Homeಮುಖಪುಟಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

"ಯಾರನ್ನೂ ನೋಯಿಸುವ ಉದ್ದೇಶದಿಂದ ಆ ಹೇಳಿಕೆ ನೀಡಿಲ್ಲ. ನನಗೆ ಹಲವಾರು ಪಂಜಾಬಿ ಮತ್ತು ಜಾಟ್‌ ಸ್ನೇಹಿತರಿದ್ದಾರೆ. ಅವರುಗಳ ಸಾಧನೆಗಾಗಿ ಹೆಮ್ಮೆ ಇದೆ"

- Advertisement -
- Advertisement -

“ಎಲ್ಲರಿಗೂ ಗೊತ್ತಿರುವಂತೆ ಬಂಗಾಳಿಗಳು ಅತಿ ಬುದ್ಧಿವಂತರು. ಪಂಜಾಬಿಗಳು ಮತ್ತು ಜಾಟ್‌ಗಳು ಕೇವಲ ದೈಹಿಕವಾಗಿ ಮಾತ್ರ ಶಕ್ತರು, ಅವರಿಗೆ ಮಿದುಳಿಲ್ಲ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ತ್ರಿಪುರದ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ತನ್ನ ಹೇಳಿಕೆಗಾಗಿ ಕ್ಷಮೆ ಕೇಳಿದ್ದಾರೆ.

ಇಂದು ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ ಅವರು “ಯಾರನ್ನೂ ನೋಯಿಸುವ ಉದ್ದೇಶದಿಂದ ಆ ಹೇಳಿಕೆ ನೀಡಿಲ್ಲ. ನನಗೆ ಹಲವಾರು ಪಂಜಾಬಿ ಮತ್ತು ಜಾಟ್‌ ಸ್ನೇಹಿತರಿದ್ದಾರೆ. ಅವರುಗಳ ಸಾಧನೆಗಾಗಿ ಹೆಮ್ಮೆ ಇದೆ” ಎಂದು ಬರೆದುಕೊಂಡಿದ್ದಾರೆ.

“ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಜಾಬಿ ಮತ್ತು ಜಾಟ್ ಸಮುದಾಯಗಳ ಕೊಡುಗೆಗಳನ್ನು ನಾನು ಯಾವಾಗಲೂ ಸ್ಮರಿಸುತ್ತೇನೆ. ಭಾರತವನ್ನು ಮುನ್ನಡೆಸುವಲ್ಲಿ ಈ ಎರಡು ಸಮುದಾಯಗಳು ವಹಿಸಿರುವ ಪಾತ್ರದ ಬಗ್ಗೆ ಪ್ರಶ್ನೆ ಎತ್ತುವುದನ್ನು ನಾನು ಊಹಿಸಲೂ ಸಾಧ್ಯವಿಲ್ಲ” ಎಂದು ದೇಬ್‌ ಟ್ವೀಟ್ ಮಾಡಿದ್ದಾರೆ.

“ಕೆಲವು ಜನರು ಅವರ ಬಗ್ಗೆ ಹೊಂದಿರುವ ಅಭಿಪ್ರಾಯಗಳನ್ನು ನಾನು ವ್ಯಕ್ತಪಡಿಸಿದ್ದೇನೆ. ನಾನು ಪಂಜಾಬಿ ಮತ್ತು ಜಾಟ್ ಸಮುದಾಯಗಳ ಬಗ್ಗೆ ಹೆಮ್ಮೆಪಡುತ್ತೇನೆ. ನಾನು ಅವರ ನಡುವೆ ಸ್ವಲ್ಪ ಸಮಯದವರೆಗೆ ವಾಸಿಸಿದ್ದೇನೆ. ನನ್ನ ಹೇಳಿಕೆಯು ಯಾರೊಬ್ಬರ ಭಾವನೆಗಳಿಗೆ ನೋವುಂಟು ಮಾಡಿದರೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ”ಎಂದು ಅವರು ತಿಳಿಸಿದ್ದಾರೆ.

ಭಾನುವಾರ ಅಗರ್ತಲಾದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಬುದ್ಧಿವಂತಿಕೆಯ ವಿಚಾರದಲ್ಲಿ ಬಂಗಾಳಿಗಳಿಗೆ ಯಾರೂ ಸಾಟಿಯಾಗಲಾರರು. ಎಲ್ಲರಿಗೂ ತಿಳಿದಿರುವಂತೆ ಬಂಗಾಳಿಗಳು ಅತೀ ಬುದ್ಧಿವಂತರು. ಇದೇ ಅವರ ಗುರುತಾಗಿದೆ, ಆದರೆ ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಸಮರ್ಥರು’ ಆದರೆ ಅವರಿಗೆ ಮೆದುಳಿಲ್ಲ’ ಎಂದು ಹೇಳಿದ್ದರು.

ಸಾಮಾನ್ಯವಾಗಿ ಮಾತನಾಡುವಾಗ ಪಂಜಾಬ್‌ ಜನರನ್ನು ಪಂಜಾಬಿ, ಸರ್ದಾರ್ ಎಂದು ಹೇಳುತ್ತೇವೆ. ಅವರನ್ನು ದೈಹಿಕ ಸಾಮರ್ಥ್ಯದಿಂದ ಯಾರೊಬ್ಬರೂ ಗೆಲ್ಲಲಾಗುವುದಿಲ್ಲ. ಆದರೆ ಅವರು ಬುದ್ಧಿಹೀನರು. ಹರಿಯಾಣದಲ್ಲಿ ಜಾಟ್‌ಗಳು ಹೆಚ್ಚಾಗಿದ್ದಾರೆ. ಅಲ್ಲಿನ ಜನರು ಅವರ ಕುರಿತು ‘ಇವರು ದೈಹಿಕವಾಗಿ ಆರೋಗ್ಯವಂತರು. ಆದರೆ ಬುದ್ಧಿಹೀನರು’ ಎನ್ನುತ್ತಾರೆ. ಯಾರಾದರೂ ಜಾಟ್‌ರನ್ನು ಎದುರಿಸಬೇಕಾದರೆ ಅವರ ಮನೆಯಿಂದ ಗನ್ ತರಬೇಕಾಗುತ್ತದೆ ಎಂದು ಬಿಪ್ಲಬ್ ಹೇಳಿದ್ದಾರೆ.

ಬಿಪ್ಲಬ್‌ ದೇಬ್‌ರವರ ಈ ವಿವಾದಾತ್ಮಕ ಹೇಳಿಕೆಗೆ ಪ್ರಬಲ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆಯನ್ನು ಖಂಡಿಸಿ, ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ಬಿಪ್ಲಬ್ ದೇಬ್ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...