Homeಮುಖಪುಟಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

ಬಿಜೆಪಿ ಸೋಲಿಸುವ ಉದ್ದೇಶ; ಖರ್ಗೆ, ರಾಹುಲ್‌ರನ್ನು ಭೇಟಿಯಾದ ಶರದ್ ಪವಾರ್

- Advertisement -
- Advertisement -

2024ರ ಲೋಕಸಭಾ ಚುನಾವಣೆಗೂ ಮುನ್ನ ದೇಶದಲ್ಲಿ ಒಡೆದುಹೋಗಿರುವ ಪ್ರತಿಪಕ್ಷಗಳನ್ನು ಒಟ್ಟು ಸೇರಿಸು ದೃಷ್ಟಿಯಿಂದ ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಗುರುವಾರ ಸಂಜೆ ಭೇಟಿಯಾದರು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್  ಅವರು ದೆಹಲಿಯಲ್ಲಿರುವ ಖರ್ಗೆ ಅವರ ಮನೆಗೆ ಬೇಟಿ ನೀಡಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅವರು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್ ಪವಾರ್‌ ಅವರು, ”ಎಲ್ಲ ವಿರೋಧ ಪಕ್ಷಗಳ ನಾಯಕರೊಂದಿಗೆ ಮಾತುಕತೆ ನಡೆಯಬೇಕು ಎಂದು ನಾನು ಬಯಸುತ್ತೇನೆ. ನಾವು ಮಮತಾ ಬ್ಯಾನರ್ಜಿ, [ಅರವಿಂದ್] ಕೇಜ್ರಿವಾಲ್.. ಬಳಿಹೋಗಿ ಅವರೊಂದಿಗೂ ಮಾತನಾಡಬೇಕು. ನಾವು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಎಲ್ಲರನ್ನು ಕರೆದುಕೊಂಡು ಮುಂದೆ ಸಾಗುತ್ತೇವೆ” ಎಂದು ಶರದ್ ಪವಾರ್ ಹೇಳಿದ್ದಾರೆ.

ಆ ಬಳಿಕ ಖರ್ಗೆ ಮಾತನಾಡಿ, ”ಶರದ್ ಪವಾರ್ ಅವರು ಮುಂಬೈನಿಂದ ನಮ್ಮನ್ನು ಭೇಟಿ ಮಾಡಲು ಬಂದು, ನಮಗೆ ಮಾರ್ಗದರ್ಶನ ನೀಡಿದ್ದು ನನಗೆ ಸಂತೋಷವಾಗಿದೆ. ನಿನ್ನೆ, ನಾನು ಮತ್ತು ರಾಹುಲ್ ಗಾಂಧಿ ಅವರು ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರೊಂದಿಗೆ ದೇಶದಲ್ಲಿ ವಿರೋಧ ಪಕ್ಷಗಳನ್ನು ಒಗ್ಗೂಡಿಸುತ್ತೇವೆ ಎಂದು ಮಾತುಕತೆ ನಡೆಸಿದ್ದೇವೆ” ಎಂದು ಹೇಳಿದರು.

”ಇಂದು ದೇಶದಲ್ಲಿ ನಡೆಯುತ್ತಿರುವ ಘಟನೆಗಳು… ದೇಶವನ್ನು ಉಳಿಸಲು, ಪ್ರಜಾಪ್ರಭುತ್ವವನ್ನು ಉಳಿಸಲು, ಸಂವಿಧಾನ ಮತ್ತು ವಾಕ್ ಸ್ವಾತಂತ್ರ್ಯವನ್ನು ರಕ್ಷಿಸಲು… ಸರ್ಕಾರಿ ಸಂಸ್ಥೆಗಳ ದುರುಪಯೋಗ, ಯುವಕರ ಉದ್ಯೋಗಕ್ಕಾಗಿ ಹಣದುಬ್ಬರ ಮುಂತಾದ ವಿಷಯಗಳಲ್ಲಿ ನಾವು ಒಂದಾಗಿ ಹೋರಾಡಲು ಸಿದ್ಧರಿದ್ದೇವೆ” ಎಂದು ಹೇಳಿದರು.

“ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಖರ್ಗೆ ಮತ್ತು ಪವಾರ್ ಜೀ ಹೇಳಿದ್ದಾರೆ. ಇದು ಪ್ರಾರಂಭವಾಗಿದೆ ಮತ್ತು ಈ ಪ್ರಕ್ರಿಯೆಗೆ ಎಲ್ಲಾ ಪಕ್ಷಗಳು ಬದ್ಧವಾಗಿವೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಖರ್ಗೆ ಮತ್ತು ಗಾಂಧಿ ಅವರನ್ನು ಭೇಟಿಯಾದ ಒಂದು ದಿನದ ನಂತರ ಈ ಸಭೆ ನಡೆಸಲಾಯಿತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲ ವಿರೋಧ ಪಕ್ಷಗಳು ಒಂದೇ ವೇದಿಕೆಯಲ್ಲಿ ಸೇರುವ ಮಾತುಕತೆ ನಡೆಸಲಾಗುತ್ತಿದೆ.

ಪ್ರತಿಪಕ್ಷಗಳ ಏಕತೆಯನ್ನು ಭದ್ರಪಡಿಸುವ ಪ್ರಯತ್ನಗಳು ಈ ವಾರ ವೇಗವನ್ನು ಪಡೆದುಕೊಳ್ಳುತ್ತಿವೆ. ನಿತೀಶ್ ಕುಮಾರ್ ಅವರು ಎಡಪಕ್ಷಗಳ ಹಿರಿಯ ಅನುಭವಿ ಸೀತಾರಾಮ್ ಯೆಚೂರಿ ಮತ್ತು ಡಿ ರಾಜಾ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ಚರ್ಚೆಗಳನ್ನು ಮಾಡಬೇಕಿರುವುದರಿಂದ ಎಲ್ಲ ನಾಯಕರು ಏಕತೆಯ ಮಾತುಕತೆಗಳನ್ನು ಒಪ್ಪಿಕೊಂಡು ಮುಂದುವರೆಯುವ ಸಾಧ್ಯತೆಯಿದೆ. ಅತಿ ಶೀಘ್ರದಲ್ಲಿಯೇ ವಿಪಕ್ಷಗಳ ಉನ್ನತ ನಾಯಕರ ಸಭೆಯನ್ನು ಕರೆಯಲು ಕಾಂಗ್ರೆಸ್ ಯೋಜಿಸಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡಿದ ಬಳಿಕ ನಿತೀಶ್ ಕುಮಾರ್ ಅವರು ದೆಹಲಿಯಿಂದ ತೆರಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರೇ ದೇಶ ವಿರೋಧಿಗಳು: ನಡ್ಡಾಗೆ ಖರ್ಗೆ ತಿರುಗೇಟು

ನಿತೀಶ್ ಕುಮಾರ್ ಅವರು ಸೀತಾರಾಮ್ ಯೆಚೂರಿ ಅವರನ್ನು ಭೇಟಿ ಮಾಡಿದ ನಂತರ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ಸ್ಟ್ (ಸಿಪಿಐ-ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ರಾಜ್ಯ ಮಟ್ಟದಲ್ಲಿ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

”ಪ್ರತಿಪಕ್ಷಗಳ ಒಗ್ಗಟ್ಟಿನ ಪ್ರಯತ್ನಗಳು ವೇಗವನ್ನು ಪಡೆದುಕೊಂಡಿವೆ. ಪ್ರತಿಪಕ್ಷಗಳ ಒಕ್ಕೂಟವನ್ನು ರಚಿಸಲಾಗುವುದು ಮತ್ತು ರಾಜ್ಯ ಮಟ್ಟದಲ್ಲಿ ಸ್ಥಾನ ಹೊಂದಾಣಿಕೆಗಳನ್ನು ಮಾಡಲಾಗುತ್ತದೆ. ಅದು ಸಾಕಾರಗೊಂಡರೆ ಚುನಾವಣೆ ನಂತರವೇ ತೃತೀಯ ರಂಗ ಬರಲಿದೆ” ಎಂದು ಸೀತಾರಾಂ ಯೆಚೂರಿ ಹೇಳಿದರು.

”ಭಾರತದಲ್ಲಿ 1996ರಲ್ಲಿ ಯುನೈಟೆಡ್ ಫ್ರಂಟ್‌ನಂತಹ ಚುನಾವಣಾ ನಂತರದ ರಂಗಗಳನ್ನು ರಚಿಸಲಾಗಿವೆ. 1998 ರಲ್ಲಿ ಚುನಾವಣೆಯ ನಂತರ NDA ರಚನೆಯಾಯಿತು. 2004ರಲ್ಲಿ ಚುನಾವಣೆ ಬಳಿಕ ಯುಪಿಎ ರಚನೆ ಮಾಡಲಾಯಿತು” ಎಂದು ಯೆಚೂರಿ ಹೇಳಿದರು.

ಆ ಬಳಿಕ ಟ್ವೀಟ್ ಮಾಡಿದ ಯೆಚೂರಿ ಅವರು, ”ಬಿಜೆಪಿ ಮತ್ತು ಮೋದಿ ಸರ್ಕಾರದಿಂದ ತೀವ್ರ ಹಲ್ಲೆಗೊಳಗಾಗಿರುವ ಭಾರತೀಯ ಗಣರಾಜ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಜಾತ್ಯತೀತ ಪ್ರಜಾಪ್ರಭುತ್ವ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳನ್ನು ಮುಂದುವರಿಸಲು ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಕೈಜೋಡಿಸುತ್ತೇನೆ. ದೇಶ, ದೇಶದ ಜನರು ಮತ್ತು ಜನರ ಜೀವನೋಪಾಯ ಉಳಿಸಲು ಬಿಜೆಪಿಯನ್ನು ಸೋಲಿಸಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...