Homeಮುಖಪುಟಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ಬಿಪ್ಲಬ್ ದೇಬ್...

ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಶಕ್ತರು; ಆದರೆ ಅವರಿಗೆ ಮಿದುಳಿಲ್ಲ: ತ್ರಿಪುರ ಸಿಎಂ ಬಿಪ್ಲಬ್ ದೇಬ್ ವಿವಾದ

ಖಟ್ಟರ್‌ಜಿ ಮತ್ತು ದುಶ್ಯಂತ್ ಚೌತಲಾ ಏಕೆ ಸುಮ್ಮನಿದ್ದೀರಿ? ಮೋದಿ ಜಿ ಮತ್ತು ನಾಡ್ಡಜಿ ಎಲ್ಲಿದ್ದೀರಿ? ಕ್ಷಮೆಯಾಚಿಸಿ, ಕ್ರಮ ತೆಗೆದುಕೊಳ್ಳಿ ಎಂದು ರಣದೀಪ್‌ ಸಿಂಗ್ ಆಗ್ರಹಿಸಿದ್ದಾರೆ.

- Advertisement -
- Advertisement -

“ಎಲ್ಲರಿಗೂ ಗೊತ್ತಿರುವಂತೆ ಬಂಗಾಳಿಗಳು ಅತಿ ಬುದ್ಧಿವಂತರು. ಪಂಜಾಬಿಗಳು ಮತ್ತು ಜಾಟ್‌ಗಳು ಕೇವಲ ದೈಹಿಕವಾಗಿ ಮಾತ್ರ ಶಕ್ತರು, ಅವರಿಗೆ ಮಿದುಳಿಲ್ಲ” ಎಂದು ತ್ರಿಪುರದ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾನುವಾರ ಅಗರ್ತಲಾದ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದಲ್ಲಿನ ಪ್ರತಿಯೊಂದು ಸಮುದಾಯವೂ ಸಹ ತನ್ನದೇ ಆದ ವಿಶೇಷ ಲಕ್ಷಣಗಳನ್ನು ಹೊಂದಿದೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಹೇಳಿಕೆಯಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

‘ಬುದ್ಧಿವಂತಿಕೆಯ ವಿಚಾರದಲ್ಲಿ ಬಂಗಾಳಿಗಳಿಗೆ ಯಾರೂ ಸಾಟಿಯಾಗಲಾರರು. ಎಲ್ಲರಿಗೂ ತಿಳಿದಿರುವಂತೆ ಬಂಗಾಳಿಗಳು ಅತೀ ಬುದ್ಧಿವಂತರು. ಇದೇ ಅವರ ಗುರುತಾಗಿದೆ, ಆದರೆ ಪಂಜಾಬಿಗಳು ಮತ್ತು ಜಾಟ್‌ಗಳು ದೈಹಿಕವಾಗಿ ಸಮರ್ಥರು’ ಎಂದು ವೀಡಿಯೋದಲ್ಲಿ ಹೇಳಲಾಗಿದೆ.

ಸಾಮಾನ್ಯವಾಗಿ ಮಾತನಾಡುವಾಗ ಪಂಜಾಬ್‌ ಜನರನ್ನು ಪಂಜಾಬಿ, ಸರ್ದಾರ್ ಎಂದು ಹೇಳುತ್ತೇವೆ. ಅವರನ್ನು ದೈಹಿಕ ಸಾಮರ್ಥ್ಯದಿಂದ ಯಾರೊಬ್ಬರೂ ಗೆಲ್ಲಲಾಗುವುದಿಲ್ಲ. ಆದರೆ ಅವರು ಬುದ್ಧಿಹೀನರು. ಹರಿಯಾಣದಲ್ಲಿ ಜಾಟ್‌ಗಳು ಹೆಚ್ಚಾಗಿದ್ದಾರೆ. ಅಲ್ಲಿನ ಜನರು ಅವರ ಕುರಿತು ‘ಇವರು ದೈಹಿಕವಾಗಿ ಆರೋಗ್ಯವಂತರು. ಆದರೆ ಬುದ್ಧಿಹೀನರು’ ಎನ್ನುತ್ತಾರೆ. ಯಾರಾದರೂ ಜಾಟ್‌ರನ್ನು ಎದುರಿಸಬೇಕಾದರೆ ಅವರ ಮನೆಯಿಂದ ಗನ್ ತರಬೇಕಾಗುತ್ತದೆ ಎಂದು ಬಿಪ್ಲಬ್ ಹೇಳಿದ್ದಾರೆ.

ಬಿಪ್ಲಬ್‌ ದೇಬ್‌ರವರ ಈ ವಿವಾದಾತ್ಮಕ ಹೇಳಿಕೆಗೆ ಪ್ರಬಲ ವಿರೋಧ ವ್ಯಕ್ತವಾಗಿದೆ. ಈ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್ ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.

ಈ ಹೇಳಿಕೆ ನಾಚಿಕೆ ಮತ್ತು ದುರದೃಷ್ಟಕರವಾಗಿದೆ. ತ್ರಿಪುರದ ಬಿಜೆಪಿ ಮುಖ್ಯಮಂತ್ರಿ ಬಿಪ್ಲಬ್ ದೇವ್ ಅವರು ಪಂಜಾಬ್‌ನ ಸಿಖ್ ಸಹೋದರರನ್ನು ಮತ್ತು ಹರಿಯಾಣದ ಜಾಟ್ ಸಮುದಾಯವನ್ನು ಅವಮಾನಿಸಿ, ಅವರನ್ನು ಬುದ್ದಿ ಇಲ್ಲದವರು ಎಂದು ಕರೆದಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯಾಗಿದೆ.

ಖಟ್ಟರ್‌ಜಿ ಮತ್ತು ದುಶ್ಯಂತ್ ಚೌತಲಾ ಏಕೆ ಸುಮ್ಮನಿದ್ದೀರಿ?
ಮೋದಿ ಜಿ ಮತ್ತು ನಾಡ್ಡಜಿ ಎಲ್ಲಿದ್ದೀರಿ?
ಕ್ಷಮೆಯಾಚಿಸಿ, ಕ್ರಮ ತೆಗೆದುಕೊಳ್ಳಿ ಎಂದು ರಣದೀಪ್‌ ಸಿಂಗ್ ಆಗ್ರಹಿಸಿದ್ದಾರೆ.

ಬಿಪ್ಲಬ್ ಕುಮಾರ್ ಈ ಹಿಂದೆಯೂ ‘ಮಹಾಭಾರತ ಕಾಲದಲ್ಲಿ ಉಪಗ್ರಹ ಮತ್ತು  ದೂರದರ್ಶನವಿತ್ತು ಎಂದು ಹೇಳಿಕೆ ನೀಡಿ ಇತ್ತೀಚೆಗೆ ವಿವಾದಕ್ಕೆ ಸಿಲುಕಿದ್ದರು.


ಇದನ್ನೂ ಓದಿ: ಕೊರೊನಾದಿಂದ ಒಂದೂ ಸಾವು ಕಾಣದ ಭಾರತದ ಅದೃಷ್ಠಶಾಲಿ ರಾಜ್ಯಗಳಿವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...