Homeಕರ್ನಾಟಕಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ - ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ – ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

- Advertisement -
- Advertisement -

ರಾಜ್ಯದ ಮಾರುಕಟ್ಟೆಗಳಲ್ಲಿ ಭತ್ತ, ರಾಗಿ, ಜೋಳ, ಅಡಿಕೆ ಮತ್ತು ಕೊಬ್ಬರಿ ಸೇರಿದಂತೆ ಎಲ್ಲಾ ಬೆಳೆಗಳ ಬೆಲೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರುವ ದೃಷ್ಠಿಯಿಂದ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು ಬೆಂಬಲ ಬೆಲೆಯಡಿ ರೈತರ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆಗಳಲ್ಲಿ ಬೆಲೆ ಕುಸಿತ ಸಾಮಾನ್ಯ ಎಂದು ಒಪ್ಪಿಕೊಂಡರು. “ಇದೇ ಕಾರಣಕ್ಕಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ನೀಡಿ ರೈತರಿಂದ ಬೆಳೆಯನ್ನು ಖರೀದಿ ಮಾಡಲಾಗುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಮಹಾಪೂರ ಬಂದಿದೆ. ಅತಿವೃಷ್ಟಿಯಾಗಿ 25 ಜಿಲ್ಲೆಗಳಲ್ಲಿ ಬೆಳೆ ಹಾನಿ ಆಗಿದೆ. ಮನೆಗಳು ಬಿದ್ದುಹೋಗಿವೆ. ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ನೀರಿನಲ್ಲಿ ಮುಳುಗಡೆಯಾಗಿದೆ. ಭತ್ತ, ರಾಗಿ ಬೆಳೆಯು ನೀರಿನಲ್ಲಿ ಕೊಚ್ಚಿಹೋಗಿದ್ದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದ್ದರಿಂದ ರೈತರಿಗೆ ಶಕ್ತಿ ತುಂಬಲು ಬೆಳೆಹಾನಿಗೊಳಗಾಗಿರುವ ರೈತರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಭತ್ತವನ್ನು ಬೆಳೆಯಲಾಗುತ್ತಿದೆ. ಈ ಬಾರಿ ಮಳೆ ಸುರಿದು ಬೆಳೆಯೆಲ್ಲವೂ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಸರ್ಕಾರ ಧಾವಿಸಲಿದೆ. ನವೆಂಬರ್ 1 ರಿಂದ ಬೆಳೆಹಾನಿ ಕುರಿತು ನೋಂದಣಿ ಮಾಡಿಕೊಳ್ಳಲಾಗುವುದು. ಡಿಸೆಂಬರ್ 1 ರಿಂದ ಖರೀದಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿದ 1835 ರೂ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶೇಂಗಾ, ಸೂರ್ಯಕಾಂತಿ, ಹೆಸರು ಮೊದಲಾದ ಬೆಳೆಗಳಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಆ ಕಾರಣಕ್ಕಾಗಿಯೇ ಈ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನಿಗದಿಪಡಿಸಲಾಗಿದೆ.  ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಿ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತೇವೆ ಎಂದರು.

ಮಹಾಮಳೆಗೆ ಮನೆಗಳನ್ನು ಕಳೆದುಕೊಂಡಂವರಿಗೆ 5 ಲಕ್ಷ ರೂಪಾಯಿ ನೀಡಿ ಮನೆ ಕಟ್ಟಿಸಿಕೊಡುವ ಕೆಲಸ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬಡವರು, ಹಿಂದುಳಿದವರು, ದೀನದಲಿತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಕೇಂದ್ರ ಸರ್ಕಾರವೂ ಕಳೆದ 6 ವರ್ಷಗಳಲ್ಲಿ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಎಲ್ಲಾ ವಿಷಯಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರವೂ ಸೇರಿದಂತೆ 4 ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಪ್ರತಿ 10 ಮಂದಿ ಮತದಾರರಿಗೆ ಒಬ್ಬರಂತೆ ಕಾರ್ಯಕರ್ತರನ್ನು ನೇಮಕ ಮಾಡಿದೆ. ಆ ಕಾರ್ಯಕರ್ತರು ಆ ಹತ್ತು ಮತದಾರರನ್ನು ನಿತ್ಯವು ಭೇಟಿ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮನಮುಟ್ಟುವಂತೆ ಹೇಳಿ ಬಿಜೆಪಿ ಅಭ್ಯರ್ಥಿಗಳಿಗೆ ಮತಚಲಾಯಿಸುವಂತೆ ಮನವೊಲಿಕೆ ಮಾಡುತ್ತಿದ್ದಾರೆ ಎಂದರು.

ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ವಿಧಾನ ಪರಿಷತ್ತಿನಲ್ಲಿ ನಮ್ಮ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ನಾಲ್ಕೂ ವಿಧಾನಪರಿಷತ್ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಉಳಿದ ಅವಧಿಗೂ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆಯ ವಿಷಯ ಕೇವಲ ಊಹಾಪೋಹ. ಇನ್ನುಳಿದ ಎರಡೂವರೆ ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...