Homeಎಕಾನಮಿಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

ಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ತನ್ನೆಲ್ಲಾ ಸ್ನೇಹಿತರ ಮೇಲಿನ ಕಾಳಜಿಯಿಂದ ಫೇಸ್ ಬುಕ್ ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕುಸಿಯುತ್ತಿರುವ ಆರ್ಥಿಕ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅವರು ಬರೆದ ಕಾಳಜಿಯುತ ಪತ್ರ ಎಲ್ಲರ ಗಮನಸೆಳೆದಿದ್ದು ಅದನ್ನು ಇಲ್ಲಿ ಯಥಾವತ್ತಾಗಿ ಮುದ್ರಿಸುತ್ತಿದ್ದೇವೆ.

ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ , ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-

ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.

1. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.

2. ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)

3. ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.

4. ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.

5. ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.

6. ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.

7. ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

8. ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.

9. ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
10. ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ.
ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ

ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...