Homeಎಕಾನಮಿಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

ಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ತನ್ನೆಲ್ಲಾ ಸ್ನೇಹಿತರ ಮೇಲಿನ ಕಾಳಜಿಯಿಂದ ಫೇಸ್ ಬುಕ್ ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕುಸಿಯುತ್ತಿರುವ ಆರ್ಥಿಕ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅವರು ಬರೆದ ಕಾಳಜಿಯುತ ಪತ್ರ ಎಲ್ಲರ ಗಮನಸೆಳೆದಿದ್ದು ಅದನ್ನು ಇಲ್ಲಿ ಯಥಾವತ್ತಾಗಿ ಮುದ್ರಿಸುತ್ತಿದ್ದೇವೆ.

ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ , ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-

ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.

1. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.

2. ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)

3. ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.

4. ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.

5. ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.

6. ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.

7. ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

8. ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.

9. ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
10. ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ.
ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ

ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...