Homeಮುಖಪುಟಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಬೀಡ್‌ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ನಮ್ಮನ್ನು ಎನ್‌ಡಿಎ ಅಭ್ಯರ್ಥಿಗಳ ಪರ ಗುಂಪು ಇವಿಎಂ ಬಳಿ ತೆರಳದಂತೆ ತಡೆದಿದ್ದಾರೆ ಎಂದು ಮತದಾರರು ಆರೋಪಿಸಿದ್ದಾರೆ. ಈ ರೀತಿಯ ಆರೋಪ ಬೀಡ್‌ ಲೋಕಸಭೆ ಕ್ಷೇತ್ರದ ವಿವಿಧ ಮತಗಟ್ಟೆಯಲ್ಲಿ ಕೇಳಿಬಂದಿದ್ದು, ಈ ಕುರಿತು ಪ್ರತಿಪಕ್ಷಗಳು ಚು.ಆಯೋಗಕ್ಕೆ ದೂರು ನೀಡಿದೆ.

ಮಹಾರಾಷ್ಟ್ರದ ಪರ್ಲಿ ನಗರದಲ್ಲಿ ವಾಸಿಸುವ ರೈತ ನಾನಾ ನೌಕರೆ, ಮೇ 13ರಂದು ಶಾರದಾ ನಗರದ ವಿವೇಕ ವರ್ಧಿನಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಹೋಗಿದ್ದರು. ಮತಗಟ್ಟೆಯಲ್ಲಿ ಅವರ ಬೆರಳಿಗೆ ಶಾಯಿ ಹಾಕಲಾಗಿದೆ ಆದರೆ ಅವರು ಮತಯಂತ್ರದ ಬಳಿ ಮತ ಚಲಾಯಿಸಲು ಹೋದಾಗ ಅಲ್ಲಿದ್ದ ಕೆಲವರು ಅವರನ್ನು ಮತಗಟ್ಟೆಯಿಂದ ಹೊರಗೆ ಹೋಗುವಂತೆ ಆಗ್ರಹಿಸಿ ಕೊನೆಗೆ ಮತಗಟ್ಟೆಯಿಂದ ಹೊರಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಕುಟುಂಬದ ಸುರಕ್ಷತೆಯ ಕಾರಣದಿಂದ ಹೆದರಿ ಮತಯಂತ್ರದ ಬಳಿ ಹೋಗುವ ಹೆಚ್ಚಿನ ಪ್ರಯತ್ನಗಳನ್ನು ನಾನು ಮಾಡಲಿಲ್ಲ ಎಂದು ನೌಕರೆ ಹೇಳಿದ್ದಾರೆ. ಮತದಾನ ಮಾಡದಂತೆ ನಮಗೆ ನಿರ್ಬಂಧಿಸಿದಾಗ ನಾನು ಮತ್ತು ನನ್ನ ಕುಟುಂಬ ಸ್ಥಳದಿಂದ ಹೊರಟೆವು, ಚುನಾವಣಾ ಅಧಿಕಾರಿಯೊಬ್ಬರು ಸ್ಥಳದಲ್ಲಿಯೇ ಇದ್ದರು ಆದರೆ ಅವರಿಂದ ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಪರ್ಲಿಯಾದ್ಯಂತ ಹಲವಾರು ಮತದಾರರು ‘ನಮ್ಮ ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ’ ಎಂದು ಇದೇ ರೀತಿಯ ಆರೋಪವನ್ನು ಮಾಡಿದ್ದಾರೆ. ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮಹಾಯುತಿ ಮೈತ್ರಿಕೂಟದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಕುರಿತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣ) ನಾಯಕ ಬಜರಂಗ್ ಸೋನಾವಾನೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮತದಾರರ ಕೈಗಳಿಗೆ ಶಾಯಿ ಹಾಕಿ ವಾಪಾಸ್ಸು ಕಳುಹಿಸಿ ಮತದಾನದ ಹಕ್ಕನ್ನು ಕಸಿದುಕೊಂಡು ನಕಲಿ ಮತದಾನವನ್ನು ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ನಾನು ಧರ್ಮಪುರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಮುಸ್ಲಿಂ ಮಹಿಳೆಯಿಂದ ಈ ಕುರಿತ ಮೊದಲ ದೂರು ಸ್ವೀಕರಿಸಿದೆ. ಮಹಿಳೆಯು, ನನ್ನ ಬೆರಳುಗಳಿಗೆ ಶಾಯಿ ಹಾಕಲಾಗಿದೆ, ಆದರೆ ಮತದಾನಕ್ಕೆ ಅವಕಾಶ ಕೊಡದೆ ಬೇರೆಯವರು ಮತದಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಧರ್ಮಪುರಿಯಲ್ಲಿ ಸುಮಾರು 1,000 ಮುಸ್ಲಿಂ ಮತದಾರರಿದ್ದರು ಎಂದು ಬಜರಂಗ್ ಸೋನಾವಾನೆ ಹೇಳಿದ್ದಾರೆ.

ಪರ್ಲಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಜರಂಗ್ ಸೋನಾವಾನೆ ಮತ್ತು ಬಿಜೆಪಿಯ ಮಾಜಿ ಶಾಸಕಿ ಪಂಕಜಾ ಮುಂಡೆ ಕಣದಲ್ಲಿದ್ದಾರೆ. ಮೇ 13ರಂದು ಸೋನಾವಾನೆ ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ಸಲ್ಲಿಸಿದ್ದು, ಪರ್ಲಿ, ಮಜಲ್ಗಾಂವ್ ಮತ್ತು ಕೈಜ್‌ನ ಕೆಲವು ಬೂತ್‌ಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದ್ದಾರೆ. ಧರ್ಮಪುರಿ ಗ್ರಾಮದಲ್ಲಿ ಮುಸ್ಲಿಮರು ಹಾಗೂ ಜಿರೇವಾಡಿ ಗ್ರಾಮದಲ್ಲಿ ಹಿಂದುಳಿದ ವರ್ಗದ ಮತದಾರರಿಗೆ ಮತದಾನ ಮಾಡಲು ಅವಕಾಶವನ್ನು ನೀಡಲಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು 48 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಮುಖ್ಯ ಚುನಾವಣಾ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿದ್ದಾರೆ. ಸೋನಾವಾನೆ ಅವರು ಚುನಾವಣಾ ಆಯೋಗಕ್ಕೆ ಈ ಕುರಿತು ಹತ್ತಾರು ವಿಡಿಯೋಗಳನ್ನು ಪುರಾವೆಯಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಜಿಲ್ಲಾ ಚುನಾವಣಾಧಿಕಾರಿ  ಮರುಮತದಾನ ಅಗತ್ಯವಿಲ್ಲ ಎಂದು ಚುನಾವಣಾ ಆಯೋಗಕ್ಕೆ ವರದಿಯನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

ನಮಗೆ ಸಲ್ಲಿಸಿದ ಯಾವುದೇ ವೀಡಿಯೊಗಳಲ್ಲಿ ಚುನಾವಣಾ ಅಕ್ರಮ ನಡೆದಿರುವುದು ಸೆರೆಯಾಗಿಲ್ಲ, ಕೆಲವು ಬೂತ್‌ಗಳಲ್ಲಿ ಜನಸಂದಣಿಯನ್ನು ಮಾತ್ರ ತೋರಿಸುತ್ತದೆ. ಈ ಕುರಿತು ಮತಗಟ್ಟೆ ಅಧಿಕಾರಿಗಳನ್ನು ಕೂಡ ವಿಚಾರಣೆ ನಡೆಸಲಾಗಿದೆ. ಈ ವೇಳೆ ಯಾವುದೇ ಅವ್ಯವಹಾರ ನಡೆದಿರುವುದು ಕಂಡು ಬಂದಿಲ್ಲ ಎಂದು  ಜಿಲ್ಲಾಧಿಕಾರಿ ದೀಪಾ ಮುಂಡೆ ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ವಿರೋಧಿ ಭಾವನೆಯನ್ನು ಎದುರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ಬಿಜೆಪಿ ಪಕ್ಷವು 1996ರಿಂದ ಎಲ್ಲಾ ಲೋಕಸಭಾ ಚುನಾವಣೆಗಳಲ್ಲಿ ಈ ಕ್ಷೇತ್ರವನ್ನು ಮರಾಠರು ಮತ್ತು ಒಬಿಸಿಗಳ ಬೆಂಬಲದೊಂದಿಗೆ ಗೆದ್ದಿದೆ. ಆದರೆ ಈ ಬಾರಿ ಮರಾಠ ಮೀಸಲಾತಿಯ ಬೇಡಿಕೆ, ಇತರ ಹಿಂದುಳಿದ ವರ್ಗಗಳಲ್ಲಿ ಮರಾಠರಿಗೆ ಮರಾಠ ಕೋಟಾವನ್ನು ನೀಡುವ ಕುರಿತು ವಿರೋಧವಿದೆ. ಬೀಡ್‌ನಲ್ಲಿ ಸುಮಾರು 1.15 ಲಕ್ಷ ಒಬಿಸಿ ಮತದಾರರು, ಒಂದು ಲಕ್ಷಕ್ಕೂ ಹೆಚ್ಚು ಮರಾಠರು, ಸುಮಾರು 31,000 ದಲಿತರು ಮತ್ತು 43,000 ಮುಸ್ಲಿಮರು ಇದ್ದಾರೆ. 64,000 ಮತದಾರರನ್ನು ಹೊಂದಿರುವ ಪಂಕಜಾ ಮುಂಡೆ ಸೇರಿರುವ ಒಬಿಸಿ ಗುಂಪಿನ ವಂಜಾರಿ ಸಮುದಾಯವು ಇಲ್ಲಿದೆ. ಬೀಡಿನಲ್ಲಿ ಇರುವ ಹಲವಾರು ಅಧಿಕಾರಿಗಳು ಈ ಸಮುದಾಯದಿಂದ ಬಂದವರಾಗಿದ್ದಾರೆ. ಒಂದು ಕುಟುಂಬವು ಹಲವು ವರ್ಷಗಳಿಂದ ಇಲ್ಲಿ ಅಧಿಕಾರದಲ್ಲಿದ್ದು, ಜನರಿಗೆ ಏನೂ ಮಾಡಿಲ್ಲವಾದ್ದರಿಂದ ಬಿಜೆಪಿಯ ಮತ ಹಂಚಿಕೆಯು ಬೀಡಿನಲ್ಲಿ ಕುಸಿಯುತ್ತದೆ. ಆದ್ದರಿಂದ ಹಿಂಬಾಗಿಲ ಮೂಲಕ ಮತವನ್ನು ಪಡೆಯಲು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...