Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...