Homeಮುಖಪುಟಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

ಮತದಾರರನ್ನು ಇವಿಎಂ ಬಳಿ ತೆರಳಲೇ ಬಿಡುತ್ತಿರಲಿಲ್ಲ! ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮದ ಆರೋಪ

- Advertisement -
- Advertisement -

ಮಹಾರಾಷ್ಟ್ರದ ಬೀಡ್‌ ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದ್ದು, ನಮ್ಮನ್ನು ಎನ್‌ಡಿಎ ಅಭ್ಯರ್ಥಿಗಳ ಪರ ಗುಂಪು ಇವಿಎಂ ಬಳಿ ತೆರಳದಂತೆ ತಡೆದಿದ್ದಾರೆ ಎಂದು ಮತದಾರರು ಆರೋಪಿಸಿದ್ದಾರೆ. ಈ ರೀತಿಯ ಆರೋಪ ಬೀಡ್‌ ಲೋಕಸಭೆ ಕ್ಷೇತ್ರದ ವಿವಿಧ ಮತಗಟ್ಟೆಯಲ್ಲಿ ಕೇಳಿಬಂದಿದ್ದು, ಈ ಕುರಿತು ಪ್ರತಿಪಕ್ಷಗಳು ಚು.ಆಯೋಗಕ್ಕೆ ದೂರು ನೀಡಿದೆ.

ಮಹಾರಾಷ್ಟ್ರದ ಪರ್ಲಿ ನಗರದಲ್ಲಿ ವಾಸಿಸುವ ರೈತ ನಾನಾ ನೌಕರೆ, ಮೇ 13ರಂದು ಶಾರದಾ ನಗರದ ವಿವೇಕ ವರ್ಧಿನಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ಮತ ಚಲಾಯಿಸಲು ಹೋಗಿದ್ದರು. ಮತಗಟ್ಟೆಯಲ್ಲಿ ಅವರ ಬೆರಳಿಗೆ ಶಾಯಿ ಹಾಕಲಾಗಿದೆ ಆದರೆ ಅವರು ಮತಯಂತ್ರದ ಬಳಿ ಮತ ಚಲಾಯಿಸಲು ಹೋದಾಗ ಅಲ್ಲಿದ್ದ ಕೆಲವರು ಅವರನ್ನು ಮತಗಟ್ಟೆಯಿಂದ ಹೊರಗೆ ಹೋಗುವಂತೆ ಆಗ್ರಹಿಸಿ ಕೊನೆಗೆ ಮತಗಟ್ಟೆಯಿಂದ ಹೊರಕ್ಕೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಕುಟುಂಬದ ಸುರಕ್ಷತೆಯ ಕಾರಣದಿಂದ ಹೆದರಿ ಮತಯಂತ್ರದ ಬಳಿ ಹೋಗುವ ಹೆಚ್ಚಿನ ಪ್ರಯತ್ನಗಳನ್ನು ನಾನು ಮಾಡಲಿಲ್ಲ ಎಂದು ನೌಕರೆ ಹೇಳಿದ್ದಾರೆ. ಮತದಾನ ಮಾಡದಂತೆ ನಮಗೆ ನಿರ್ಬಂಧಿಸಿದಾಗ ನಾನು ಮತ್ತು ನನ್ನ ಕುಟುಂಬ ಸ್ಥಳದಿಂದ ಹೊರಟೆವು, ಚುನಾವಣಾ ಅಧಿಕಾರಿಯೊಬ್ಬರು ಸ್ಥಳದಲ್ಲಿಯೇ ಇದ್ದರು ಆದರೆ ಅವರಿಂದ ಏನೂ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಪರ್ಲಿಯಾದ್ಯಂತ ಹಲವಾರು ಮತದಾರರು ‘ನಮ್ಮ ಮತದಾನದ ಹಕ್ಕನ್ನು ನಿರಾಕರಿಸಲಾಗಿದೆ’ ಎಂದು ಇದೇ ರೀತಿಯ ಆರೋಪವನ್ನು ಮಾಡಿದ್ದಾರೆ. ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮಹಾಯುತಿ ಮೈತ್ರಿಕೂಟದ ಕಾರ್ಯಕರ್ತರು ಮತದಾರರಿಗೆ ಬೆದರಿಕೆ ಹಾಕಿದ್ದಾರೆ ಎಂದು ವಿರೋಧ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಕುರಿತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣ) ನಾಯಕ ಬಜರಂಗ್ ಸೋನಾವಾನೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮತದಾರರ ಕೈಗಳಿಗೆ ಶಾಯಿ ಹಾಕಿ ವಾಪಾಸ್ಸು ಕಳುಹಿಸಿ ಮತದಾನದ ಹಕ್ಕನ್ನು ಕಸಿದುಕೊಂಡು ನಕಲಿ ಮತದಾನವನ್ನು ಮಾಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ನಾನು ಧರ್ಮಪುರಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಮುಸ್ಲಿಂ ಮಹಿಳೆಯಿಂದ ಈ ಕುರಿತ ಮೊದಲ ದೂರು ಸ್ವೀಕರಿಸಿದೆ. ಮಹಿಳೆಯು, ನನ್ನ ಬೆರಳುಗಳಿಗೆ ಶಾಯಿ ಹಾಕಲಾಗಿದೆ, ಆದರೆ ಮತದಾನಕ್ಕೆ ಅವಕಾಶ ಕೊಡದೆ ಬೇರೆಯವರು ಮತದಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಧರ್ಮಪುರಿಯಲ್ಲಿ ಸುಮಾರು 1,000 ಮುಸ್ಲಿಂ ಮತದಾರರಿದ್ದರು ಎಂದು ಬಜರಂಗ್ ಸೋನಾವಾನೆ ಹೇಳಿದ್ದಾರೆ.

ಪರ್ಲಿಯಿಂದ ಈ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಜರಂಗ್ ಸೋನಾವಾನೆ ಮತ್ತು ಬಿಜೆಪಿಯ ಮಾಜಿ ಶಾಸಕಿ ಪಂಕಜಾ ಮುಂಡೆ ಕಣದಲ್ಲಿದ್ದಾರೆ. ಮೇ 13ರಂದು ಸೋನಾವಾನೆ ಚುನಾವಣಾ ಆಯೋಗಕ್ಕೆ ಈ ಕುರಿತು ದೂರು ಸಲ್ಲಿಸಿದ್ದು, ಪರ್ಲಿ, ಮಜಲ್ಗಾಂವ್ ಮತ್ತು ಕೈಜ್‌ನ ಕೆಲವು ಬೂತ್‌ಗಳಲ್ಲಿ ಮರು ಮತದಾನಕ್ಕೆ ಒತ್ತಾಯಿಸಿದ್ದಾರೆ. ಧರ್ಮಪುರಿ ಗ್ರಾಮದಲ್ಲಿ ಮುಸ್ಲಿಮರು ಹಾಗೂ ಜಿರೇವಾಡಿ ಗ್ರಾಮದಲ್ಲಿ ಹಿಂದುಳಿದ ವರ್ಗದ ಮತದಾರರಿಗೆ ಮತದಾನ ಮಾಡಲು ಅವಕಾಶವನ್ನು ನೀಡಲಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು 48 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಮಹಾರಾಷ್ಟ್ರ ಮುಖ್ಯ ಚುನಾವಣಾ ಆಯುಕ್ತರು ಜಿಲ್ಲಾ ಚುನಾವಣಾಧಿಕಾರಿಗೆ ಸೂಚಿಸಿದ್ದಾರೆ. ಸೋನಾವಾನೆ ಅವರು ಚುನಾವಣಾ ಆಯೋಗಕ್ಕೆ ಈ ಕುರಿತು ಹತ್ತಾರು ವಿಡಿಯೋಗಳನ್ನು ಪುರಾವೆಯಾಗಿ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಆದರೆ ಜಿಲ್ಲಾ ಚುನಾವಣಾಧಿಕಾರಿ  ಮರುಮತದಾನ ಅಗತ್ಯವಿಲ್ಲ ಎಂದು ಚುನಾವಣಾ ಆಯೋಗಕ್ಕೆ ವರದಿಯನ್ನು ಕಳುಹಿಸಿದ್ದಾರೆ ಎನ್ನಲಾಗಿದೆ.

ನಮಗೆ ಸಲ್ಲಿಸಿದ ಯಾವುದೇ ವೀಡಿಯೊಗಳಲ್ಲಿ ಚುನಾವಣಾ ಅಕ್ರಮ ನಡೆದಿರುವುದು ಸೆರೆಯಾಗಿಲ್ಲ, ಕೆಲವು ಬೂತ್‌ಗಳಲ್ಲಿ ಜನಸಂದಣಿಯನ್ನು ಮಾತ್ರ ತೋರಿಸುತ್ತದೆ. ಈ ಕುರಿತು ಮತಗಟ್ಟೆ ಅಧಿಕಾರಿಗಳನ್ನು ಕೂಡ ವಿಚಾರಣೆ ನಡೆಸಲಾಗಿದೆ. ಈ ವೇಳೆ ಯಾವುದೇ ಅವ್ಯವಹಾರ ನಡೆದಿರುವುದು ಕಂಡು ಬಂದಿಲ್ಲ ಎಂದು  ಜಿಲ್ಲಾಧಿಕಾರಿ ದೀಪಾ ಮುಂಡೆ ಹೇಳಿದ್ದಾರೆ.

ಬೀಡ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಆಡಳಿತ ವಿರೋಧಿ ಭಾವನೆಯನ್ನು ಎದುರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರು ಹೇಳಿದ್ದಾರೆ. ಬಿಜೆಪಿ ಪಕ್ಷವು 1996ರಿಂದ ಎಲ್ಲಾ ಲೋಕಸಭಾ ಚುನಾವಣೆಗಳಲ್ಲಿ ಈ ಕ್ಷೇತ್ರವನ್ನು ಮರಾಠರು ಮತ್ತು ಒಬಿಸಿಗಳ ಬೆಂಬಲದೊಂದಿಗೆ ಗೆದ್ದಿದೆ. ಆದರೆ ಈ ಬಾರಿ ಮರಾಠ ಮೀಸಲಾತಿಯ ಬೇಡಿಕೆ, ಇತರ ಹಿಂದುಳಿದ ವರ್ಗಗಳಲ್ಲಿ ಮರಾಠರಿಗೆ ಮರಾಠ ಕೋಟಾವನ್ನು ನೀಡುವ ಕುರಿತು ವಿರೋಧವಿದೆ. ಬೀಡ್‌ನಲ್ಲಿ ಸುಮಾರು 1.15 ಲಕ್ಷ ಒಬಿಸಿ ಮತದಾರರು, ಒಂದು ಲಕ್ಷಕ್ಕೂ ಹೆಚ್ಚು ಮರಾಠರು, ಸುಮಾರು 31,000 ದಲಿತರು ಮತ್ತು 43,000 ಮುಸ್ಲಿಮರು ಇದ್ದಾರೆ. 64,000 ಮತದಾರರನ್ನು ಹೊಂದಿರುವ ಪಂಕಜಾ ಮುಂಡೆ ಸೇರಿರುವ ಒಬಿಸಿ ಗುಂಪಿನ ವಂಜಾರಿ ಸಮುದಾಯವು ಇಲ್ಲಿದೆ. ಬೀಡಿನಲ್ಲಿ ಇರುವ ಹಲವಾರು ಅಧಿಕಾರಿಗಳು ಈ ಸಮುದಾಯದಿಂದ ಬಂದವರಾಗಿದ್ದಾರೆ. ಒಂದು ಕುಟುಂಬವು ಹಲವು ವರ್ಷಗಳಿಂದ ಇಲ್ಲಿ ಅಧಿಕಾರದಲ್ಲಿದ್ದು, ಜನರಿಗೆ ಏನೂ ಮಾಡಿಲ್ಲವಾದ್ದರಿಂದ ಬಿಜೆಪಿಯ ಮತ ಹಂಚಿಕೆಯು ಬೀಡಿನಲ್ಲಿ ಕುಸಿಯುತ್ತದೆ. ಆದ್ದರಿಂದ ಹಿಂಬಾಗಿಲ ಮೂಲಕ ಮತವನ್ನು ಪಡೆಯಲು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...