Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...