Homeಎಕಾನಮಿಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

ಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ತನ್ನೆಲ್ಲಾ ಸ್ನೇಹಿತರ ಮೇಲಿನ ಕಾಳಜಿಯಿಂದ ಫೇಸ್ ಬುಕ್ ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕುಸಿಯುತ್ತಿರುವ ಆರ್ಥಿಕ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅವರು ಬರೆದ ಕಾಳಜಿಯುತ ಪತ್ರ ಎಲ್ಲರ ಗಮನಸೆಳೆದಿದ್ದು ಅದನ್ನು ಇಲ್ಲಿ ಯಥಾವತ್ತಾಗಿ ಮುದ್ರಿಸುತ್ತಿದ್ದೇವೆ.

ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ , ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-

ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.

1. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.

2. ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)

3. ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.

4. ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.

5. ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.

6. ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.

7. ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

8. ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.

9. ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
10. ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ.
ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ

ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...