Homeಎಕಾನಮಿಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

ಸ್ನೇಹಿತರೆ, ಮುಂದಿನ ಒಂದು ವರ್ಷ ಜಾಗ್ರತೆಯಾಗಿರೋಣ: ಬಹಿರಂಗ ಪತ್ರ ಬರೆದ ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಜೆ.ಎನ್.ಯು ನಲ್ಲಿ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ತನ್ನೆಲ್ಲಾ ಸ್ನೇಹಿತರ ಮೇಲಿನ ಕಾಳಜಿಯಿಂದ ಫೇಸ್ ಬುಕ್ ನಲ್ಲಿ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕುಸಿಯುತ್ತಿರುವ ಆರ್ಥಿಕ ಕ್ಷೇತ್ರವನ್ನು ಗಮನದಲ್ಲಿಟ್ಟುಕೊಂಡು ಅವರು ಬರೆದ ಕಾಳಜಿಯುತ ಪತ್ರ ಎಲ್ಲರ ಗಮನಸೆಳೆದಿದ್ದು ಅದನ್ನು ಇಲ್ಲಿ ಯಥಾವತ್ತಾಗಿ ಮುದ್ರಿಸುತ್ತಿದ್ದೇವೆ.

ಫೇಸ್ ಬುಕ್ ನಲ್ಲಿರುವ ನನ್ನ ಅನೇಕ ಗೆಳೆಯರು ಆರ್ಥಿಕವಾಗಿ ದುರ್ಬಲರೆಂಬುದನ್ನು ನಾನು ಬಲ್ಲೆ. ಇಂಥ ಗೆಳೆಯರ/ಗೆಳತಿಯರ ಸಾಮಾಜಿಕ ಕಳಕಳಿ ಮಾತ್ರ ಅತ್ಯುನ್ನತ ಮಟ್ಟದ್ದು. ಮಾನವನ ಘನತೆಗೆ ಕುಂದು ತರುವ ಯಾವುದೇ ವಿಷಯಗಳ ಮೇಲೆ ಅವರೆಲ್ಲ ತುಂಬ ದಿಟ್ಟವಾಗಿ , ಎಷ್ಟೋಬಾರಿ ಮುಗ್ಧವಾಗಿ ಬರೆಯುತ್ತಿದ್ದಾರೆ. ಅಂಥ ಗೆಳೆಯರ ಬಗ್ಗೆ ಹೆಮ್ಮೆಪಡುತ್ತಾ ಈ ಕೆಳಗಿನ ಟಿಪ್ಪಣಿ-

ಮುಂದಿನ ಕನಿಷ್ಠ ಒಂದು ವರುಷಗಳ ಕಾಲ ಬಡ ಭಾರತೀಯರು ತುಂಬ ಕಷ್ಟಗಳನ್ನು ಇದಿರಿಸಬೇಕಾಗಿದೆ. ಮಧ್ಯಮ ವರ್ಗದವರು ಕೂಡಾ ಈ ಆರ್ಥಿಕ ಸಂಕಷ್ಟಗಳಿಗೆ ಬಲಿಯಾಗಬೇಕಾದ ಎಲ್ಲ ಲಕ್ಷಣಗಳಿವೆ. ಹಾಗಾಗಿ ನಾವು ಅನೇಕ ವಿಷಯಗಳಲ್ಲಿ ಮುಖ್ಯವಾಗಿ ನಮ್ಮ ಹಣಕಾಸಿನ ವಿಷಯಗಳಲ್ಲಿ ತುಂಬ ಎಚ್ಚರಿಕೆಯನ್ನು ವಹಿಸಬೇಕಾಗಿದೆ.

1. ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಹದಗೆಟ್ಟಿದ್ದು, ಅದು ಸುಧಾರಿಸಿಕೊಳ್ಳಲು ಬಹಳ ಸಮಯ ಬೇಕು. ಕೇಂದ್ರ ಸರಕಾರಕ್ಕೆ ಈ ಕುರಿತು ಸರಿಯಾಗಿ ಮಾರ್ಗದರ್ಶನ ಮಾಡಬಲ್ಲ ಆರ್ಥಿಕ ತಜ್ಞರಾರೂ ಇದ್ದಂತಿಲ್ಲ. ಇದ್ದವರು ಬಿಟ್ಟು ಹೋಗಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಹಣ ಹರಿದು ಬರುತ್ತಿಲ್ಲ, ಸಾಲ ತೆಗೆದುಕೊಂಡವರು ಹಣ ಹಿಂದಿರುಗಿಸುತ್ತಿಲ್ಲ ( ಈ ಒತ್ತಡ ತಾಳಲಾರದೆ, ಬ್ಯಾಂಕುಗಳಲ್ಲಿ ಕೆಲಸ ಮಾಡುವ ಕೆಲವು ಅಧಿಕಾರಿಗಳು ಸ್ವಯಂ ನಿವೃತ್ತಿ ಪಡೆಯುತ್ತಿದ್ದಾರೆ). ಹೀಗಾಗಿ ಬ್ಯಾಂಕುಗಳನ್ನು ಹೆಚ್ಚು ನಾವು ನೆಚ್ಚಿಕೊಳ್ಳುವಂತಿಲ್ಲ.

2. ಕಟ್ಟಿರುವ ಮನೆಗಳು ಮಾರಾಟವಾಗದೆ ಹಾಗೇ ಉಳಿಯುತ್ತಿವೆ ( ನೋಯ್ಡಾ, ಫರಿದಾಬಾದ್ ಮತ್ತು ಗುರುಗ್ರಾಮದಲ್ಲಿ ಪರಿಸ್ಥಿತಿ ವಿಷಮಿಸಿದೆ. ಅರ್ಧ ಕಟ್ಟಿ ಉಳಿದ ಮನೆಗಳನ್ನು ಸರಕಾರವೇ ಪೂರ್ಣಗೊಳಿಸಲು ಸುಪ್ರಿಂ ಕೋರ್ಟು ಆದೇಶ ನೀಡಿದೆ. (ಸರಕಾರ ಹೇಗೆ ಈ ಕೆಲಸವನ್ನು ಪೂರ್ಣಗೊಳಿಸುವುದೋ ಯಾರಿಗೂ ತಿಳಿಯದು)

3. ಹೊಸ ಮನೆಗಳು/ಕಟ್ಟಡಗಳು ನಿರೀಕ್ಷಿತ ವೇಗದಲ್ಲಿ ಮೇಲೇಳದೇ ಇರುವುದರಿಂದ ಸ್ಟೀಲ್, ಸಿಮೆಂಟ್, ಮತ್ತಿತರ ಸಾಮಗ್ರಿಗಳಿಗೆ ಬೇಡಿಕೆ ಇಲ್ಲವಾಗಿದೆ.

4. ಅಟೋಮೋಬಾಯಿಲ್ ಸೆಕ್ಟರ್ ಈಗಾಗಲೇ 350000 ಉದ್ಯೋಗಿಗಳನ್ನು ಕಳಕೊಂಡಿದೆ. ಮಾರುತಿ 16% ನಷ್ಟವನ್ನು ತೋರಿಸಿದೆಯಲ್ಲದೆ, ಶೇಕಡಾ 50 ಉತ್ಪಾದನೆಯನ್ನು ಕಡಿತಗೊಳಿಸಿದೆ. ಟಾಟಾ ಮೋಟಾರ್ಸ ನವರು ಪೂನಾ ಮತ್ತು ಜಮಶೆದ್ ಪುರ್ ನ ತನ್ನ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿದ್ದು, 8000 ಕೋಟಿ ರೂಪಾಯಿಗಳ ನಷ್ಟವನ್ನು ಡಿಕ್ಲೇರ್ ಮಾಡಿದೆ. ಮೊದಲ ಬಾರಿಗೆ ದ್ವಿಚಕ್ರ ವಾಹನಗಳ ಮಾರಾಟ ಕುಸಿದಿದೆ. ಪತಂಜಲಿ ಕೂಡಾ ತನ್ನ ಜಾಹೀರಾತುಗಳಿಗೆ ಕಡಿವಾಣ ಹಾಕಿದೆ. 2018ರಲ್ಲಿ ಅದು ತನ್ನ ಆದಾಯದಲ್ಲಿ 10% ಕಡಿತ ತೋರಿಸಿದೆ.

5. ಖಾಸಗಿಯವರು ಉತ್ಪಾದನೆ ಸ್ಥಗಿತಗೊಳಿಸಿದಾಗ, ಸಹಜವಾಗಿ ಸರಕಾರದ ಆದಾಯ ಇನ್ನಷ್ಟು ಕಡಿಮೆಯಾಗುತ್ತದೆ. ಲಾರಿಗಳನ್ನು ಬಾಡಿಗೆಗೆ ಕೊಳ್ಳುವವರಲ್ಲಿ ಈಗಾಗಲೇ ಶೇಕಡಾ 15 ಕಡಿತವುಂಟಾಗಿ, ಲಾರಿ ಚಾಲಕರು ಉದ್ಯೋಗವಿಲ್ಲದೆ ಅಳುತ್ತಿದ್ದಾರೆ. ಓಡಾಡುವವರಿಲ್ಲದೆ ವಿಮಾನಗಳು ನಿರಂತರ ನಷ್ಟ ಅನುಭವಿಸುತ್ತಿದ್ದು ಪ್ರಯಾಣಿಕರಲ್ಲಿ 25% ಕಡಿತ ಉಂಟಾಗಿದೆ. ಈ ವಿತ್ತೀಯ ಕೊರತೆಯನ್ನು ತುಂಬಿಕೊಳ್ಳಲು ಸರಕಾರ ಇನ್ನಷ್ಟು ತೆರಿಗೆಗಳನ್ನು ನಮ್ಮ ಮೇಲೆ ಹೇರುತ್ತದೆ.

6. ಜನರ ಕೊಳ್ಳುವ ಶಕ್ತಿಯು ಈಗಾಗಲೇ 20% ಕಡಿಮೆಯಾಗಿದೆ.

7. ಕೆಲವು ಆಯ್ದ ಜಾಗಗಳನ್ನು ಹೊರತು ಪಡಿಸಿದರೆ, ಉಳಿದೆಡೆಗಳಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿಲ್ಲ. ಭಾರತದ ಅರ್ಥವ್ಯವಸ್ಥೆಗೆ ಮಾರಕ ಹೊಡೆತ ನೀಡಿದ ಡಿಮೋನಿಟೈಸೇಶನ್ ನಿಂದಾಗಿ ಸಣ್ಣ ಉದ್ಯಮಿಗಳೆಲ್ಲಾ ಬೀದಿ ಪಾಲಾಗಿದ್ದಾರೆ. ಇದು ಪರೋಕ್ಷವಾಗಿ ದೊಡ್ಡ ಉದ್ಯಮಗಳ ಮೇಲೂ ಪರಿಣಾಮ ಬೀರಿದೆ.

8. ಭಾರತ ಸರಕಾರವು 2020ರಲ್ಲಿ ಐದು ಟ್ರಿಲಿಯನ್ ಅರ್ಥವ್ಯಸ್ಥೆಯನ್ನು ಹೊಂದುವುದಾಗಿ ಘೋಷಿಸಿದೆ. ಇದು ಸಾಧ್ಯವಾಗಬೇಕಾದರೆ, ಭಾರತವು 14-15% ಅಭಿವೃದ್ಧಿಯನ್ನು ಸಾಧಿಸಬೇಕು. ಈಗ ಇರುವಂತೆ ಸರಕಾರ 7% ಅಭಿವೃದ್ಧಿಯನ್ನು ಘೋಷಿಸುತ್ತಿದ್ದರೂ ವಾಸ್ತವವಾಗಿ ಅದಿನ್ನೂ 4% ಆಗಿದೆ ಎಂದು ಅರ್ಥಶಾಸ್ತ್ರಜ್ಞರು ಹೇಳುತ್ತಿದ್ದಾರೆ. ಹೀಗಾಗಿ 14-15 % ಅಭಿವೃದ್ಧಿ ಮರೀಚಿಕೆಯೇ ಸರಿ.

9. ಅಂಕಿ ಅಂಶಗಳನ್ನು ಬೇಕಾದಂತೆ ತಿದ್ದುವ ಪರಿಪಾಠ ಬೆಳೆಯುತ್ತಿದ್ದು, ಸರಕಾರ ಹೇಳಿದ್ದನ್ನು ಯಾರೂ ನಂಬುತ್ತಿಲ್ಲವಾದ್ದರಿಂದ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ವ್ಯತ್ಯಯ ಕಾಣಲಾರಂಭಿಸಿದೆ.
10. ಮಳೆ ಇಲ್ಲದೆ/ ಹೆಚ್ಚು ಮಳೆಬಂದು, ರೈತರು ಆತ್ಮಹತ್ಯೆ ಮಾಡಿಕೊಳ್ಳಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಆರ್ಥಿಕ ಕುಸಿತದ ಸಮಸ್ಯೆಯು ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಜಾಗತಿಕವಾಗಿದೆ. ಆಳುವವರು ಈ ಆರ್ಥಿಕ ವಿಫಲತೆಯನ್ನು ಜನರೆದುರು ತೆರೆದಿಡದೆ, ಅದನ್ನು ಮುಚ್ಚಿ ಹಾಕಲು ಬಗೆ ಬಗೆಯ ತಂತ್ರಗಳನ್ನು ಹೆಣೆಯುತ್ತಿರುವುದನ್ನು ನಾವು ದಿನನಿತ್ಯ ಕಾಣುತ್ತಿದ್ದೇವೆ.
ಹಿಂದೂ’ಗಳೆಲ್ಲರೂ ಒಂದಾದ ಆನಂತರವೂ ಮೇಲೆ ಹೇಳಿದ ಭಾರತದ ಸಮಸ್ಯೆಗಳು ಹಾಗೆಯೇ ಉಳಿಯುತ್ತವೆ

ಹೀಗಾಗಿ ಕನಿಷ್ಠ ಮುಂದಿನ ಒಂದು ವರ್ಷಗಳವರೆಗೆ ದಯವಿಟ್ಟು ತಮ್ಮ ಹಣ ಕಾಸಿನ ವಿಚಾರದಲ್ಲಿ ಜಾಗ್ರತೆಯಾಗಿರಿ. ಶ್ರೀಮಂತರು ಸಹಾಯ ಮಾಡುವುದಿಲ್ಲ. ಮಾಡದಿರುವುದರಿಂದಲೇ ಅವರು ಶ್ರೀಮಂತರಾದದ್ದು. ಕಷ್ಟಕಾಲದಲ್ಲಿ ನೆರವಿಗೆ ಬರುವವರೂ ಕಡಿಮೆ, ಮತ್ತು ಅವರೂ ಕಷ್ಟದಲ್ಲಿರುತ್ತಾರೆ ಎಂಬುದನ್ನು ಮರೆಯದಿರೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...