Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...