Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...