Homeಎಕಾನಮಿಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

ಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ತನ್ನೆಲ್ಲಾ ಸ್ನೇಹಿತರ ಮೇಲಿನ ಕಾಳಜಿಯಿಂದ ಫೇಸ್ ಬುಕ್ ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕುಸಿಯುತ್ತಿರುವ ಆರ್ಥಿಕ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅವರು ಬರೆದ ಕಾಳಜಿಯುತ ಪತ್ರ ಎಲ್ಲರ ಗಮನಸೆಳೆದಿದ್ದು ಅದನ್ನು ಇಲ್ಲಿ ಯಥಾವತ್ತಾಗಿ ಮುದ್ರಿಸುತ್ತಿದ್ದೇವೆ.

ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ , ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-

ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.

1. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.

2. ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)

3. ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.

4. ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.

5. ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.

6. ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.

7. ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

8. ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.

9. ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
10. ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ.
ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ

ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...