Homeಮುಖಪುಟಮಕ್ಕಳನ್ನು ಶಾಲೆಯಿಂದ ಹೊರದಬ್ಬುವ ಹುನ್ನಾರ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ ವಸೂಲಿಗೆ ತೀವ್ರ ವಿರೋಧ

ಮಕ್ಕಳನ್ನು ಶಾಲೆಯಿಂದ ಹೊರದಬ್ಬುವ ಹುನ್ನಾರ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ ವಸೂಲಿಗೆ ತೀವ್ರ ವಿರೋಧ

ಈ ಸರಕಾರ ಪತನದ ಹಾದಿಯಲ್ಲಿದೆ. ಮಠಗಳಿಗೆ, ಅನುಮಾನಾಸ್ಪದ ಜಗ್ಗಿ ವಾಸುದೇವ ಮುಂತಾದವರಿಗೆ ಕೋಟಿಗಟ್ಟಲೆ ದುಡ್ಡು ಕೊಡುವ ಸರಕಾರಕ್ಕೆ ಶಾಲೆ ನಡೆಸಲು ರೊಕ್ಕವಿಲ್ಲ ಎಂದರೆ ನಾಚಿಕೆಗೇಡಿನ ಸಂಗತಿ - ಬಿ.ಶ್ರೀಪಾದ್ ಭಟ್

- Advertisement -
- Advertisement -

ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ಮಕ್ಕಳ ಪೋಷಕರಿಂದ ಮಾಸಿಕ 100 ರೂ ದೇಣಿಗೆ ಸಂಗ್ರಹಿಸಬೇಕೆಂದು ಕರ್ನಾಟಕ ಸರ್ಕಾರ ಸೂಚಿಸಿದೆ.

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯ್ತುಕ್ತರು ಅಕ್ಟೋಬರ್ 19 ರಂದು ಸುತ್ತೋಲೆಯೊಂದನ್ನು ಹೊರಡಿಸಿದ್ದು, ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಹೆಸರಿನಲ್ಲಿ ಪೋಷಕರು ನೀಡುವ ದೇಣಿಗೆಯನ್ನು ವಿದ್ಯುತ್ ಬಿಲ್, ಶೌಚಾಲಯ ನಿರ್ವಹಣೆಯಂತಹ ಮೂಲಭೂತ ಸೌಲಭ್ಯಗಳಿಗೆ ಬಳಸಬೇಕು. ರಸೀದಿ ನೀಡುವ, ಪ್ರತ್ಯೇಕ ಲೆಕ್ಕಪತ್ರ ಇಡುವ ಹೊಣೆಗಾರಿಕೆ ಎಸ್‌ಡಿಎಂಸಿಯದ್ದಾಗಿರುತ್ತದೆ ಎನ್ನಲಾಗಿದೆ.

ಈ ಯೋಜನೆ ಘೋಷಣೆಯಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿರುವವರು ಬಡವರು, ದಲಿತರು ಮತ್ತು ಹಿಂದುಳಿದ ಸಮುದಾಯಗಳೆ ಹೆಚ್ಚಿದ್ದಾರೆ. ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗದಿಂದ ಬಸವಳಿದಿರುವ ಅಂತವರ ಹೊಟ್ಟೆ ಮೇಲೆ ಹೊಡೆಯಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಹೊಸ ಶಿಕ್ಷಣ ನೀತಿಯು ಸ್ಥಳೀಯವಾಗಿಯೇ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳಬೇಕು ಎಂದು ಹೇಳುತ್ತದೆಯೆ ಹೊರತು ಸರ್ಕಾರ ನೀಡುವ ಅನುದಾನದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಆ ನೀತಿಯ ಅನುಷ್ಟಾನದ ಭಾಗವಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದು ಬಡಮಕ್ಕಳನ್ನು ಶಾಲೆಯಿಂದ ಹೊರದೂಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ನಂತರ ಸಾವಿರಾರು ಮಕ್ಕಳು ಶಾಲೆಗಳಿಂದ ಡ್ರಾಪ್‌ಔಟ್ ಆಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಅಂತಹ ಮಕ್ಕಳ ಪೋಷಕರಿಂದ ವಸೂಲಿಗೆ ಮುಂದಾಗಿರುವುದು ಸರಿಯಲ್ಲ. ಹಿಂದಿನ ಸರ್ಕಾರ ಶಾಲೆಗೆ ಬರುವ ಮಕ್ಕಳಿಗೆ ದಿನಕ್ಕೆ ಎರಡು ರೂನಂತೆ ಪ್ರೋತ್ಸಾಹ ಧನ ನೀಡುತ್ತಿತ್ತು. ಆಂಧ್ರದ ಸರ್ಕಾರ ಸರ್ಕಾರಿ ಶಾಲೆಗೆ ಬರುವ ಹೆಣ್ಣು ಮಕ್ಕಳ ತಾಯಿಯ ಖಾತೆಗೆ ವಾರ್ಷಿಕ 15 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ. ಆದರೆ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಬಡಮಕ್ಕಳಿಂದಲೇ ದೇಣಿಗೆ ವಸೂಲಿ ಮಾಡುವ ಕೀಳು ಮಟ್ಟಕ್ಕೆ ಇಳಿದಿದೆ ಎಂದು ಕಿಡಿಕಾರಿದರು.

ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಮಾತನಾಡಿ, “ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯು ರಾಜ್ಯಸರ್ಕಾರಗಳು ಎಲ್ಲಾ ಮಕ್ಕಳಿಗೆ ಕನಿಷ್ಟ ಪ್ರಾಥಮಿಕ ಶಿಕ್ಷಣವನ್ನು ಉಚಿತವಾಗಿ ಕೊಡಬೇಕೆಂದು ಹೇಳುತ್ತದೆ. ಸಂವಿಧಾನದ 21ಎ ಪ್ರಕಾರ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಎಂದರೆ ಉಚಿತ ಅಷ್ಟೆ. ಯಾವುದೇ ಸ್ವರೂಪದಲ್ಲಿ ಅದಕ್ಕೆ ನಿರ್ಬಂಧಗಳನ್ನು ಹೇರಬಾರದು. ರಾಜ್ಯ ಸರ್ಕಾರ ಅನುದಾನ ಕೊಡಬೇಕು, ಮೂಲಭೂತ ಸೌಲಭ್ಯಗಳನ್ನು ಸ್ಥಳೀಯ ಸರ್ಕಾರಗಳು ಒದಗಿಸಬೇಕು. ಆದರೆ ನಾಗೇಶ್‌ರವರು ಶಿಕ್ಷಣ ಸಚಿವರಾದ ನಂತರ ಕಾನೂನು ಉಲ್ಲಂಘನೆಗಳು ಮಿತಿ ಮೀರಿವೆ. ಅವರನ್ನು ವಜಾಗೊಳಿಸಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಜಗ್ಗಿ ವಾಸುದೇವ್‌ಗೆ 100 ಕೋಟಿ ಹಣ ನೀಡಿದೆ. ಸಂಸ್ಕೃತ ವಿವಿಗೆ 250 ಕೋಟಿ ನೀಡಲು ಮುಂದಾಗಿದೆ. ಚಾಣಕ್ಯ ವಿವಿಗೆ ಭೂಮಿ ಮತ್ತು ಹಣ ಕೊಡುತ್ತಿದೆ. ಉಪಯೋಗಕ್ಕೆ ಬಾರದ ವೇದಗಣಿತ ಕಲಿಕೆಗೆ ಹಣ ನೀಡಲು ಮುಂದಾಗಿತ್ತು. ಈ ಎಲ್ಲದಕ್ಕೂ ಕೊಡಲು ದುಡ್ಡಿರುವಾಗ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡಲು ದುಡ್ಡಿಲ್ಲವೇ? ಸರ್ಕಾರ ಭಿಕ್ಷೆ ಬೇಡುತ್ತಿದೆಯೇ? ಬಡವರ ಕೂಲಿಯಲ್ಲಿ ಮಾಸಿಕ 100 ರೂ ಕೊಡಬೇಕು ಎನ್ನುವ ನಿಮಗೆ ಮಾನವೀಯತೆ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಕೆಲ ಪೋಷಕರು ದೇಣಿಗೆ ಕೊಟ್ಟು, ಕೆಲವರು ಕೊಡದಿದ್ದರೆ ಅದು ಮಕ್ಕಳ ನಡುವಿನ ತಾರತಮ್ಯಕ್ಕೆ ಕಾರಣವಾಗಲಿದೆ. ಇನ್ನು ಪೋಷಕರು, ಎಸ್‌ಡಿಎಂಸಿ ಸದಸ್ಯರು ಮಾಸಿಕ ಸಭೆಗಳಿಗೆ ಹೋಗದಿರಲು ಹಣಕಾಸಿನ ಮುಗ್ಗಟ್ಟು ಸಹ ಪ್ರಧಾನ ಕಾರಣ. ಏಕೆಂದರೆ ಶಾಲಾ ಅಗತ್ಯಗಳಿಗೆ ಶಿಕ್ಷಕರು ಅವರನ್ನು ಒತ್ತಾಯಿಸುವುದು ಸಹಜ. ಇಂತಹ ಸಂದರ್ಭದಲ್ಲಿ ಈ ಸುತ್ತೋಲೆ ಮತ್ತುಷ್ಟು ವಸೂಲಿಗೆ ಅವಕಾಶ ಮಾಡಿಕೊಡುತ್ತಿದ್ದು ಇದರಿಂದ ಪೋಷಕರು ಶಾಲೆಗಳತ್ತ ಸುಳಿಯದಂತೆ ಮಾಡುತ್ತದೆ. ದಲಿತ ಮಕ್ಕಳನ್ನು ಶಾಲೆಯಿಂದ ಹೊರದುಬ್ಬವ ಹುನ್ನಾರವಿದು. ಆನಂತರ ತಿಂಗಳಿಗೆ ನೂರು ರೂ ಕೊಡುವುದಾದರೆ ನಮ್ಮಲ್ಲಿಗೆ ಬನ್ನಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆಮಿಷವೊಡ್ಡಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚಿಸಿಬಿಡುತ್ತವೆ. ಈ ಸರ್ಕಾರಕ್ಕೂ ಅದೇ ಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಷ್ಟು ವರ್ಷ ಸರ್ಕಾರಿ ಶಾಲೆಗಳಿಂದ ಸಂಬಳ ಪಡೆಯುತ್ತಿರುವ ಶಿಕ್ಷಕರು ಬೇಕಾದರೆ ದೇಣಿಗೆ ನೀಡಲಿ. ಗೋವುಗಳನ್ನು ದತ್ತು ಪಡೆಯುವ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರು 100 ಕೋಟಿ ರೂಗಳವರೆಗೆ ದೇಣಿಗೆ ಕೊಡುವ ಬದಲು ಅದೇ ಹಣವನ್ನು ಸರ್ಕಾರಿ ಶಾಲೆಗಳಿಗೆ ಕೊಡಬಹುದಲ್ಲವೇ ಎಂದು ಪ್ರಶ್ನಿಸಿದರು.

ಹೋರಾಟಗಾರ, ಶಿಕ್ಷಣ ತಜ್ಞ ಬಿ.ಶ್ರೀಪಾದ್ ಭಟ್ ಸರ್ಕಾರದ ಈ ಕ್ರಮ ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. “ಈ ಬಿಜೆಪಿ ಸರಕಾರ ದಿನ ದಿನಕ್ಕೂ ನೈತಿಕವಾಗಿ ಪತನಗೊಳ್ಳುತ್ತಿದೆ. 40% ಕಮಿಷನ್ ಪಡೆಯುವ ಸರಕಾರ ಎಂದು ಆರೋಪವಿರುವ ಈ ಸರಕಾರ ಪತನದ ಹಾದಿಯಲ್ಲಿದೆ. ಮಠಗಳಿಗೆ, ಅನುಮಾನಾಸ್ಪದ ಜಗ್ಗಿ ವಾಸುದೇವ ಮುಂತಾದವರಿಗೆ ಕೋಟಿಗಟ್ಟಲೆ ದುಡ್ಡು ಕೊಡುವ ಸರಕಾರಕ್ಕೆ ಶಾಲೆ ನಡೆಸಲು ರೊಕ್ಕವಿಲ್ಲ ಎಂದರೆ ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಶಿಕ್ಷಣಕ್ಕಾಗಿ ಸರಕಾರಿ ಶಾಲೆಗಳು ಪೋಷಕರಿಂದ ಹಣ ಸಂಗ್ರಹಿಸುವ ದಂಧೆಗೆ ಮುಂದಾಗಿರುವುದು ಕ್ರೌರ್ಯ ಮಾತ್ರವಲ್ಲ, ‘6-14ನೇ ವಯಸ್ಸಿನ ಮಕ್ಕಳಿಗೆ ಉಚಿತ ಕಡ್ಡಾಯ ಗುಣಮಟ್ಟದ ಶಿಕ್ಷಣ ಕೊಡಬೇಕು’ ಎನ್ನುವ ಪರಿಚ್ಛೇದ 21ಎ ಮತ್ತು ‘0-14ನೇ ವಯಸ್ಸಿನ ಮಕ್ಕಳಿಗೆ ಉಚಿತ ಕಡ್ಡಾಯ ಗುಣಮಟ್ಟದ ಶಿಕ್ಷಣ ಕೊಡಬೇಕು’ ಎನ್ನುವ ಪರಿಚ್ಛೇದ 45ರ ನೇರ ಉಲ್ಲಂಘನೆಯಾಗಿದೆ. ಆರ್ ಟಿಇ ಕಾಯಿದೆ 2009ರ ಅಧ್ಯಾಯ 2ರ ಸೆಕ್ಷನ್ 3 ಮತ್ತು ಅಧ್ಯಾಯ 4ರ ಸೆಕ್ಷನ್ 12, 13ರ ಉಲ್ಲಂಘನೆಯಾಗಿದೆ. ವಿದ್ಯಾರ್ಥಿ ಸಂಘಟನೆಗಳು ತಮ್ಮ ನಿಷ್ಕ್ರಿಯತೆಯಿಂದ ಹೊರಬರಬೇಕಾದ ತುರ್ತು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ಕೇರಳ ಸರ್ಕಾರ v/s ರಾಜ್ಯಪಾಲ: ವಿಶ್ವ ವಿದ್ಯಾಲಯದ 15 ಸೆನೆಟ್ ಸದಸ್ಯರನ್ನು ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...