Homeಮುಖಪುಟಶೀಘ್ರದಲ್ಲೇ ಅಮರೀಂದರ್ ಸಿಂಗ್‌ ಹೊಸ ಪಕ್ಷ: ರೈತ ಹೋರಾಟ ಬಗೆಹರಿದರೆ ಬಿಜೆಪಿ ಜೊತೆ ಮೈತ್ರಿ!

ಶೀಘ್ರದಲ್ಲೇ ಅಮರೀಂದರ್ ಸಿಂಗ್‌ ಹೊಸ ಪಕ್ಷ: ರೈತ ಹೋರಾಟ ಬಗೆಹರಿದರೆ ಬಿಜೆಪಿ ಜೊತೆ ಮೈತ್ರಿ!

ಈ ಹಿಂದೆ ಅಮರಿಂದರ್‌ ಸಿಂಗ್ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಆದರೆ ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ ಎಂದಿದ್ದರು.

- Advertisement -
- Advertisement -

ಪಂಜಾಬ್ ಕಾಂಗ್ರೆಸ್‌ನಲ್ಲಾದ ಬಿರುಕುಗಳಿಂದ ಕಳೆದ ತಿಂಗಳು ಪಂಜಾಬ್​ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಕಾಂಗ್ರೆಸ್‌ಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್‌ ರಾಜೀನಾಮೆ ನೀಡಿದ್ದರು. ಈಗ ಹೊಸ ರಾಜಕೀಯ ಪಕ್ಷವನ್ನು ಆರಂಭಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಹೊಸ ಪಕ್ಷ ಸ್ಥಾಪಿಸುವುದರೊಂದಿಗೆ, “ರೈತರ ಹೋರಾಟ ಬಗೆಹರಿದರೆ, 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ತಾನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತನಾಗಿದ್ದೇನೆ” ಎಂದು ಅಮರಿಂದರ್‌ ಸಿಂಗ್ ಘೋಷಿಸಿದ್ದಾರೆ.

ಅಮರೀಂದರ್​ ಸಿಂಗ್ ಅವರ ರಾಜಕೀಯ ಸಲಹೆಗಾರ ರವೀನ್ ತುಕ್ರಾಲ್ ಟ್ವೀಟ್ ಮಾಡುವ ಮೂಲಕ ಹೊಸ ಸ್ಥಾಪನೆಯನ್ನು ಖಚಿತಪಡಿಸಿದ್ದು, “ಪಂಜಾಬ್ ಭವಿಷ್ಯಕ್ಕಾಗಿ ಯುದ್ಧ ನಡೆಯುತ್ತಿದೆ. ಒಂದು ವರ್ಷದಿಂದ ತಮ್ಮ ಉಳಿವಿಗಾಗಿ ಹೋರಾಡುತ್ತಿರುವ ನಮ್ಮ ರೈತರು ಸೇರಿದಂತೆ ಪಂಜಾಬ್ ಮತ್ತು ಅದರ ಜನರ ಹಿತಾಸಕ್ತಿಗಾಗಿ ನನ್ನದೇ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಶೀಘ್ರದಲ್ಲೇ ಘೋಷಿಸುತ್ತೇನೆ” ಎಂದು ತಿಳಿಸಿದ್ದಾರೆ.

 ಇದನ್ನೂ ಓದಿ: ಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ಮತ್ತೊಂದು ಟ್ವೀಟ್​ನಲ್ಲಿ, “2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ರೈತರ ಹಿತದೃಷ್ಟಿಯಿಂದ ರೈತರ ಹೋರಾಟ ಬಗೆಹರಿಸಿದರೆ ಬಿಜೆಪಿ ಪಕ್ಷದ ಜೊತೆ ಸೀಟು ಹೊಂದಾಣಿಗೆ ಮಾಡುವ ಭರವಸೆ ಇದೆ. ಬಂಡಾಯ ಅಕಾಲಿ ಗುಂಪುಗಳು, ವಿಶೇಷವಾಗಿ ದಿಂಡಸ ಮತ್ತು ಬ್ರಹ್ಮಪುರ ಬಣಗಳಂತಹ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಯನ್ನೂ ನಾವು ಎದುರು ನೋಡುತ್ತಿದ್ದೇವೆ” ಎಂದು ಟ್ವೀಟ್​ನಲ್ಲಿ ತಿಳಿಸಲಾಗಿದೆ.

ಈ ಹಿಂದೆ ಬಿಜೆಪಿ ಸೇರುವಬಗ್ಗೆ ಮಾತನಾಡಿದ್ದ ಅಮರಿಂದರ್‌ ಸಿಂಗ್,  ಬಿಜೆಪಿಗೆ ಸೇರುವ ವದಂತಿಗಳನ್ನು ತಳ್ಳಿ ಹಾಕಿದ್ದರು. ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ. ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಎಂದಿದ್ದರು.

ರಾಜೀನಾಮೆ ಬಗ್ಗೆ ಸಲ್ಲಿಕೆ ಬಗ್ಗೆ ಮಾತನಾಡಿದ್ದ ಅಮರಿಂದರ್‌ ಸಿಂಗ್ “ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಬೆಳಿಗ್ಗೆ 10.30 ಕ್ಕೆ ನೀವು ರಾಜೀನಾಮೆ ನೀಡುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಾರೆ. ನಾನು ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರವೂ ನಿಮಗೆ ನನ್ನ ವಿಶ್ವಾಸಾರ್ಹತೆಯ ಬಗ್ಗೆ ನಿಮಗೆ ಅನುಮಾನವಿದ್ದರೆ, ನನ್ನ ಬಗ್ಗೆ ನಂಬಿಕೆ ಇಲ್ಲದಿದ್ದರೆ, ನಾನು ಪಕ್ಷದಲ್ಲಿ ಉಳಿಯುವುದರ ಅರ್ಥವೇನು..? ಎಂದು ಅಸಮಾಧಾನ ಹೊರಹಾಕಿದ್ದರು.

ಪಂಜಾಬ್‌ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟದಿಂದಾಗಿ ಸೆ.18 ರಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟಂಬರ್ 29 ರಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು. ಈ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಅಮಿತ್‌ ಶಾ ಅವರನ್ನು ಭೇಟಿಯಾದ ಪಂಜಾಬ್ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...