Homeಮುಖಪುಟಮಕ್ಕಳನ್ನು ಶಾಲೆಯಿಂದ ಹೊರದಬ್ಬುವ ಹುನ್ನಾರ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ ವಸೂಲಿಗೆ ತೀವ್ರ ವಿರೋಧ

ಮಕ್ಕಳನ್ನು ಶಾಲೆಯಿಂದ ಹೊರದಬ್ಬುವ ಹುನ್ನಾರ: ಸರ್ಕಾರಿ ಶಾಲಾ ಪೋಷಕರಿಂದ ದೇಣಿಗೆ ವಸೂಲಿಗೆ ತೀವ್ರ ವಿರೋಧ

ಈ ಸರಕಾರ ಪತನದ ಹಾದಿಯಲ್ಲಿದೆ. ಮಠಗಳಿಗೆ, ಅನುಮಾನಾಸ್ಪದ ಜಗ್ಗಿ ವಾಸುದೇವ ಮುಂತಾದವರಿಗೆ ಕೋಟಿಗಟ್ಟಲೆ ದುಡ್ಡು ಕೊಡುವ ಸರಕಾರಕ್ಕೆ ಶಾಲೆ ನಡೆಸಲು ರೊಕ್ಕವಿಲ್ಲ ಎಂದರೆ ನಾಚಿಕೆಗೇಡಿನ ಸಂಗತಿ - ಬಿ.ಶ್ರೀಪಾದ್ ಭಟ್

- Advertisement -
- Advertisement -

ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ನಿರ್ವಹಿಸುವುದಕ್ಕಾಗಿ ಮಕ್ಕಳ ಪೋಷಕರಿಂದ ಮಾಸಿಕ 100 ರೂ ದೇಣಿಗೆ ಸಂಗ್ರಹಿಸಬೇಕೆಂದು ಕರ್ನಾಟಕ ಸರ್ಕಾರ ಸೂಚಿಸಿದೆ.

ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯ್ತುಕ್ತರು ಅಕ್ಟೋಬರ್ 19 ರಂದು ಸುತ್ತೋಲೆಯೊಂದನ್ನು ಹೊರಡಿಸಿದ್ದು, ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಹೆಸರಿನಲ್ಲಿ ಪೋಷಕರು ನೀಡುವ ದೇಣಿಗೆಯನ್ನು ವಿದ್ಯುತ್ ಬಿಲ್, ಶೌಚಾಲಯ ನಿರ್ವಹಣೆಯಂತಹ ಮೂಲಭೂತ ಸೌಲಭ್ಯಗಳಿಗೆ ಬಳಸಬೇಕು. ರಸೀದಿ ನೀಡುವ, ಪ್ರತ್ಯೇಕ ಲೆಕ್ಕಪತ್ರ ಇಡುವ ಹೊಣೆಗಾರಿಕೆ ಎಸ್‌ಡಿಎಂಸಿಯದ್ದಾಗಿರುತ್ತದೆ ಎನ್ನಲಾಗಿದೆ.

ಈ ಯೋಜನೆ ಘೋಷಣೆಯಾಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳಿಸುತ್ತಿರುವವರು ಬಡವರು, ದಲಿತರು ಮತ್ತು ಹಿಂದುಳಿದ ಸಮುದಾಯಗಳೆ ಹೆಚ್ಚಿದ್ದಾರೆ. ಈಗಾಗಲೇ ಬೆಲೆ ಏರಿಕೆ, ನಿರುದ್ಯೋಗದಿಂದ ಬಸವಳಿದಿರುವ ಅಂತವರ ಹೊಟ್ಟೆ ಮೇಲೆ ಹೊಡೆಯಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂಬ ಮಾತುಗಳು ಕೇಳಿಬಂದಿವೆ.

ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಕೆ.ವಾಸುದೇವರೆಡ್ಡಿಯವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಹೊಸ ಶಿಕ್ಷಣ ನೀತಿಯು ಸ್ಥಳೀಯವಾಗಿಯೇ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳಬೇಕು ಎಂದು ಹೇಳುತ್ತದೆಯೆ ಹೊರತು ಸರ್ಕಾರ ನೀಡುವ ಅನುದಾನದ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಆ ನೀತಿಯ ಅನುಷ್ಟಾನದ ಭಾಗವಾಗಿ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದು ಬಡಮಕ್ಕಳನ್ನು ಶಾಲೆಯಿಂದ ಹೊರದೂಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೋವಿಡ್ ನಂತರ ಸಾವಿರಾರು ಮಕ್ಕಳು ಶಾಲೆಗಳಿಂದ ಡ್ರಾಪ್‌ಔಟ್ ಆಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಅಂತಹ ಮಕ್ಕಳ ಪೋಷಕರಿಂದ ವಸೂಲಿಗೆ ಮುಂದಾಗಿರುವುದು ಸರಿಯಲ್ಲ. ಹಿಂದಿನ ಸರ್ಕಾರ ಶಾಲೆಗೆ ಬರುವ ಮಕ್ಕಳಿಗೆ ದಿನಕ್ಕೆ ಎರಡು ರೂನಂತೆ ಪ್ರೋತ್ಸಾಹ ಧನ ನೀಡುತ್ತಿತ್ತು. ಆಂಧ್ರದ ಸರ್ಕಾರ ಸರ್ಕಾರಿ ಶಾಲೆಗೆ ಬರುವ ಹೆಣ್ಣು ಮಕ್ಕಳ ತಾಯಿಯ ಖಾತೆಗೆ ವಾರ್ಷಿಕ 15 ಸಾವಿರ ಪ್ರೋತ್ಸಾಹ ಧನ ನೀಡುತ್ತಿದೆ. ಆದರೆ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಬಡಮಕ್ಕಳಿಂದಲೇ ದೇಣಿಗೆ ವಸೂಲಿ ಮಾಡುವ ಕೀಳು ಮಟ್ಟಕ್ಕೆ ಇಳಿದಿದೆ ಎಂದು ಕಿಡಿಕಾರಿದರು.

ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಮಾತನಾಡಿ, “ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯು ರಾಜ್ಯಸರ್ಕಾರಗಳು ಎಲ್ಲಾ ಮಕ್ಕಳಿಗೆ ಕನಿಷ್ಟ ಪ್ರಾಥಮಿಕ ಶಿಕ್ಷಣವನ್ನು ಉಚಿತವಾಗಿ ಕೊಡಬೇಕೆಂದು ಹೇಳುತ್ತದೆ. ಸಂವಿಧಾನದ 21ಎ ಪ್ರಕಾರ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಶಿಕ್ಷಣ ಹಕ್ಕು ಕಾಯ್ದೆಯ ಪ್ರಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಎಂದರೆ ಉಚಿತ ಅಷ್ಟೆ. ಯಾವುದೇ ಸ್ವರೂಪದಲ್ಲಿ ಅದಕ್ಕೆ ನಿರ್ಬಂಧಗಳನ್ನು ಹೇರಬಾರದು. ರಾಜ್ಯ ಸರ್ಕಾರ ಅನುದಾನ ಕೊಡಬೇಕು, ಮೂಲಭೂತ ಸೌಲಭ್ಯಗಳನ್ನು ಸ್ಥಳೀಯ ಸರ್ಕಾರಗಳು ಒದಗಿಸಬೇಕು. ಆದರೆ ನಾಗೇಶ್‌ರವರು ಶಿಕ್ಷಣ ಸಚಿವರಾದ ನಂತರ ಕಾನೂನು ಉಲ್ಲಂಘನೆಗಳು ಮಿತಿ ಮೀರಿವೆ. ಅವರನ್ನು ವಜಾಗೊಳಿಸಬೇಕು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಜಗ್ಗಿ ವಾಸುದೇವ್‌ಗೆ 100 ಕೋಟಿ ಹಣ ನೀಡಿದೆ. ಸಂಸ್ಕೃತ ವಿವಿಗೆ 250 ಕೋಟಿ ನೀಡಲು ಮುಂದಾಗಿದೆ. ಚಾಣಕ್ಯ ವಿವಿಗೆ ಭೂಮಿ ಮತ್ತು ಹಣ ಕೊಡುತ್ತಿದೆ. ಉಪಯೋಗಕ್ಕೆ ಬಾರದ ವೇದಗಣಿತ ಕಲಿಕೆಗೆ ಹಣ ನೀಡಲು ಮುಂದಾಗಿತ್ತು. ಈ ಎಲ್ಲದಕ್ಕೂ ಕೊಡಲು ದುಡ್ಡಿರುವಾಗ ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯ ನೀಡಲು ದುಡ್ಡಿಲ್ಲವೇ? ಸರ್ಕಾರ ಭಿಕ್ಷೆ ಬೇಡುತ್ತಿದೆಯೇ? ಬಡವರ ಕೂಲಿಯಲ್ಲಿ ಮಾಸಿಕ 100 ರೂ ಕೊಡಬೇಕು ಎನ್ನುವ ನಿಮಗೆ ಮಾನವೀಯತೆ ಇದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪುಣ್ಯಕೋಟಿ ಹಸು ದತ್ತು ಯೋಜನೆಗಾಗಿ ಸರ್ಕಾರಿ ನೌಕರರು 100 ಕೋಟಿ ದೇಣಿಗೆ ನೀಡುತ್ತೇವೆ -ಸಿ.ಎಸ್ ಷಡಕ್ಷರಿ

ಕೆಲ ಪೋಷಕರು ದೇಣಿಗೆ ಕೊಟ್ಟು, ಕೆಲವರು ಕೊಡದಿದ್ದರೆ ಅದು ಮಕ್ಕಳ ನಡುವಿನ ತಾರತಮ್ಯಕ್ಕೆ ಕಾರಣವಾಗಲಿದೆ. ಇನ್ನು ಪೋಷಕರು, ಎಸ್‌ಡಿಎಂಸಿ ಸದಸ್ಯರು ಮಾಸಿಕ ಸಭೆಗಳಿಗೆ ಹೋಗದಿರಲು ಹಣಕಾಸಿನ ಮುಗ್ಗಟ್ಟು ಸಹ ಪ್ರಧಾನ ಕಾರಣ. ಏಕೆಂದರೆ ಶಾಲಾ ಅಗತ್ಯಗಳಿಗೆ ಶಿಕ್ಷಕರು ಅವರನ್ನು ಒತ್ತಾಯಿಸುವುದು ಸಹಜ. ಇಂತಹ ಸಂದರ್ಭದಲ್ಲಿ ಈ ಸುತ್ತೋಲೆ ಮತ್ತುಷ್ಟು ವಸೂಲಿಗೆ ಅವಕಾಶ ಮಾಡಿಕೊಡುತ್ತಿದ್ದು ಇದರಿಂದ ಪೋಷಕರು ಶಾಲೆಗಳತ್ತ ಸುಳಿಯದಂತೆ ಮಾಡುತ್ತದೆ. ದಲಿತ ಮಕ್ಕಳನ್ನು ಶಾಲೆಯಿಂದ ಹೊರದುಬ್ಬವ ಹುನ್ನಾರವಿದು. ಆನಂತರ ತಿಂಗಳಿಗೆ ನೂರು ರೂ ಕೊಡುವುದಾದರೆ ನಮ್ಮಲ್ಲಿಗೆ ಬನ್ನಿ ಖಾಸಗಿ ಶಿಕ್ಷಣ ಸಂಸ್ಥೆಗಳು ಆಮಿಷವೊಡ್ಡಿ ಎಲ್ಲಾ ಸರ್ಕಾರಿ ಶಾಲೆಗಳನ್ನು ಮುಚ್ಚಿಸಿಬಿಡುತ್ತವೆ. ಈ ಸರ್ಕಾರಕ್ಕೂ ಅದೇ ಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಷ್ಟು ವರ್ಷ ಸರ್ಕಾರಿ ಶಾಲೆಗಳಿಂದ ಸಂಬಳ ಪಡೆಯುತ್ತಿರುವ ಶಿಕ್ಷಕರು ಬೇಕಾದರೆ ದೇಣಿಗೆ ನೀಡಲಿ. ಗೋವುಗಳನ್ನು ದತ್ತು ಪಡೆಯುವ ಪುಣ್ಯಕೋಟಿ ಯೋಜನೆಗೆ ಸರ್ಕಾರಿ ನೌಕರರು 100 ಕೋಟಿ ರೂಗಳವರೆಗೆ ದೇಣಿಗೆ ಕೊಡುವ ಬದಲು ಅದೇ ಹಣವನ್ನು ಸರ್ಕಾರಿ ಶಾಲೆಗಳಿಗೆ ಕೊಡಬಹುದಲ್ಲವೇ ಎಂದು ಪ್ರಶ್ನಿಸಿದರು.

ಹೋರಾಟಗಾರ, ಶಿಕ್ಷಣ ತಜ್ಞ ಬಿ.ಶ್ರೀಪಾದ್ ಭಟ್ ಸರ್ಕಾರದ ಈ ಕ್ರಮ ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. “ಈ ಬಿಜೆಪಿ ಸರಕಾರ ದಿನ ದಿನಕ್ಕೂ ನೈತಿಕವಾಗಿ ಪತನಗೊಳ್ಳುತ್ತಿದೆ. 40% ಕಮಿಷನ್ ಪಡೆಯುವ ಸರಕಾರ ಎಂದು ಆರೋಪವಿರುವ ಈ ಸರಕಾರ ಪತನದ ಹಾದಿಯಲ್ಲಿದೆ. ಮಠಗಳಿಗೆ, ಅನುಮಾನಾಸ್ಪದ ಜಗ್ಗಿ ವಾಸುದೇವ ಮುಂತಾದವರಿಗೆ ಕೋಟಿಗಟ್ಟಲೆ ದುಡ್ಡು ಕೊಡುವ ಸರಕಾರಕ್ಕೆ ಶಾಲೆ ನಡೆಸಲು ರೊಕ್ಕವಿಲ್ಲ ಎಂದರೆ ನಾಚಿಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಶಿಕ್ಷಣಕ್ಕಾಗಿ ಸರಕಾರಿ ಶಾಲೆಗಳು ಪೋಷಕರಿಂದ ಹಣ ಸಂಗ್ರಹಿಸುವ ದಂಧೆಗೆ ಮುಂದಾಗಿರುವುದು ಕ್ರೌರ್ಯ ಮಾತ್ರವಲ್ಲ, ‘6-14ನೇ ವಯಸ್ಸಿನ ಮಕ್ಕಳಿಗೆ ಉಚಿತ ಕಡ್ಡಾಯ ಗುಣಮಟ್ಟದ ಶಿಕ್ಷಣ ಕೊಡಬೇಕು’ ಎನ್ನುವ ಪರಿಚ್ಛೇದ 21ಎ ಮತ್ತು ‘0-14ನೇ ವಯಸ್ಸಿನ ಮಕ್ಕಳಿಗೆ ಉಚಿತ ಕಡ್ಡಾಯ ಗುಣಮಟ್ಟದ ಶಿಕ್ಷಣ ಕೊಡಬೇಕು’ ಎನ್ನುವ ಪರಿಚ್ಛೇದ 45ರ ನೇರ ಉಲ್ಲಂಘನೆಯಾಗಿದೆ. ಆರ್ ಟಿಇ ಕಾಯಿದೆ 2009ರ ಅಧ್ಯಾಯ 2ರ ಸೆಕ್ಷನ್ 3 ಮತ್ತು ಅಧ್ಯಾಯ 4ರ ಸೆಕ್ಷನ್ 12, 13ರ ಉಲ್ಲಂಘನೆಯಾಗಿದೆ. ವಿದ್ಯಾರ್ಥಿ ಸಂಘಟನೆಗಳು ತಮ್ಮ ನಿಷ್ಕ್ರಿಯತೆಯಿಂದ ಹೊರಬರಬೇಕಾದ ತುರ್ತು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ; ಕೇರಳ ಸರ್ಕಾರ v/s ರಾಜ್ಯಪಾಲ: ವಿಶ್ವ ವಿದ್ಯಾಲಯದ 15 ಸೆನೆಟ್ ಸದಸ್ಯರನ್ನು ವಜಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...