Homeಮುಖಪುಟವಿಡಿಯೊ | ಪೌರ ಕಾರ್ಮಿಕರಿಗೆ ಹೂವು, ನೋಟಿನ ಹಾರ ಹಾಕಿದ ಪಂಜಾಬಿಗರು

ವಿಡಿಯೊ | ಪೌರ ಕಾರ್ಮಿಕರಿಗೆ ಹೂವು, ನೋಟಿನ ಹಾರ ಹಾಕಿದ ಪಂಜಾಬಿಗರು

- Advertisement -
- Advertisement -

ಪಂಜಾಬ್‌ನಲ್ಲಿ ಪೌರ ಕಾರ್ಮಿಕರೊಬ್ಬರಿಗೆ ಸ್ಥಳೀಯ ನಿವಾಸಿಗಳು ಹೂವಿನ ಮತ್ತು ನೋಟಿನ ಹಾರ ಹಾಕಿ ಚಪ್ಪಾಳೆ ತಟ್ಟಿ ಗೌರವ ಸಲ್ಲಿಸಿದ್ದಾರೆ.

ಕೊರೊನ ಭಯದಿಂದ ಭಾರತದಾದ್ಯಂತ ಲಾಕ್‌ಡೌ‌ನ್ ಘೋಷಿಸಿದ್ದರಿಂದ ಎಲ್ಲರೂ ಮನೆಯೊಳಗಡೆಯೇ ಇರುವಂತಾಗಿದೆ. ಆದರೆ ಆರೋಗ್ಯ ಕಾರ್ಯರರ್ತರಂತೆ ದಣಿವಿಲ್ಲದೆ ಪೌರ ಕಾರ್ಮಿಕರು ಕೂಡಾ ಅಪಾಯವನ್ನೆದುರಿಸಿ ದುಡಿಯುತ್ತಿದ್ದಾರೆ.

ಹೀಗೆ ದುಡಿಯುತ್ತಿರುವ ಪೌರ ಕಾರ್ಮಿಕರೊಬ್ಬರಿಗೆ ಪಂಜಾಬಿನ ಪಟಿಯಾಲದ ನಾಭಾ ನಿವಾಸಿಗಳು ಬಾಲ್ಕನಿಯಿಂದ ಚಪ್ಪಾಳೆ ತಟ್ಟಿ ಹೂಗಳ ಎಸಳುಗಳನ್ನು ಎಸೆದು ಗೌರವ ಸೂಚಿಸಿದರಲ್ಲದೆ, ಮಾಸ್ಕ್ ಧರಿಸಿದ ವ್ಯಕ್ತಿಗಳು ಬಂದು ಅವರಿಗೆ ನೋಟಿನ ಹಾರಗಳನ್ನು ಹಾಕಿ ಬೆನ್ನು ತಟ್ಟಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಪಂಜಾಬ್ ನಲ್ಲೊಂದು ಮಾನವೀಯ ಘಟನೆ ಜರುಗಿದೆ.ಕೊರೊನಾ ಕಾಲದಲ್ಲಿಯೂ ದಿನನಿತ್ಯ ದುಡಿಯುತ್ತಿರುವ ಪೌರಕಾರ್ಮಿಕರಿಗೆ ಪಟಿಯಾಲದ ರಸ್ತೆಯೊಂದರ ಜನರು ಹೂವಿನ ಹಾರ, ದುಡ್ಡಿನ ಹಾರ ಹಾಕಿ ಅವರ ಕರ್ತವ್ಯವನ್ನು ಪ್ರೀತಿಯಿಂದ ಸ್ಮರಿಸಿದ್ದಾರೆ. ವಿಡಿಯೋ ನೋಡಿ..ಈ ಮಾನವೀಯತೆ ಪ್ರಪಂಚಕ್ಕೆಲ್ಲಾ ಹರಡಲು ಷೇರ್ ಮಾಡಿ.

Posted by Naanu Gauri on Tuesday, March 31, 2020

ವಾರಗಳ ಹಿಂದೆ ಪ್ರಧಾನಿ ಮೋದಿಯವರು ಕೊರೊನ ಬಿಕ್ಕಟ್ಟಿನಲ್ಲಿ ದುಡಿಯುವ ಜನರಿಗೆ ಜನತಾ ಕರ್ಫ್ಯೂ ದಿನ ಸಂಜೆ ಅಭಿನಂದನೆ ಸಲ್ಲಿಸಲು ಹೇಳಿದ್ದರು. ಹೆಚ್ಚಿನ ಜನರು ಇದಕ್ಕೆ ಸ್ಪಂದಿಸಿದ್ದರೂ ಹುಚ್ಚು ಅಭಿಮಾನಿಗಳು ರಸ್ತೆಯಲ್ಲಿ ಮೆರವಣಿಗೆ ನಡೆಸಿ ಚಪ್ಪಾಳೆ ಹೊಡೆದ್ದರಿಂದ ಜಗತ್ತಿನಾದ್ಯಂತ ನಗೆಪಾಟಲಿಗೀಡಾಗಿದ್ದರು.

ಆದರೆ ಪಂಜಾಬಿನ ಈ ನಿವಾಸಿಗಳ ಕೆಲಸಕ್ಕೆ ದೇಶದೆಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ನಗರಗಳನ್ನು ಸ್ವಚ್ಛವಾಗಿಟ್ಟು ರೋಗಗಳು ವೇಗವಾಗಿ ಹರಡದಂತೆ ದುಡಿಯುತ್ತಿರುವ ಪೌರಕಾರ್ಮಿಕರು ಕೂಡ ಸಮಾಜದ ವೈದ್ಯರು ಎಂಬುದನ್ನು ನಿಜವಾಗಿಸಿದ್ದಾರೆ. ಅವರ ಈ ನಡೆ ಇತರರಿಗೆ ಮಾದರಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...