Homeಮುಖಪುಟಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

ಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

- Advertisement -
- Advertisement -

2024ರ ಲೋಕಸಭಾ ಚುನಾವಣೆಗೂ ಮುನ್ನ ದೇಶದಲ್ಲಿ ಒಡೆದುಹೋಗಿರುವ ಪ್ರತಿಪಕ್ಷಗಳನ್ನು ಒಟ್ಟು ಸೇರಿಸು ದೃಷ್ಟಿಯಿಂದ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುರುವಾರ ಸಂಜೆ ಭೇಟಿಯಾದರು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್  ಅವರು ದೆಹಲಿಯಲ್ಲಿರುವ ಖರ್ಗೆ ಅವರ ಮನೆಗೆ ಬೇಟಿ ನೀಡಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್‌ ಅವರು, ”ಎಲ್ಲ ವಿರೋಧ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಯಬೇಕು ಎಂದು ನಾನು ಬಯಸುತ್ತೇನೆ. ನಾವು ಮಮತಾ ಬ್ಯಾನರ್ಜಿ, [ಅರವಿಂದ್] ಕೇಜ್ರಿವಾಲ್.. ಬಳಿಹೋಗಿ ಅವರೊಂದಿಗೂ ಮಾತನಾಡಬೇಕು. ನಾವು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಎಲ್ಲರನ್ನು ಕರೆದುಕೊಂಡು ಮುಂದೆ ಸಾಗುತ್ತೇವೆ” ಎಂದು ಶರದ್ ಪವಾರ್ ಹೇಳಿದ್ದಾರೆ.

ಆ ಬಳಿಕ ಖರ್ಗೆ ಮಾತನಾಡಿ, ”ಶರದ್ ಪವಾರ್ ಅವರು ಮುಂಬೈನಿಂದ ನಮ್ಮನ್ನು ಭೇಟಿ ಮಾಡಲು ಬಂದು, ನಮಗೆ ಮಾರ್ಗದರ್ಶನ ನೀಡಿದ್ದು ನನಗೆ ಸಂತೋಷವಾಗಿದೆ. ನಿನ್ನೆ, ನಾನು ಮತ್ತು ರಾಹುಲ್ ಗಾಂಧಿ ಅವರು ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ದೇಶದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತೇವೆ ಎಂದು ಮಾತುಕತೆ ನಡೆಸಿದ್ದೇವೆ” ಎಂದು ಹೇಳಿದರು.

”ಇಂದು ದೇಶದಲ್ಲಿ ನಡೆಯುತ್ತಿರುವ ಘಟನೆಗಳು… ದೇಶವನ್ನು ಉಳಿಸಲು, ಪ್ರಜಾಪ್ರಭುತ್ವವನ್ನು ಉಳಿಸಲು, ಸಂವಿಧಾನ ಮತ್ತು ವಾಕ್ ಸ್ವಾತಂತ್ರ್ಯವನ್ನು ರಕ್ಷಿಸಲು… ಸರ್ಕಾರಿ ಸಂಸ್ಥೆಗಳ ದುರುಪಯೋಗ, ಯುವಕರ ಉದ್ಯೋಗಕ್ಕಾಗಿ ಹಣದುಬ್ಬರ ಮುಂತಾದ ವಿಷಯಗಳಲ್ಲಿ ನಾವು ಒಂದಾಗಿ ಹೋರಾಡಲು ಸಿದ್ಧರಿದ್ದೇವೆ” ಎಂದು ಹೇಳಿದರು.

“ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಖರ್ಗೆ ಮತ್ತು ಪವಾರ್ ಜೀ ಹೇಳಿದ್ದಾರೆ. ಇದು ಪ್ರಾರಂಭವಾಗಿದೆ ಮತ್ತು ಈ ಪ್ರಕ್ರಿಯೆಗೆ ಎಲ್ಲಾ ಪಕ್ಷಗಳು ಬದ್ಧವಾಗಿವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಖರ್ಗೆ ಮತ್ತು ಗಾಂಧಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲ ವಿರೋಧ ಪಕ್ಷಗಳು ಒಂದೇ ವೇದಿಕೆಯಲ್ಲಿ ಸೇರುವ ಮಾತುಕತೆ ನಡೆಸಲಾಗುತ್ತಿದೆ.

ಪ್ರತಿಪಕ್ಷಗಳ ಏಕತೆಯನ್ನು ಭದ್ರಪಡಿಸುವ ಪ್ರಯತ್ನಗಳು ಈ ವಾರ ವೇಗವನ್ನು ಪಡೆದುಕೊಳ್ಳುತ್ತಿವೆ. ನಿತೀಶ್ ಕುಮಾರ್ ಅವರು ಎಡಪಕ್ಷಗಳ ಹಿರಿಯ ಅನುಭವಿ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ಚರ್ಚೆಗಳನ್ನು ಮಾಡಬೇಕಿರುವುದರಿಂದ ಎಲ್ಲ ನಾಯಕರು ಏಕತೆಯ ಮಾತುಕತೆಗಳನ್ನು ಒಪ್ಪಿಕೊಂಡು ಮುಂದುವರೆಯುವ ಸಾಧ್ಯತೆಯಿದೆ. ಅತಿ ಶೀಘ್ರದಲ್ಲಿಯೇ ವಿಪಕ್ಷಗಳ ಉನ್ನತ ನಾಯಕರ ಸಭೆಯನ್ನು ಕರೆಯಲು ಕಾಂಗ್ರೆಸ್ ಯೋಜಿಸಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ಬಳಿಕ ನಿತೀಶ್ ಕುಮಾರ್ ಅವರು ದೆಹಲಿಯಿಂದ ತೆರಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ನಿತೀಶ್ ಕುಮಾರ್ ಅವರು ಸೀತಾರಾಮ್ ಯೆಚೂರಿ ಅವರನ್ನು ಭೇಟಿ ಮಾಡಿದ ನಂತರ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ಸ್ಟ್ (ಸಿಪಿಐ-ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ರಾಜ್ಯ ಮಟ್ಟದಲ್ಲಿ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

”ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನಗಳು ವೇಗವನ್ನು ಪಡೆದುಕೊಂಡಿವೆ. ಪ್ರತಿಪಕ್ಷಗಳ ಒಕ್ಕೂಟವನ್ನು ರಚಿಸಲಾಗುವುದು ಮತ್ತು ರಾಜ್ಯ ಮಟ್ಟದಲ್ಲಿ ಸ್ಥಾನ ಹೊಂದಾಣಿಕೆಗಳನ್ನು ಮಾಡಲಾಗುತ್ತದೆ. ಅದು ಸಾಕಾರಗೊಂಡರೆ ಚುನಾವಣೆ ನಂತರವೇ ತೃತೀಯ ರಂಗ ಬರಲಿದೆ” ಎಂದು ಸೀತಾರಾಂ ಯೆಚೂರಿ ಹೇಳಿದರು.

”ಭಾರತದಲ್ಲಿ 1996ರಲ್ಲಿ ಯುನೈಟೆಡ್ ಫ್ರಂಟ್‌ನಂತಹ ಚುನಾವಣಾ ನಂತರದ ರಂಗಗಳನ್ನು ರಚಿಸಲಾಗಿವೆ. 1998 ರಲ್ಲಿ ಚುನಾವಣೆಯ ನಂತರ NDA ರಚನೆಯಾಯಿತು. 2004ರಲ್ಲಿ ಚುನಾವಣೆ ಬಳಿಕ ಯುಪಿಎ ರಚನೆ ಮಾಡಲಾಯಿತು” ಎಂದು ಯೆಚೂರಿ ಹೇಳಿದರು.

ಆ ಬಳಿಕ ಟ್ವೀಟ್ ಮಾಡಿದ ಯೆಚೂರಿ ಅವರು, ”ಬಿಜೆಪಿ ಮತ್ತು ಮೋದಿ ಸರ್ಕಾರದಿಂದ ತೀವ್ರ ಹಲ್ಲೆಗೊಳಗಾಗಿರುವ ಭಾರತೀಯ ಗಣರಾಜ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳನ್ನು ಮುಂದುವರಿಸಲು ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಕೈಜೋಡಿಸುತ್ತೇನೆ. ದೇಶ, ದೇಶದ ಜನರು ಮತ್ತು ಜನರ ಜೀವನೋಪಾಯ ಉಳಿಸಲು ಬಿಜೆಪಿಯನ್ನು ಸೋಲಿಸಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...