಎಂದು ಈ ಭೇಟಿಯ ಸಮಯದಲ್ಲಿ ದಿಲ್ಜಿತ್ ಉತ್ತರಿಸಿದ್ದರು.

ಪ್ರಧಾನಿ ಮೋದಿಯವರ ವೈಯಕ್ತಿಕ ಪ್ರಯಾಣವನ್ನು ಮೆಚ್ಚಿದ ಗಾಯಕ, “ನಿಮ್ಮ ಸಂದರ್ಶನವನ್ನು ನಾನು ನೋಡಿದ್ದೇನೆ, ಪ್ರಧಾನಿ ಸ್ಥಾನ ಅದ್ಭುತವಾಗಿದೆ. ಈ ಸ್ಥಾನದ ಹಿಂದೆ ತಾಯಿ, ಮಗ ಮತ್ತು ಮನುಷ್ಯ ಇದ್ದಾರೆ. ಅನೇಕ ಬಾರಿ, ನೀವು ತಾಯಿ ಮತ್ತು ಪವಿತ್ರ ಗಂಗೆಯನ್ನು ನಿಮ್ಮೊಂದಿಗೆ ಹೊತ್ತುಕೊಂಡಾಗ ಈ ಅರ್ಧ ಸತ್ಯವು ತುಂಬಾ ವಿಶಾಲವಾಗಿದೆ. ಅದು ಹೃದಯ ಸ್ಪರ್ಶಿಯಾಗಿದೆ” ಎಂದು ಹೇಳಿದ್ದರು.

ಹಿಂಪಡೆದ ರೈತ ವಿರೋಧಿ ಕೃಷಿ ಕಾನೂನನ್ನು ‘ನೀತಿಗಳು’ ಎಂಬ ಹೆಸರಿನಲ್ಲಿ ಮತ್ತೆ ತರಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...