Homeಮುಖಪುಟಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

ಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

- Advertisement -
- Advertisement -

2024ರ ಲೋಕಸಭಾ ಚುನಾವಣೆಗೂ ಮುನ್ನ ದೇಶದಲ್ಲಿ ಒಡೆದುಹೋಗಿರುವ ಪ್ರತಿಪಕ್ಷಗಳನ್ನು ಒಟ್ಟು ಸೇರಿಸು ದೃಷ್ಟಿಯಿಂದ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುರುವಾರ ಸಂಜೆ ಭೇಟಿಯಾದರು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್  ಅವರು ದೆಹಲಿಯಲ್ಲಿರುವ ಖರ್ಗೆ ಅವರ ಮನೆಗೆ ಬೇಟಿ ನೀಡಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್‌ ಅವರು, ”ಎಲ್ಲ ವಿರೋಧ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಯಬೇಕು ಎಂದು ನಾನು ಬಯಸುತ್ತೇನೆ. ನಾವು ಮಮತಾ ಬ್ಯಾನರ್ಜಿ, [ಅರವಿಂದ್] ಕೇಜ್ರಿವಾಲ್.. ಬಳಿಹೋಗಿ ಅವರೊಂದಿಗೂ ಮಾತನಾಡಬೇಕು. ನಾವು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಎಲ್ಲರನ್ನು ಕರೆದುಕೊಂಡು ಮುಂದೆ ಸಾಗುತ್ತೇವೆ” ಎಂದು ಶರದ್ ಪವಾರ್ ಹೇಳಿದ್ದಾರೆ.

ಆ ಬಳಿಕ ಖರ್ಗೆ ಮಾತನಾಡಿ, ”ಶರದ್ ಪವಾರ್ ಅವರು ಮುಂಬೈನಿಂದ ನಮ್ಮನ್ನು ಭೇಟಿ ಮಾಡಲು ಬಂದು, ನಮಗೆ ಮಾರ್ಗದರ್ಶನ ನೀಡಿದ್ದು ನನಗೆ ಸಂತೋಷವಾಗಿದೆ. ನಿನ್ನೆ, ನಾನು ಮತ್ತು ರಾಹುಲ್ ಗಾಂಧಿ ಅವರು ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ದೇಶದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತೇವೆ ಎಂದು ಮಾತುಕತೆ ನಡೆಸಿದ್ದೇವೆ” ಎಂದು ಹೇಳಿದರು.

”ಇಂದು ದೇಶದಲ್ಲಿ ನಡೆಯುತ್ತಿರುವ ಘಟನೆಗಳು… ದೇಶವನ್ನು ಉಳಿಸಲು, ಪ್ರಜಾಪ್ರಭುತ್ವವನ್ನು ಉಳಿಸಲು, ಸಂವಿಧಾನ ಮತ್ತು ವಾಕ್ ಸ್ವಾತಂತ್ರ್ಯವನ್ನು ರಕ್ಷಿಸಲು… ಸರ್ಕಾರಿ ಸಂಸ್ಥೆಗಳ ದುರುಪಯೋಗ, ಯುವಕರ ಉದ್ಯೋಗಕ್ಕಾಗಿ ಹಣದುಬ್ಬರ ಮುಂತಾದ ವಿಷಯಗಳಲ್ಲಿ ನಾವು ಒಂದಾಗಿ ಹೋರಾಡಲು ಸಿದ್ಧರಿದ್ದೇವೆ” ಎಂದು ಹೇಳಿದರು.

“ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಖರ್ಗೆ ಮತ್ತು ಪವಾರ್ ಜೀ ಹೇಳಿದ್ದಾರೆ. ಇದು ಪ್ರಾರಂಭವಾಗಿದೆ ಮತ್ತು ಈ ಪ್ರಕ್ರಿಯೆಗೆ ಎಲ್ಲಾ ಪಕ್ಷಗಳು ಬದ್ಧವಾಗಿವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಖರ್ಗೆ ಮತ್ತು ಗಾಂಧಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲ ವಿರೋಧ ಪಕ್ಷಗಳು ಒಂದೇ ವೇದಿಕೆಯಲ್ಲಿ ಸೇರುವ ಮಾತುಕತೆ ನಡೆಸಲಾಗುತ್ತಿದೆ.

ಪ್ರತಿಪಕ್ಷಗಳ ಏಕತೆಯನ್ನು ಭದ್ರಪಡಿಸುವ ಪ್ರಯತ್ನಗಳು ಈ ವಾರ ವೇಗವನ್ನು ಪಡೆದುಕೊಳ್ಳುತ್ತಿವೆ. ನಿತೀಶ್ ಕುಮಾರ್ ಅವರು ಎಡಪಕ್ಷಗಳ ಹಿರಿಯ ಅನುಭವಿ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ಚರ್ಚೆಗಳನ್ನು ಮಾಡಬೇಕಿರುವುದರಿಂದ ಎಲ್ಲ ನಾಯಕರು ಏಕತೆಯ ಮಾತುಕತೆಗಳನ್ನು ಒಪ್ಪಿಕೊಂಡು ಮುಂದುವರೆಯುವ ಸಾಧ್ಯತೆಯಿದೆ. ಅತಿ ಶೀಘ್ರದಲ್ಲಿಯೇ ವಿಪಕ್ಷಗಳ ಉನ್ನತ ನಾಯಕರ ಸಭೆಯನ್ನು ಕರೆಯಲು ಕಾಂಗ್ರೆಸ್ ಯೋಜಿಸಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ಬಳಿಕ ನಿತೀಶ್ ಕುಮಾರ್ ಅವರು ದೆಹಲಿಯಿಂದ ತೆರಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ನಿತೀಶ್ ಕುಮಾರ್ ಅವರು ಸೀತಾರಾಮ್ ಯೆಚೂರಿ ಅವರನ್ನು ಭೇಟಿ ಮಾಡಿದ ನಂತರ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ಸ್ಟ್ (ಸಿಪಿಐ-ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ರಾಜ್ಯ ಮಟ್ಟದಲ್ಲಿ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

”ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನಗಳು ವೇಗವನ್ನು ಪಡೆದುಕೊಂಡಿವೆ. ಪ್ರತಿಪಕ್ಷಗಳ ಒಕ್ಕೂಟವನ್ನು ರಚಿಸಲಾಗುವುದು ಮತ್ತು ರಾಜ್ಯ ಮಟ್ಟದಲ್ಲಿ ಸ್ಥಾನ ಹೊಂದಾಣಿಕೆಗಳನ್ನು ಮಾಡಲಾಗುತ್ತದೆ. ಅದು ಸಾಕಾರಗೊಂಡರೆ ಚುನಾವಣೆ ನಂತರವೇ ತೃತೀಯ ರಂಗ ಬರಲಿದೆ” ಎಂದು ಸೀತಾರಾಂ ಯೆಚೂರಿ ಹೇಳಿದರು.

”ಭಾರತದಲ್ಲಿ 1996ರಲ್ಲಿ ಯುನೈಟೆಡ್ ಫ್ರಂಟ್‌ನಂತಹ ಚುನಾವಣಾ ನಂತರದ ರಂಗಗಳನ್ನು ರಚಿಸಲಾಗಿವೆ. 1998 ರಲ್ಲಿ ಚುನಾವಣೆಯ ನಂತರ NDA ರಚನೆಯಾಯಿತು. 2004ರಲ್ಲಿ ಚುನಾವಣೆ ಬಳಿಕ ಯುಪಿಎ ರಚನೆ ಮಾಡಲಾಯಿತು” ಎಂದು ಯೆಚೂರಿ ಹೇಳಿದರು.

ಆ ಬಳಿಕ ಟ್ವೀಟ್ ಮಾಡಿದ ಯೆಚೂರಿ ಅವರು, ”ಬಿಜೆಪಿ ಮತ್ತು ಮೋದಿ ಸರ್ಕಾರದಿಂದ ತೀವ್ರ ಹಲ್ಲೆಗೊಳಗಾಗಿರುವ ಭಾರತೀಯ ಗಣರಾಜ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳನ್ನು ಮುಂದುವರಿಸಲು ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಕೈಜೋಡಿಸುತ್ತೇನೆ. ದೇಶ, ದೇಶದ ಜನರು ಮತ್ತು ಜನರ ಜೀವನೋಪಾಯ ಉಳಿಸಲು ಬಿಜೆಪಿಯನ್ನು ಸೋಲಿಸಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...