Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...