Homeಮುಖಪುಟಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

"ಯಾರನ್ನೂ ನೋಯಿಸುವ ಉದ್ದೇಶದಿಂದ ಆ ಹೇಳಿಕೆ ನೀಡಿಲ್ಲ. ನನಗೆ ಹಲವಾರು ಪಂಜಾಬಿ ಮತ್ತು ಜಾಟ್‌ ಸ್ನೇಹಿತರಿದ್ದಾರೆ. ಅವರುಗಳ ಸಾಧನೆಗಾಗಿ ಹೆಮ್ಮೆ ಇದೆ"

- Advertisement -
- Advertisement -

“ಎಲ್ಲರಿಗೂ ಗೊತ್ತಿರುವಂತೆ ಬಂಗಾಳಿಗಳು ಅತಿ ಬುದ್ಧಿವಂತರು. ಪಂಜಾಬಿಗಳು ಮತ್ತು ಜಾಟ್‌ಗಳು ಕೇವಲ ದೈಹಿಕವಾಗಿ ಮಾತ್ರ ಶಕ್ತರು, ಅವರಿಗೆ ಮಿದುಳಿಲ್ಲ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ತ್ರಿಪುರದ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ತನ್ನ ಹೇಳಿಕೆಗಾಗಿ ಕ್ಷಮೆ ಕೇಳಿದ್ದಾರೆ.

ಇಂದು ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ ಅವರು “ಯಾರನ್ನೂ ನೋಯಿಸುವ ಉದ್ದೇಶದಿಂದ ಆ ಹೇಳಿಕೆ ನೀಡಿಲ್ಲ. ನನಗೆ ಹಲವಾರು ಪಂಜಾಬಿ ಮತ್ತು ಜಾಟ್‌ ಸ್ನೇಹಿತರಿದ್ದಾರೆ. ಅವರುಗಳ ಸಾಧನೆಗಾಗಿ ಹೆಮ್ಮೆ ಇದೆ” ಎಂದು ಬರೆದುಕೊಂಡಿದ್ದಾರೆ.

“ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಜಾಬಿ ಮತ್ತು ಜಾಟ್ ಸಮುದಾಯಗಳ ಕೊಡುಗೆಗಳನ್ನು ನಾನು ಯಾವಾಗಲೂ ಸ್ಮರಿಸುತ್ತೇನೆ. ಭಾರತವನ್ನು ಮುನ್ನಡೆಸುವಲ್ಲಿ ಈ ಎರಡು ಸಮುದಾಯಗಳು ವಹಿಸಿರುವ ಪಾತ್ರದ ಬಗ್ಗೆ ಪ್ರಶ್ನೆ ಎತ್ತುವುದನ್ನು ನಾನು ಊಹಿಸಲೂ ಸಾಧ್ಯವಿಲ್ಲ” ಎಂದು ದೇಬ್‌ ಟ್ವೀಟ್ ಮಾಡಿದ್ದಾರೆ.

“ಕೆಲವು ಜನರು ಅವರ ಬಗ್ಗೆ ಹೊಂದಿರುವ ಅಭಿಪ್ರಾಯಗಳನ್ನು ನಾನು ವ್ಯಕ್ತಪಡಿಸಿದ್ದೇನೆ. ನಾನು ಪಂಜಾಬಿ ಮತ್ತು ಜಾಟ್ ಸಮುದಾಯಗಳ ಬಗ್ಗೆ ಹೆಮ್ಮೆಪಡುತ್ತೇನೆ. ನಾನು ಅವರ ನಡುವೆ ಸ್ವಲ್ಪ ಸಮಯದವರೆಗೆ ವಾಸಿಸಿದ್ದೇನೆ. ನನ್ನ ಹೇಳಿಕೆಯು ಯಾರೊಬ್ಬರ ಭಾವನೆಗಳಿಗೆ ನೋವುಂಟು ಮಾಡಿದರೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ”ಎಂದು ಅವರು ತಿಳಿಸಿದ್ದಾರೆ.

ಭಾನುವಾರ ಅಗರ್ತಲಾದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಬುದ್ಧಿವಂತಿಕೆಯ ವಿಚಾರದಲ್ಲಿ ಬಂಗಾಳಿಗಳಿಗೆ ಯಾರೂ ಸಾಟಿಯಾಗಲಾರರು. ಎಲ್ಲರಿಗೂ ತಿಳಿದಿರುವಂತೆ ಬಂಗಾಳಿಗಳು ಅತೀ ಬುದ್ಧಿವಂತರು. ಇದೇ ಅವರ ಗುರುತಾಗಿದೆ, ಆದರೆ ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಸಮರ್ಥರು’ ಆದರೆ ಅವರಿಗೆ ಮೆದುಳಿಲ್ಲ’ ಎಂದು ಹೇಳಿದ್ದರು.

ಸಾಮಾನ್ಯವಾಗಿ ಮಾತನಾಡುವಾಗ ಪಂಜಾಬ್‌ ಜನರನ್ನು ಪಂಜಾಬಿ, ಸರ್ದಾರ್ ಎಂದು ಹೇಳುತ್ತೇವೆ. ಅವರನ್ನು ದೈಹಿಕ ಸಾಮರ್ಥ್ಯದಿಂದ ಯಾರೊಬ್ಬರೂ ಗೆಲ್ಲಲಾಗುವುದಿಲ್ಲ. ಆದರೆ ಅವರು ಬುದ್ಧಿಹೀನರು. ಹರಿಯಾಣದಲ್ಲಿ ಜಾಟ್‌ಗಳು ಹೆಚ್ಚಾಗಿದ್ದಾರೆ. ಅಲ್ಲಿನ ಜನರು ಅವರ ಕುರಿತು ‘ಇವರು ದೈಹಿಕವಾಗಿ ಆರೋಗ್ಯವಂತರು. ಆದರೆ ಬುದ್ಧಿಹೀನರು’ ಎನ್ನುತ್ತಾರೆ. ಯಾರಾದರೂ ಜಾಟ್‌ರನ್ನು ಎದುರಿಸಬೇಕಾದರೆ ಅವರ ಮನೆಯಿಂದ ಗನ್ ತರಬೇಕಾಗುತ್ತದೆ ಎಂದು ಬಿಪ್ಲಬ್ ಹೇಳಿದ್ದಾರೆ.

ಬಿಪ್ಲಬ್‌ ದೇಬ್‌ರವರ ಈ ವಿವಾದಾತ್ಮಕ ಹೇಳಿಕೆಗೆ ಪ್ರಬಲ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆಯನ್ನು ಖಂಡಿಸಿ, ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ಬಿಪ್ಲಬ್ ದೇಬ್ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...