Homeಕರ್ನಾಟಕ‘ಶುದ್ಧ ಕನ್ನಡ’ ವಿವಾದ: ಪೋಸ್ಟರ್‌ ಡಿಲೀಟ್ ಮಾಡಿದ ಕನ್ನಡ-ಸಂಸ್ಕೃತಿ ಇಲಾಖೆ

‘ಶುದ್ಧ ಕನ್ನಡ’ ವಿವಾದ: ಪೋಸ್ಟರ್‌ ಡಿಲೀಟ್ ಮಾಡಿದ ಕನ್ನಡ-ಸಂಸ್ಕೃತಿ ಇಲಾಖೆ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸೃತಿ ಇಲಾಖೆಯು ‘ಕನ್ನಡಕ್ಕಾಗಿ ನಾವು’ ಎಂಬ ಅಭಿಯಾನವನ್ನು ಹಮ್ಮಿಕೊಂಡಿದ್ದು, ಇದರ ಭಾಗವಾಗಿ ‘ಮಾತಾಡ್ ಮಾತಾಡ್ ಕನ್ನಡ’ ಅಭಿಯಾನ ಅಕ್ಟೋಬರ್‌ 24ರಿಂದ 30ರ ವರೆಗೆ ನಡೆಯಲಿದೆ. ಇವುಗಳ ಹಲವು ರೀತಿಯ ಪೋಸ್ಟರ್‌ ಅನ್ನು ಇಲಾಖೆಯು ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್ ಮಾಡಿತ್ತು.

ಈ ಅಭಿಯಾನದ ಅಂಗವಾಗಿ ‘ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ’ ಎಂಬ ಸ್ಪರ್ಧೆಯೊಂದು ರಾಜ್ಯ ಸರ್ಕಾರ ಆಯೋಜಿಸಿತ್ತು. ಈ ಸ್ಪರ್ಧೆಯು ವಿವಾದ ಸೃಷ್ಟಿಸಿದ್ದು, ‘ಶುದ್ಧ ಕನ್ನಡ’ ಅಂದರೆ ಯಾವುದು ಎಂಬ ಪ್ರಶ್ನೆಯನ್ನು ಎತ್ತಲಾಗಿತ್ತು. ಹಲವು ಮಾದರಿಯ ಕನ್ನಡ ಆಡು ಭಾಷೆ ಇರುವ ರಾಜ್ಯದಲ್ಲಿ ಶುದ್ದ ಯಾವುದು? ಅಶುದ್ಧ ಯಾವುದು? ಇದನ್ನು ಯಾವ ಮಾನದಂಡದಲ್ಲಿ ತೀರ್ಮಾನಿಸುತ್ತಾರೆ? ಎಂಬಂತಹ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಲಾಗಿತ್ತು.

ಇದನ್ನೂ ಓದಿ: ‘ಶುದ್ಧ ಕನ್ನಡ’ ವಿವಾದ: ಕನ್ನಡ-ಸಂಸ್ಕೃತಿ ಇಲಾಖೆಗೆ ಸಾಹಿತಿಗಳ ತರಾಟೆ

ಈ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಕನ್ನಡ ಸಾಹಿತಿಗಳು ಹಾಗೂ ವಿಧ್ವಾಂಸರು ಕೂಡಾ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿವಾದಗಳ ಹಿನ್ನಲೆಯಲ್ಲಿ ಇದೀಗ ಇಲಾಖೆಯು ‘ವಿವಾದಾತ್ಮಕ ಪೋಸ್ಟರ್‌’ ಅನ್ನು ಡಿಲೀಟ್ ಮಾಡಿದೆ.

ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ!

ರಾಜ್ಯೋತ್ಸವದ ಒಂದು ವಾರಗಳ ಕಾಲ ಕನ್ನಡಮಯ ವಾತಾವರಣ ಸೃಷ್ಟಿಸಲು ಹಲವು ಕಾರ್ಯಕ್ರಮಗಳನ್ನು ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಕನ್ನಡದಲ್ಲೇ ಮಾತನಾಡುವುದು, ಕನ್ನಡದಲ್ಲೇ ವ್ಯವಹರಿಸುವುದು, ಕನ್ನಡೇತರರಿಗೆ ಕನ್ನಡ ಕಲಿಸುವುದು ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿಕೊಳ್ಳುವಂತೆ ಜನರಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರು ಮನವಿ ಮಾಡಿದ್ದರು.

ಆದರೆ, ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗಿದ್ದ ‘ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ’ಯ ಪೋಸ್ಟರ್‌ ಒಂದು ವಿವಾದವನ್ನು ಉಂಟುಮಾಡಿತ್ತು. ಅದರಲ್ಲಿ ಸಚಿವ ಸುನೀಲ್‌ ಕುಮಾರ್ ಭಾವಚಿತ್ರ, ಸರ್ಕಾರದ ಲೋಗೋವನ್ನು ಕಾಣಬಹುದಾಗಿದೆ.

ಇದನ್ನೂ ಓದಿ: ‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ವಿಧ್ವಾಂಸರುಗಳು, ಭಾಷೆಯಲ್ಲಿ ಶುದ್ಧ, ಅಶುದ್ಧ ಎಂಬುದು ಇಲ್ಲ. ಕನ್ನಡದೊಂದಿಗೆ ಬೆರೆತಿರುವ ಇತರ ಭಾಷೆಗಳ ಪದಗಳನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದರು.

ನಂತರ ಪೋಸ್ಟರ್‌ ಬಗ್ಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಎಸ್‌.ರಂಗಪ್ಪ, “ಶುದ್ಧ, ಅಶುದ್ಧ ಎನ್ನಲು ಸಾಧ್ಯವಿಲ್ಲ. ಕನ್ನಡ ಪದಗಳು ಯಾವುದೂ ಅಶುದ್ಧವಲ್ಲ. ಪೋಸ್ಟರ್‌ಅನ್ನು ಪರಿಶೀಲಿಸಲಾಗುವುದು” ಎಂದು ಹೇಳಿದ್ದರು.

ಇದೀಗ ಇಲಾಖೆಯು ತನ್ನ ಫೇಸ್‌ಬುಕ್ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದ ಪೋಸ್ಟರ್‌ ಅನ್ನು ಡಿಲೀಟ್ ಮಾಡಿ ವಿವಾದಕ್ಕೆ ಅಂತ್ಯ ಹಾಡಿದೆ.

‘ಶುದ್ಧ ಕನ್ನಡ’ ಮಾತನಾಡುವ ಸ್ಪರ್ಧೆಯ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ, ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ, ಕನ್ನಡ ಪುಸ್ತಕ ಪ್ರಾಧಿಕಾರಿ ಮಾಜಿ ಅಧ್ಯಕ್ಷರು, ಚಿಂತಕರಾದ ಡಾ.ಬಂಜಗೆರೆ ಜಯಪ್ರಕಾಶ್‌, ಭಾಷಾತಜ್ಞ ಡಾ.ರಂಗನಾಥ್‌ ಕಂಟನಕುಂಟೆ ಸೇರಿದಂತೆ ಹಲವಾರು ಸಾಹಿತಿಗಳು, ವಿಧ್ವಾಂಸರು ಕಿಡಿ ಕಾರಿದ್ದರು.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಗಳಿಗೆ ಹೂವು, ರಂಗೋಲಿ ಹಾಕಿ ಪ್ರತಿಭಟನೆ ಮಾಡಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...