Homeಎಕಾನಮಿಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

ಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ತನ್ನೆಲ್ಲಾ ಸ್ನೇಹಿತರ ಮೇಲಿನ ಕಾಳಜಿಯಿಂದ ಫೇಸ್ ಬುಕ್ ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕುಸಿಯುತ್ತಿರುವ ಆರ್ಥಿಕ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅವರು ಬರೆದ ಕಾಳಜಿಯುತ ಪತ್ರ ಎಲ್ಲರ ಗಮನಸೆಳೆದಿದ್ದು ಅದನ್ನು ಇಲ್ಲಿ ಯಥಾವತ್ತಾಗಿ ಮುದ್ರಿಸುತ್ತಿದ್ದೇವೆ.

ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ , ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-

ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.

1. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.

2. ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)

3. ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.

4. ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.

5. ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.

6. ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.

7. ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

8. ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.

9. ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
10. ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ.
ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ

ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....