Homeಮುಖಪುಟಶೀಘ್ರದಲ್ಲೇ ಅಮರೀಂದರ್ ಸಿಂಗ್‌ ಹೊಸ ಪಕ್ಷ: ರೈತ ಹೋರಾಟ ಬಗೆಹರಿದರೆ ಬಿಜೆಪಿ ಜೊತೆ ಮೈತ್ರಿ!

ಶೀಘ್ರದಲ್ಲೇ ಅಮರೀಂದರ್ ಸಿಂಗ್‌ ಹೊಸ ಪಕ್ಷ: ರೈತ ಹೋರಾಟ ಬಗೆಹರಿದರೆ ಬಿಜೆಪಿ ಜೊತೆ ಮೈತ್ರಿ!

ಈ ಹಿಂದೆ ಅಮರಿಂದರ್‌ ಸಿಂಗ್ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಆದರೆ ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ ಎಂದಿದ್ದರು.

- Advertisement -
- Advertisement -

ಪಂಜಾಬ್ ಕಾಂಗ್ರೆಸ್‌ನಲ್ಲಾದ ಬಿರುಕುಗಳಿಂದ ಕಳೆದ ತಿಂಗಳು ಪಂಜಾಬ್​ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, ಕಾಂಗ್ರೆಸ್‌ಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್‌ ರಾಜೀನಾಮೆ ನೀಡಿದ್ದರು. ಈಗ ಹೊಸ ರಾಜಕೀಯ ಪಕ್ಷವನ್ನು ಆರಂಭಿಸುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಹೊಸ ಪಕ್ಷ ಸ್ಥಾಪಿಸುವುದರೊಂದಿಗೆ, “ರೈತರ ಹೋರಾಟ ಬಗೆಹರಿದರೆ, 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ತಾನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತನಾಗಿದ್ದೇನೆ” ಎಂದು ಅಮರಿಂದರ್‌ ಸಿಂಗ್ ಘೋಷಿಸಿದ್ದಾರೆ.

ಅಮರೀಂದರ್​ ಸಿಂಗ್ ಅವರ ರಾಜಕೀಯ ಸಲಹೆಗಾರ ರವೀನ್ ತುಕ್ರಾಲ್ ಟ್ವೀಟ್ ಮಾಡುವ ಮೂಲಕ ಹೊಸ ಸ್ಥಾಪನೆಯನ್ನು ಖಚಿತಪಡಿಸಿದ್ದು, “ಪಂಜಾಬ್ ಭವಿಷ್ಯಕ್ಕಾಗಿ ಯುದ್ಧ ನಡೆಯುತ್ತಿದೆ. ಒಂದು ವರ್ಷದಿಂದ ತಮ್ಮ ಉಳಿವಿಗಾಗಿ ಹೋರಾಡುತ್ತಿರುವ ನಮ್ಮ ರೈತರು ಸೇರಿದಂತೆ ಪಂಜಾಬ್ ಮತ್ತು ಅದರ ಜನರ ಹಿತಾಸಕ್ತಿಗಾಗಿ ನನ್ನದೇ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಶೀಘ್ರದಲ್ಲೇ ಘೋಷಿಸುತ್ತೇನೆ” ಎಂದು ತಿಳಿಸಿದ್ದಾರೆ.

 ಇದನ್ನೂ ಓದಿ: ಕಾಂಗ್ರೆಸ್ ಬಿಡುತ್ತೇನೆ..ಆದರೆ ಬಿಜೆಪಿ ಸೇರುವುದಿಲ್ಲ-ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ಮತ್ತೊಂದು ಟ್ವೀಟ್​ನಲ್ಲಿ, “2022 ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ರೈತರ ಹಿತದೃಷ್ಟಿಯಿಂದ ರೈತರ ಹೋರಾಟ ಬಗೆಹರಿಸಿದರೆ ಬಿಜೆಪಿ ಪಕ್ಷದ ಜೊತೆ ಸೀಟು ಹೊಂದಾಣಿಗೆ ಮಾಡುವ ಭರವಸೆ ಇದೆ. ಬಂಡಾಯ ಅಕಾಲಿ ಗುಂಪುಗಳು, ವಿಶೇಷವಾಗಿ ದಿಂಡಸ ಮತ್ತು ಬ್ರಹ್ಮಪುರ ಬಣಗಳಂತಹ ಸಮಾನ ಮನಸ್ಕ ಪಕ್ಷಗಳೊಂದಿಗೆ ಮೈತ್ರಿಯನ್ನೂ ನಾವು ಎದುರು ನೋಡುತ್ತಿದ್ದೇವೆ” ಎಂದು ಟ್ವೀಟ್​ನಲ್ಲಿ ತಿಳಿಸಲಾಗಿದೆ.

ಈ ಹಿಂದೆ ಬಿಜೆಪಿ ಸೇರುವಬಗ್ಗೆ ಮಾತನಾಡಿದ್ದ ಅಮರಿಂದರ್‌ ಸಿಂಗ್,  ಬಿಜೆಪಿಗೆ ಸೇರುವ ವದಂತಿಗಳನ್ನು ತಳ್ಳಿ ಹಾಕಿದ್ದರು. ಬಿಜೆಪಿ ಪಕ್ಷಕ್ಕೆ ಸೇರುವುದಿಲ್ಲ. ಆದರೆ ಖಂಡಿತವಾಗಿಯೂ ಕಾಂಗ್ರೆಸ್ ತೊರೆಯುತ್ತೆನೆ ಎಂದಿದ್ದರು.

ರಾಜೀನಾಮೆ ಬಗ್ಗೆ ಸಲ್ಲಿಕೆ ಬಗ್ಗೆ ಮಾತನಾಡಿದ್ದ ಅಮರಿಂದರ್‌ ಸಿಂಗ್ “ನಾನು 52 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನ್ನನ್ನು ಈ ರೀತಿ ನಡೆಸಿಕೊಳ್ಳಬಾರದಿತ್ತು. ಬೆಳಿಗ್ಗೆ 10.30 ಕ್ಕೆ ನೀವು ರಾಜೀನಾಮೆ ನೀಡುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳುತ್ತಾರೆ. ನಾನು ಯಾವುದೇ ಪ್ರಶ್ನೆಗಳನ್ನು ಕೇಳಲಿಲ್ಲ. ಸಂಜೆ 4 ಗಂಟೆಗೆ ರಾಜ್ಯಪಾಲರ ಬಳಿ ಹೋಗಿ ರಾಜೀನಾಮೆ ನೀಡಿದ್ದೇನೆ. 50 ವರ್ಷಗಳ ನಂತರವೂ ನಿಮಗೆ ನನ್ನ ವಿಶ್ವಾಸಾರ್ಹತೆಯ ಬಗ್ಗೆ ನಿಮಗೆ ಅನುಮಾನವಿದ್ದರೆ, ನನ್ನ ಬಗ್ಗೆ ನಂಬಿಕೆ ಇಲ್ಲದಿದ್ದರೆ, ನಾನು ಪಕ್ಷದಲ್ಲಿ ಉಳಿಯುವುದರ ಅರ್ಥವೇನು..? ಎಂದು ಅಸಮಾಧಾನ ಹೊರಹಾಕಿದ್ದರು.

ಪಂಜಾಬ್‌ ಕಾಂಗ್ರೆಸ್‌ ಪಕ್ಷದೊಳಗೆ ನಡೆಯುತ್ತಿದ್ದ ಆಂತರಿಕ ಕಚ್ಚಾಟದಿಂದಾಗಿ ಸೆ.18 ರಂದು ರಾಜ್ಯದ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೆಪ್ಟಂಬರ್ 29 ರಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಡಿದ್ದವು. ಈ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಅಮಿತ್‌ ಶಾ ಅವರನ್ನು ಭೇಟಿಯಾದ ಪಂಜಾಬ್ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...