Homeಕರ್ನಾಟಕಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ - ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

ಖರೀದಿ ಕೇಂದ್ರಗಳ ಮೂಲಕ ಬೆಳೆ ಖರೀದಿ – ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

- Advertisement -
- Advertisement -

ರಾಜ್ಯದ ಮಾರುಕಟ್ಟೆಗಳಲ್ಲಿ ಭತ್ತ, ರಾಗಿ, ಜೋಳ, ಅಡಿಕೆ ಮತ್ತು ಕೊಬ್ಬರಿ ಸೇರಿದಂತೆ ಎಲ್ಲಾ ಬೆಳೆಗಳ ಬೆಲೆ ಕುಸಿದಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಬರುವ ದೃಷ್ಠಿಯಿಂದ ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು ಬೆಂಬಲ ಬೆಲೆಯಡಿ ರೈತರ ಉತ್ಪನ್ನಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಮಾರುಕಟ್ಟೆಗಳಲ್ಲಿ ಬೆಲೆ ಕುಸಿತ ಸಾಮಾನ್ಯ ಎಂದು ಒಪ್ಪಿಕೊಂಡರು. “ಇದೇ ಕಾರಣಕ್ಕಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ನೀಡಿ ರೈತರಿಂದ ಬೆಳೆಯನ್ನು ಖರೀದಿ ಮಾಡಲಾಗುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಮಹಾಪೂರ ಬಂದಿದೆ. ಅತಿವೃಷ್ಟಿಯಾಗಿ 25 ಜಿಲ್ಲೆಗಳಲ್ಲಿ ಬೆಳೆ ಹಾನಿ ಆಗಿದೆ. ಮನೆಗಳು ಬಿದ್ದುಹೋಗಿವೆ. ಸುಮಾರು 20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ನೀರಿನಲ್ಲಿ ಮುಳುಗಡೆಯಾಗಿದೆ. ಭತ್ತ, ರಾಗಿ ಬೆಳೆಯು ನೀರಿನಲ್ಲಿ ಕೊಚ್ಚಿಹೋಗಿದ್ದರಿಂದ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಆದ್ದರಿಂದ ರೈತರಿಗೆ ಶಕ್ತಿ ತುಂಬಲು ಬೆಳೆಹಾನಿಗೊಳಗಾಗಿರುವ ರೈತರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಭತ್ತವನ್ನು ಬೆಳೆಯಲಾಗುತ್ತಿದೆ. ಈ ಬಾರಿ ಮಳೆ ಸುರಿದು ಬೆಳೆಯೆಲ್ಲವೂ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಸರ್ಕಾರ ಧಾವಿಸಲಿದೆ. ನವೆಂಬರ್ 1 ರಿಂದ ಬೆಳೆಹಾನಿ ಕುರಿತು ನೋಂದಣಿ ಮಾಡಿಕೊಳ್ಳಲಾಗುವುದು. ಡಿಸೆಂಬರ್ 1 ರಿಂದ ಖರೀದಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ನಿಗದಿಪಡಿಸಿದ 1835 ರೂ ಬೆಂಬಲ ಬೆಲೆಯಲ್ಲಿ ಭತ್ತವನ್ನು ಖರೀದಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಶೇಂಗಾ, ಸೂರ್ಯಕಾಂತಿ, ಹೆಸರು ಮೊದಲಾದ ಬೆಳೆಗಳಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ದವಾಗಿದೆ. ಆ ಕಾರಣಕ್ಕಾಗಿಯೇ ಈ ಬೆಳೆಗಳಿಗೆ ಬೆಂಬಲ ಬೆಲೆಯನ್ನೂ ನಿಗದಿಪಡಿಸಲಾಗಿದೆ.  ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಿ ರೈತರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡುತ್ತೇವೆ ಎಂದರು.

ಮಹಾಮಳೆಗೆ ಮನೆಗಳನ್ನು ಕಳೆದುಕೊಂಡಂವರಿಗೆ 5 ಲಕ್ಷ ರೂಪಾಯಿ ನೀಡಿ ಮನೆ ಕಟ್ಟಿಸಿಕೊಡುವ ಕೆಲಸ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಬಡವರು, ಹಿಂದುಳಿದವರು, ದೀನದಲಿತರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಹಲವು ಯೋಜನೆಗಳನ್ನು ರೂಪಿಸಿದ್ದಾರೆ. ಕೇಂದ್ರ ಸರ್ಕಾರವೂ ಕಳೆದ 6 ವರ್ಷಗಳಲ್ಲಿ ಜನಪರ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಈ ಎಲ್ಲಾ ವಿಷಯಗಳನ್ನು ಜನರಿಗೆ ತಿಳಿಸಿ ಮತಯಾಚನೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರವೂ ಸೇರಿದಂತೆ 4 ವಿಧಾನ ಪರಿಷತ್ ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಪ್ರತಿ 10 ಮಂದಿ ಮತದಾರರಿಗೆ ಒಬ್ಬರಂತೆ ಕಾರ್ಯಕರ್ತರನ್ನು ನೇಮಕ ಮಾಡಿದೆ. ಆ ಕಾರ್ಯಕರ್ತರು ಆ ಹತ್ತು ಮತದಾರರನ್ನು ನಿತ್ಯವು ಭೇಟಿ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮನಮುಟ್ಟುವಂತೆ ಹೇಳಿ ಬಿಜೆಪಿ ಅಭ್ಯರ್ಥಿಗಳಿಗೆ ಮತಚಲಾಯಿಸುವಂತೆ ಮನವೊಲಿಕೆ ಮಾಡುತ್ತಿದ್ದಾರೆ ಎಂದರು.

ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ವಿಧಾನ ಪರಿಷತ್ತಿನಲ್ಲಿ ನಮ್ಮ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಅನಿವಾರ್ಯವಾಗಿದೆ. ಹಾಗಾಗಿ ನಾಲ್ಕೂ ವಿಧಾನಪರಿಷತ್ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಹೆಚ್ಚು ಒತ್ತು ನೀಡಲಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಉಳಿದ ಅವಧಿಗೂ ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆಯ ವಿಷಯ ಕೇವಲ ಊಹಾಪೋಹ. ಇನ್ನುಳಿದ ಎರಡೂವರೆ ವರ್ಷವೂ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...