Homeಮುಖಪುಟಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

ಜುಲೈ 12ಕ್ಕೆ ಪುರಿ ಜಗನ್ನಾಥ ರಥಯಾತ್ರೆ: ಸೀಮಿತ ಭಕ್ತರಿಗೆ ಅವಕಾಶ

- Advertisement -
- Advertisement -

ದೊಡ್ಡ ಸಭೆ, ಸಮಾರಂಭಗಳು ಕೊರೊನಾ ಸೋಂಕಿನ ಹರಡುವಿಕೆಯನ್ನು ಮತ್ತಷ್ಟು ಹೆಚ್ಚಿಸುತ್ತವೆ ಎಂದು ತಿಳಿದಿದ್ದರೂ ಕೂಡ, ಒಡಿಶಾ ಸರ್ಕಾರ ಜುಲೈ 12 ರಂದು ಪುರಿಯಲ್ಲಿ ಜಗನ್ನಾಥ ರಥಯಾತ್ರೆ ನಿಗದಿಯಂತೆ ನಡೆಯಲಿದೆ ಎಂದು ಘೋಷಿಸಿದೆ.

ಪ್ರತಿ ವರ್ಷ ರಥಯಾತ್ರೆ ನಡೆಯಲಿದ್ದು, ಭಗವಾನ್ ಜಗನ್ನಾಥ, ಭಗವಾನ್ ಬಾಲಭದ್ರ ಮತ್ತು ದೇವಿ ಸುಭದ್ರಾ ರಥಗಳನ್ನು ಸಾವಿರಾರು ಭಕ್ತರು ಎಳೆಯುತ್ತಾರೆ. ಕೊರೊನಾ ಕಾರಣದಿಂದ ಕಳೆದ ಬಾರಿಯು ಸೀಮಿತ ಜನರಿಗೆ ಅವಕಾಶ ನೀಡಲಾಗಿತ್ತು. ಈ ಬಾರಿಯು ಸೀಮಿತ 500 ಮಂದಿಗೆ ಅವಕಾಶ ನೀಡಲಾಗಿದೆ.

ಜುಲೈ 12 ರಂದು ನಡೆಯಲಿರುವ ರಥಯಾತ್ರೆಯಲ್ಲಿ ಭಕ್ತರು ಭಾಗವಹಿಸದಂತೆ ಪುರಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಲಿದೆ ಎಂದು ವಿಶೇಷ ಪರಿಹಾರ ಆಯುಕ್ತ ಪಿ.ಕೆ.ಜೆನಾ ಹೇಳಿದ್ದಾರೆ. ಪುರಿ ಬಿಟ್ಟು ಬೇರೆ ಯಾವುದೇ ಸ್ಥಳದಲ್ಲಿ ಯಾತ್ರೆ ನಡೆಯುವುದಿಲ್ಲ. ಆದರೆ, ದೇವಾಲಯದ ಆವರಣದಲ್ಲಿ ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

“ಈ ವರ್ಷ ರಥಯಾತ್ರೆಯನ್ನು ಜಗನ್ನಾಥ ದೇವಸ್ಥಾನದ ಮುಂಭಾಗದ ಭವ್ಯವಾದ ರಸ್ತೆಯಾದ ಬಾದದಂಡದಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಮಾಡಿದಂತೆ ರಾಜ್ಯದಲ್ಲಿ ಬೇರೆಲ್ಲಿಯೂ ಯಾತ್ರೆ ನಡೆಸಲಾಗುವುದಿಲ್ಲ. ಆದಾಗ್ಯೂ, ರಥಯಾತ್ರೆಗೆ ಸಂಬಂಧಿಸಿದ ಆಚರಣೆಗಳನ್ನು ಆವರಣದೊಳಗಿನ ದೇವಾಲಯಗಳಲ್ಲಿ ಮಾಡಬಹುದು. ಪುರಿಯನ್ನು ಹೊರತುಪಡಿಸಿ ಒಡಿಶಾದ ಸ್ಥಳಗಳಲ್ಲಿ ಅಥವಾ ದೇವಾಲಯಗಳಲ್ಲಿ ಯಾವುದೇ ರಥಗಳನ್ನು ಎಳೆಯಲಾಗುವುದಿಲ್ಲ” ಎಂದು ಅಧಿಕಾರಿ ತಿಳಿಸಿದ್ದಾರೆ.

“ಭಗವಾನ್ ಜಗನ್ನಾಥನ ಪುರೋಹಿತರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಅಂತಿಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಹೊಂದಿರುವವರು ಅಥವಾ ರಥಯಾತ್ರೆಗೆ ಮುನ್ನ 48 ಗಂಟೆಗಳ ಒಳಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ತಂದವರಿಗೆ ಮಾತ್ರ ಆಚರಣೆಗಳಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ. ರಥಯಾತ್ರೆಯಲ್ಲಿ 500 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡುವುದಿಲ್ಲ” ಎಂದು ಹೇಳಿದ್ದಾರೆ.

ರಥಯಾತ್ರೆಯಲ್ಲಿ ರೈಲುಗಳು, ಬಸ್ಸುಗಳು ಮತ್ತು ಖಾಸಗಿ ವಾಹನಗಳನ್ನು ಪುರಿ ಪಟ್ಟಣಕ್ಕೆ ಪ್ರವೇಶಿಸಲು ಅನುಮತಿಸುವುದಿಲ್ಲ. ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡೇ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಗುತ್ತದೆ ಎಂದು ಸರ್ಕಾರ ಹೇಳಿದೆ. ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೊದಲು ಪುರಿ ಜಗನ್ನಾಥ ಯಾತ್ರೆಯಲ್ಲಿ ದಿನಕ್ಕೆ ಸುಮಾರು 8 ಲಕ್ಷ ಭಕ್ತರು ಸೇರುತ್ತಿದ್ದರು ಎನ್ನಲಾಗಿದೆ.


ಇದನ್ನೂ ಓದಿ: ಕುಂಭಮೇಳದಿಂದ ಬಂದ ವ್ಯಕ್ತಿಯಿಂದ ಬೆಂಗಳೂರಿನ 33 ಜನರಿಗೆ ಕೊರೋನಾ: ಕುಂಭಯಾತ್ರಿಗಳೇ ಸುಪರ್-ಸ್ಪ್ರೆಡರ್ಸ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...