Homeಮುಖಪುಟಶೀಘ್ರದಲ್ಲೇ ಅಮರೀಂದರ್ ಸಿಂಗ್‌ ಹೊಸ ಪಕ್ಷ: ರೈತ ಹೋರಾಟ ಬಗೆಹರಿದರೆ ಬಿಜೆಪಿ ಜೊತೆ ಮೈತ್ರಿ!

ಶೀಘ್ರದಲ್ಲೇ ಅಮರೀಂದರ್ ಸಿಂಗ್‌ ಹೊಸ ಪಕ್ಷ: ರೈತ ಹೋರಾಟ ಬಗೆಹರಿದರೆ ಬಿಜೆಪಿ ಜೊತೆ ಮೈತ್ರಿ!

ಈ ಹಿಂದೆ ಅಮರಿಂದರ್‌ ಸಿಂಗ್ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಆದರೆ ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ ಎಂದಿದ್ದರು.

- Advertisement -
- Advertisement -

ಪಂಜಾಬ್ ಕಾಂಗ್ರೆಸ್‌ನಲ್ಲಾದ ಬಿರುಕುಗಳಿಂದ ಕಳೆದ ತಿಂಗಳು ಪಂಜಾಬ್​ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಕಾಂಗ್ರೆಸ್‌ಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್‌ ರಾಜೀನಾಮೆ ನೀಡಿದ್ದರು. ಈಗ ಹೊಸ ರಾಜಕೀಯ ಪಕ್ಷವನ್ನು ಆರಂಭಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಹೊಸ ಪಕ್ಷ ಸ್ಥಾಪಿಸುವುದರೊಂದಿಗೆ, “ರೈತರ ಹೋರಾಟ ಬಗೆಹರಿದರೆ, 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ತಾನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತನಾಗಿದ್ದೇನೆ” ಎಂದು ಅಮರಿಂದರ್‌ ಸಿಂಗ್ ಘೋಷಿಸಿದ್ದಾರೆ.

ಅಮರೀಂದರ್​ ಸಿಂಗ್ ಅವರ ರಾಜಕೀಯ ಸಲಹೆಗಾರ ರವೀನ್ ತುಕ್ರಾಲ್ ಟ್ವೀಟ್ ಮಾಡುವ ಮೂಲಕ ಹೊಸ ಸ್ಥಾಪನೆಯನ್ನು ಖಚಿತಪಡಿಸಿದ್ದು, “ಪಂಜಾಬ್ ಭವಿಷ್ಯಕ್ಕಾಗಿ ಯುದ್ಧ ನಡೆಯುತ್ತಿದೆ. ಒಂದು ವರ್ಷದಿಂದ ತಮ್ಮ ಉಳಿವಿಗಾಗಿ ಹೋರಾಡುತ್ತಿರುವ ನಮ್ಮ ರೈತರು ಸೇರಿದಂತೆ ಪಂಜಾಬ್ ಮತ್ತು ಅದರ ಜನರ ಹಿತಾಸಕ್ತಿಗಾಗಿ ನನ್ನದೇ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಶೀಘ್ರದಲ್ಲೇ ಘೋಷಿಸುತ್ತೇನೆ” ಎಂದು ತಿಳಿಸಿದ್ದಾರೆ.

 ಇದನ್ನೂ ಓದಿ: ಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ಮತ್ತೊಂದು ಟ್ವೀಟ್​ನಲ್ಲಿ, “2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ರೈತರ ಹಿತದೃಷ್ಟಿಯಿಂದ ರೈತರ ಹೋರಾಟ ಬಗೆಹರಿಸಿದರೆ ಬಿಜೆಪಿ ಪಕ್ಷದ ಜೊತೆ ಸೀಟು ಹೊಂದಾಣಿಗೆ ಮಾಡುವ ಭರವಸೆ ಇದೆ. ಬಂಡಾಯ ಅಕಾಲಿ ಗುಂಪುಗಳು, ವಿಶೇಷವಾಗಿ ದಿಂಡಸ ಮತ್ತು ಬ್ರಹ್ಮಪುರ ಬಣಗಳಂತಹ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಯನ್ನೂ ನಾವು ಎದುರು ನೋಡುತ್ತಿದ್ದೇವೆ” ಎಂದು ಟ್ವೀಟ್​ನಲ್ಲಿ ತಿಳಿಸಲಾಗಿದೆ.

ಈ ಹಿಂದೆ ಬಿಜೆಪಿ ಸೇರುವಬಗ್ಗೆ ಮಾತನಾಡಿದ್ದ ಅಮರಿಂದರ್‌ ಸಿಂಗ್,  ಬಿಜೆಪಿಗೆ ಸೇರುವ ವದಂತಿಗಳನ್ನು ತಳ್ಳಿ ಹಾಕಿದ್ದರು. ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ. ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಎಂದಿದ್ದರು.

ರಾಜೀನಾಮೆ ಬಗ್ಗೆ ಸಲ್ಲಿಕೆ ಬಗ್ಗೆ ಮಾತನಾಡಿದ್ದ ಅಮರಿಂದರ್‌ ಸಿಂಗ್ “ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಬೆಳಿಗ್ಗೆ 10.30 ಕ್ಕೆ ನೀವು ರಾಜೀನಾಮೆ ನೀಡುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಾರೆ. ನಾನು ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರವೂ ನಿಮಗೆ ನನ್ನ ವಿಶ್ವಾಸಾರ್ಹತೆಯ ಬಗ್ಗೆ ನಿಮಗೆ ಅನುಮಾನವಿದ್ದರೆ, ನನ್ನ ಬಗ್ಗೆ ನಂಬಿಕೆ ಇಲ್ಲದಿದ್ದರೆ, ನಾನು ಪಕ್ಷದಲ್ಲಿ ಉಳಿಯುವುದರ ಅರ್ಥವೇನು..? ಎಂದು ಅಸಮಾಧಾನ ಹೊರಹಾಕಿದ್ದರು.

ಪಂಜಾಬ್‌ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟದಿಂದಾಗಿ ಸೆ.18 ರಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟಂಬರ್ 29 ರಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು. ಈ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಅಮಿತ್‌ ಶಾ ಅವರನ್ನು ಭೇಟಿಯಾದ ಪಂಜಾಬ್ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...