Homeಕರ್ನಾಟಕಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ - ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ – ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

- Advertisement -
- Advertisement -

ರಾಜ್ಯದ ಮಾರುಕಟ್ಟೆಗಳಲ್ಲಿ ಭತ್ತ, ರಾಗಿ, ಜೋಳ, ಅಡಿಕೆ ಮತ್ತು ಕೊಬ್ಬರಿ ಸೇರಿದಂತೆ ಎಲ್ಲಾ ಬೆಳೆಗಳ ಬೆಲೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರುವ ದೃಷ್ಠಿಯಿಂದ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು ಬೆಂಬಲ ಬೆಲೆಯಡಿ ರೈತರ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆಗಳಲ್ಲಿ ಬೆಲೆ ಕುಸಿತ ಸಾಮಾನ್ಯ ಎಂದು ಒಪ್ಪಿಕೊಂಡರು. “ಇದೇ ಕಾರಣಕ್ಕಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ನೀಡಿ ರೈತರಿಂದ ಬೆಳೆಯನ್ನು ಖರೀದಿ ಮಾಡಲಾಗುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಮಹಾಪೂರ ಬಂದಿದೆ. ಅತಿವೃಷ್ಟಿಯಾಗಿ 25 ಜಿಲ್ಲೆಗಳಲ್ಲಿ ಬೆಳೆ ಹಾನಿ ಆಗಿದೆ. ಮನೆಗಳು ಬಿದ್ದುಹೋಗಿವೆ. ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ನೀರಿನಲ್ಲಿ ಮುಳುಗಡೆಯಾಗಿದೆ. ಭತ್ತ, ರಾಗಿ ಬೆಳೆಯು ನೀರಿನಲ್ಲಿ ಕೊಚ್ಚಿಹೋಗಿದ್ದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದ್ದರಿಂದ ರೈತರಿಗೆ ಶಕ್ತಿ ತುಂಬಲು ಬೆಳೆಹಾನಿಗೊಳಗಾಗಿರುವ ರೈತರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಭತ್ತವನ್ನು ಬೆಳೆಯಲಾಗುತ್ತಿದೆ. ಈ ಬಾರಿ ಮಳೆ ಸುರಿದು ಬೆಳೆಯೆಲ್ಲವೂ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಸರ್ಕಾರ ಧಾವಿಸಲಿದೆ. ನವೆಂಬರ್ 1 ರಿಂದ ಬೆಳೆಹಾನಿ ಕುರಿತು ನೋಂದಣಿ ಮಾಡಿಕೊಳ್ಳಲಾಗುವುದು. ಡಿಸೆಂಬರ್ 1 ರಿಂದ ಖರೀದಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿದ 1835 ರೂ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶೇಂಗಾ, ಸೂರ್ಯಕಾಂತಿ, ಹೆಸರು ಮೊದಲಾದ ಬೆಳೆಗಳಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಆ ಕಾರಣಕ್ಕಾಗಿಯೇ ಈ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನಿಗದಿಪಡಿಸಲಾಗಿದೆ.  ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಿ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತೇವೆ ಎಂದರು.

ಮಹಾಮಳೆಗೆ ಮನೆಗಳನ್ನು ಕಳೆದುಕೊಂಡಂವರಿಗೆ 5 ಲಕ್ಷ ರೂಪಾಯಿ ನೀಡಿ ಮನೆ ಕಟ್ಟಿಸಿಕೊಡುವ ಕೆಲಸ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬಡವರು, ಹಿಂದುಳಿದವರು, ದೀನದಲಿತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಕೇಂದ್ರ ಸರ್ಕಾರವೂ ಕಳೆದ 6 ವರ್ಷಗಳಲ್ಲಿ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಎಲ್ಲಾ ವಿಷಯಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರವೂ ಸೇರಿದಂತೆ 4 ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಪ್ರತಿ 10 ಮಂದಿ ಮತದಾರರಿಗೆ ಒಬ್ಬರಂತೆ ಕಾರ್ಯಕರ್ತರನ್ನು ನೇಮಕ ಮಾಡಿದೆ. ಆ ಕಾರ್ಯಕರ್ತರು ಆ ಹತ್ತು ಮತದಾರರನ್ನು ನಿತ್ಯವು ಭೇಟಿ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮನಮುಟ್ಟುವಂತೆ ಹೇಳಿ ಬಿಜೆಪಿ ಅಭ್ಯರ್ಥಿಗಳಿಗೆ ಮತಚಲಾಯಿಸುವಂತೆ ಮನವೊಲಿಕೆ ಮಾಡುತ್ತಿದ್ದಾರೆ ಎಂದರು.

ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ವಿಧಾನ ಪರಿಷತ್ತಿನಲ್ಲಿ ನಮ್ಮ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ನಾಲ್ಕೂ ವಿಧಾನಪರಿಷತ್ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಉಳಿದ ಅವಧಿಗೂ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆಯ ವಿಷಯ ಕೇವಲ ಊಹಾಪೋಹ. ಇನ್ನುಳಿದ ಎರಡೂವರೆ ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...