Homeಮುಖಪುಟಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

ಪಂಜಾಬಿಗಳು ಮತ್ತು ಜಾಟ್‌ಗಳಿಗೆ ಮಿದುಳಿಲ್ಲ ಹೇಳಿಕೆ: ಕ್ಷಮೆ ಕೇಳಿದ ಸಿಎಂ ಬಿಪ್ಲಬ್‌ ದೇಬ್

"ಯಾರನ್ನೂ ನೋಯಿಸುವ ಉದ್ದೇಶದಿಂದ ಆ ಹೇಳಿಕೆ ನೀಡಿಲ್ಲ. ನನಗೆ ಹಲವಾರು ಪಂಜಾಬಿ ಮತ್ತು ಜಾಟ್‌ ಸ್ನೇಹಿತರಿದ್ದಾರೆ. ಅವರುಗಳ ಸಾಧನೆಗಾಗಿ ಹೆಮ್ಮೆ ಇದೆ"

- Advertisement -
- Advertisement -

“ಎಲ್ಲರಿಗೂ ಗೊತ್ತಿರುವಂತೆ ಬಂಗಾಳಿಗಳು ಅತಿ ಬುದ್ಧಿವಂತರು. ಪಂಜಾಬಿಗಳು ಮತ್ತು ಜಾಟ್‌ಗಳು ಕೇವಲ ದೈಹಿಕವಾಗಿ ಮಾತ್ರ ಶಕ್ತರು, ಅವರಿಗೆ ಮಿದುಳಿಲ್ಲ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ತ್ರಿಪುರದ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ತನ್ನ ಹೇಳಿಕೆಗಾಗಿ ಕ್ಷಮೆ ಕೇಳಿದ್ದಾರೆ.

ಇಂದು ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ ಅವರು “ಯಾರನ್ನೂ ನೋಯಿಸುವ ಉದ್ದೇಶದಿಂದ ಆ ಹೇಳಿಕೆ ನೀಡಿಲ್ಲ. ನನಗೆ ಹಲವಾರು ಪಂಜಾಬಿ ಮತ್ತು ಜಾಟ್‌ ಸ್ನೇಹಿತರಿದ್ದಾರೆ. ಅವರುಗಳ ಸಾಧನೆಗಾಗಿ ಹೆಮ್ಮೆ ಇದೆ” ಎಂದು ಬರೆದುಕೊಂಡಿದ್ದಾರೆ.

“ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಜಾಬಿ ಮತ್ತು ಜಾಟ್ ಸಮುದಾಯಗಳ ಕೊಡುಗೆಗಳನ್ನು ನಾನು ಯಾವಾಗಲೂ ಸ್ಮರಿಸುತ್ತೇನೆ. ಭಾರತವನ್ನು ಮುನ್ನಡೆಸುವಲ್ಲಿ ಈ ಎರಡು ಸಮುದಾಯಗಳು ವಹಿಸಿರುವ ಪಾತ್ರದ ಬಗ್ಗೆ ಪ್ರಶ್ನೆ ಎತ್ತುವುದನ್ನು ನಾನು ಊಹಿಸಲೂ ಸಾಧ್ಯವಿಲ್ಲ” ಎಂದು ದೇಬ್‌ ಟ್ವೀಟ್ ಮಾಡಿದ್ದಾರೆ.

“ಕೆಲವು ಜನರು ಅವರ ಬಗ್ಗೆ ಹೊಂದಿರುವ ಅಭಿಪ್ರಾಯಗಳನ್ನು ನಾನು ವ್ಯಕ್ತಪಡಿಸಿದ್ದೇನೆ. ನಾನು ಪಂಜಾಬಿ ಮತ್ತು ಜಾಟ್ ಸಮುದಾಯಗಳ ಬಗ್ಗೆ ಹೆಮ್ಮೆಪಡುತ್ತೇನೆ. ನಾನು ಅವರ ನಡುವೆ ಸ್ವಲ್ಪ ಸಮಯದವರೆಗೆ ವಾಸಿಸಿದ್ದೇನೆ. ನನ್ನ ಹೇಳಿಕೆಯು ಯಾರೊಬ್ಬರ ಭಾವನೆಗಳಿಗೆ ನೋವುಂಟು ಮಾಡಿದರೆ, ಅದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ”ಎಂದು ಅವರು ತಿಳಿಸಿದ್ದಾರೆ.

ಭಾನುವಾರ ಅಗರ್ತಲಾದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಬುದ್ಧಿವಂತಿಕೆಯ ವಿಚಾರದಲ್ಲಿ ಬಂಗಾಳಿಗಳಿಗೆ ಯಾರೂ ಸಾಟಿಯಾಗಲಾರರು. ಎಲ್ಲರಿಗೂ ತಿಳಿದಿರುವಂತೆ ಬಂಗಾಳಿಗಳು ಅತೀ ಬುದ್ಧಿವಂತರು. ಇದೇ ಅವರ ಗುರುತಾಗಿದೆ, ಆದರೆ ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಸಮರ್ಥರು’ ಆದರೆ ಅವರಿಗೆ ಮೆದುಳಿಲ್ಲ’ ಎಂದು ಹೇಳಿದ್ದರು.

ಸಾಮಾನ್ಯವಾಗಿ ಮಾತನಾಡುವಾಗ ಪಂಜಾಬ್‌ ಜನರನ್ನು ಪಂಜಾಬಿ, ಸರ್ದಾರ್ ಎಂದು ಹೇಳುತ್ತೇವೆ. ಅವರನ್ನು ದೈಹಿಕ ಸಾಮರ್ಥ್ಯದಿಂದ ಯಾರೊಬ್ಬರೂ ಗೆಲ್ಲಲಾಗುವುದಿಲ್ಲ. ಆದರೆ ಅವರು ಬುದ್ಧಿಹೀನರು. ಹರಿಯಾಣದಲ್ಲಿ ಜಾಟ್‌ಗಳು ಹೆಚ್ಚಾಗಿದ್ದಾರೆ. ಅಲ್ಲಿನ ಜನರು ಅವರ ಕುರಿತು ‘ಇವರು ದೈಹಿಕವಾಗಿ ಆರೋಗ್ಯವಂತರು. ಆದರೆ ಬುದ್ಧಿಹೀನರು’ ಎನ್ನುತ್ತಾರೆ. ಯಾರಾದರೂ ಜಾಟ್‌ರನ್ನು ಎದುರಿಸಬೇಕಾದರೆ ಅವರ ಮನೆಯಿಂದ ಗನ್ ತರಬೇಕಾಗುತ್ತದೆ ಎಂದು ಬಿಪ್ಲಬ್ ಹೇಳಿದ್ದಾರೆ.

ಬಿಪ್ಲಬ್‌ ದೇಬ್‌ರವರ ಈ ವಿವಾದಾತ್ಮಕ ಹೇಳಿಕೆಗೆ ಪ್ರಬಲ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆಯನ್ನು ಖಂಡಿಸಿ, ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ಬಿಪ್ಲಬ್ ದೇಬ್ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...