Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...