Homeಮುಖಪುಟಪುಷ್ಕರ್‌ರವರ 80ಕೋಟಿ ರೂಗಳ ರಿಸ್ಕ್..!!! ಕಾಪಾಡ್ತಾನಾ.. ಅವನೇ ಶ್ರೀಮನ್ ನಾರಾಯಣ..?

ಪುಷ್ಕರ್‌ರವರ 80ಕೋಟಿ ರೂಗಳ ರಿಸ್ಕ್..!!! ಕಾಪಾಡ್ತಾನಾ.. ಅವನೇ ಶ್ರೀಮನ್ ನಾರಾಯಣ..?

- Advertisement -
- Advertisement -

ಅವನೇ ಶ್ರೀಮನ್ ನಾರಾಯಣ ಸ್ಯಾಂಡಲ್‌ವುಡ್ ನಲ್ಲಿ ತಯಾರಾಗಿರೋ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ. ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕಿರಿಕ್ ಪಾರ್ಟಿ ಅಂತ ಸೂಪರ್ ಹಿಟ್ ಸಿನಿಮಾಗಳನ್ನ ಬ್ಯಾಕ್ ಟು ಬ್ಯಾಕ್ ಕೊಟ್ಟ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಹಾಗೂ ನಟ ರಕ್ಷಿತ್ ಶೆಟ್ಟಿ ಅದೇ ಹುಮ್ಮಸ್ಸಿನಲ್ಲಿ, ಗೆಲುವಿನ ಅಲೆಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮಾಡೋದಕ್ಕೆ ಕೈ ಹಾಕಿ, ಈಗ ಆ ಸಾಹಸವನ್ನ ರಿಲೀಸ್ ಹಂತಕ್ಕೆ ತಂದಿದ್ದಾರೆ. ಈಗಾಗ್ಲೇ ಅವನೇ ಶ್ರೀಮನ್ ನಾರಾಯಣ ಸಿನಿಮಾ ಕನ್ನಡದ ಅತಿದೊಡ್ಡ ಸಿನಿಮಾ, ಬಹುಭಾಷೆಯಲ್ಲಿ ತಯಾರಾಗಿರೋ ಪ್ಯಾನ್ ಇಂಡಿಯಾ ಸಿನಿಮಾ ಅನ್ನೋ ಕಾರಣಕ್ಕೆ ಸಖತ್ ಸುದ್ದಿಯಾಗ್ತಿದೆ.

ಇತ್ತೀಚೆಗಷ್ಟೇ ಅವನೇ ಶ್ರೀಮನ್ ನಾರಾಯಣ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡೋ ಮೂಲಕ, ಪ್ರಚಾರ ಕಾರ್ಯಕ್ಕೆ ಚಾಲನೆ ಕೊಟ್ಟಿರೋ ಚಿತ್ರತಂಡ, ಮಾಡಲು ಹೊರಟಿರೋ ಸಾಹಸವನ್ನ ಕಂಡು, ಇಡೀ ಉದ್ಯಮ ಶಾಕ್ ಆಗಿದೆ. ಪ್ಯಾನ್ ಇಂಡಿಯಾ ಸಿನಿಮಾವನ್ನ ರಿಲೀಸ್ ಮಾಡ್ತಿವಿ. ಬರೊಬ್ಬರಿ 300ಕೋಟಿ ಬ್ಯುಸಿನೆಸ್ ಮಾಡ್ತೀವಿ ಅಂತ ನಿರ್ಮಾಪಕರು ದಿಲ್ದಾರಾಗಿ ಹೇಳಿಕೊಂಡಿದ್ದಾರೆ. ಇದು ಒಂದು ಕಡೆ ಸ್ಯಾಂಡಲ್ವುಡ್ ಗೆ ಶಾಕ್ ಕೊಟ್ರೆ. ಮತ್ತೆಂದು ಕಡೆ ಇದು ವರ್ಕೌಟ್ ಆದ್ರೀ ಆಗಬಹುದು ಅನ್ನೋ ಲೆಕ್ಕಾಚಾರದ ಮಾತುಗಳು ಕೇಳಿ ಬರ್ತಿವೆ..

80ಕೋಟಿ ಬಜೆಟ್.. 300 ಕೋಟಿ ಟಾರ್ಗೆಟ್…!!!
ಅವನೇ ಶ್ರೀಮನ್ ನಾರಾಯಣ ಸಿನಿಮಾದ ಮೇಲೆ. ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ಬರೊಬ್ಬರಿ 80ಕೋಟಿ ಸುರಿದಿದ್ದಾರೆ. ಹಳೇ ಸಿನಿಮಾಗಳಿಂದ ಗಳಿಸಿದ್ದು, ಬ್ಯುಸಿನೆಸ್ ನಲ್ಲಿ ಗಳಿಸಿದ್ದರ ಜೊತೆಗೆ ಸಾಲ ಸೋಲ ಮಾಡಿ ಈ ಚಿತ್ರದ ಮೇಲೆ ಇಷ್ಟು ದೊಡ್ಡ ಬಂಡವಾಳ ಹೂಡಿದ್ದಾರೆ. ಗೆಲ್ಲೋ ಸೂತ್ರ ನನಗೆ ಗೊತ್ತಿದೆ. ಈ ಸಿನಿಮಾದಿಂದ 300 ಕೋಟಿ ಬ್ಯುಸಿನೆಸ್ ಆಗೇ ಆಗುತ್ತೆ ಅನ್ನೋ ಕಾನ್ಫಿಡೆನ್ಸ್ ನಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಈ ರಿಸ್ಕ್ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಶ್ರೀಮನ್ ನಾರಾಯಣ ಸಿನಿಮಾದ ಜೊತೆಗೆ ನಾಲ್ಕು ಸಿನಿಮಾಗಳು ಚಿತ್ರೀಕರಣ ಹಂತದಲ್ಲಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿವೆ. ಮುಂದಿನ ಆರೇಳು ತಿಂಗಳಲ್ಲಿ ಪುಷ್ಕರ್ ಬರೊಬ್ಬರಿ 5-6 ಚಿತ್ರಗಳನ್ನ ರಿಲೀಸ್ ಮಾಡೋದಕ್ಕೆ ತಯಾರಿ ನಡೆಸಿದ್ದಾರೆ. ಮೂಲಗಳ ಪ್ರಕಾರ ಪುಷ್ಕರ್ ಮಲ್ಲಿಕಾರ್ಜುನಯ್ಯ ನೂರು ಕೋಟಿಗೂ ಹೆಚ್ಚು ಬಂಡವಾಳವನ್ನ ಸಿನಿಮಾಗಳ ಮೇಲೆ ಹೂಡಿದ್ದಾರೆ.

ಕೆ.ಜಿ.ಎಫ್ ಸಿನಿಮಾ ಸ್ಫೂರ್ತಿಯಿಂದ ಈ ರಿಸ್ಕ್
ಅವನೇ ಶ್ರೀಮನ್ ನಾರಾಯಣ ಸಿನಿಮಾ ಮೇಲೆ 80ಕೋಟಿಯಷ್ಟು ದೊಡ್ಡ ಬಜೆಟ್ ನ ರಿಸ್ಕ್ ತಗೆದುಕೊಂಡಿದ್ದರು, ಚಿತ್ರದ ಕಥೆ ಮತ್ತು ಮೇಕಿಂಗ್ ಅಷ್ಟೇ ಕ್ವಾಲಿಟಿಯಾಗಿ ಮೂಡಿ ಬಂದಿದೆಯಂತೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆ.ಜಿ.ಎಫ್ ಸಿನಿಮಾ ದೇಶದಾದ್ಯಂತ ಸೃಷ್ಟಿಸಿದ ಸಂಚಲನ ಮತ್ತು ಆ ಚಿತ್ರವನ್ನ ನಿರ್ಮಿಸಿದ್ದ ರೀತಿ ಪುಷ್ಕರ್ ಮತ್ತು ರಕ್ಷಿತ್ ಶೆಟ್ಟಿಗೆ ಸ್ಫೂರ್ತಿ ತುಂಬಿದೆ. ಅದೇ ಸ್ಫೂರ್ತಿಯಲ್ಲಿ, ಅಂತಹದ್ದೇ ಮ್ಯಾಜಿಕ್ ರಕ್ಷಿತ್ ಶೆಟ್ಟಿ ಸಿನಿಮಾನೂ ಮಾಡುತ್ತೆ. ಒಳ್ಳೆಯ ಯೂನಿವರ್ಸಲ್ ಕಥೆ, ಒಳ್ಳೆಯ ಸ್ಟಾರ್ ಕಾಸ್ಟ್, ಕ್ವಾಲಿಟಿ ಮೇಕಿಂಗ್ ಇವೆಲ್ಲದ್ರ ಜೊತೆಗೆ ಎಲ್ಲಾ ಕಡೆ ಸಲ್ಲುವ, ಎಲ್ಲಾ ಕಾಲಕ್ಕೂ ಸಲ್ಲುವ ರಂಜನೀಯ ಅಂಶಗಳನ್ನ ಹದವಾಗಿ ಮಿಶ್ರಣಗೊಳಿಸಿದ್ರೆ, ಸಾಕು ಸಿನಿಮಾ ವರ್ಕೌಟ್ ಆಗುತ್ತೆ. ಗೆದ್ದೆ ಗೆಲ್ಲುತ್ತೆ ಅನ್ನೋ ಭರವಸೆಯಲ್ಲಿ ಅವನೇ ಶ್ರೀಮನ್ ನಾರಾಯಣನ ಮೇಲೆ ಅಷ್ಟು ಕೋಟಿ ಸುರಿದಿದ್ದಾರೆ.
ಕಿರಿಕ್ ಪಾರ್ಟಿ ರಿಲೀಸ್ ಡೇಟ್ಗೆ ಶ್ರೀಮನ್ ನಾರಾಯಣ ರಿಲೀಸ್

ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಮಾಡಿ ದೊಡ್ಡ ಸಕ್ಸಸ್ ಪಡೆದಿದ್ದ ಕಿರಿಕ್ ಪಾರ್ಟಿ ರಿಲೀಸ್ ಆದ ಅದೃಷ್ಟದ ಡೇಟ್ಗೆನೇ ಅವನೇ ಶ್ರೀಮನ್ ನಾರಾಯಣ ಸಿನಿಮಾವನ್ನ ರಿಲೀಸ್ ಮಾಡೋದಕ್ಕೆ ಚಿತ್ರತಂಡ ನಿರ್ಧರಿಸಿದ್ದು, ಆಗ್ಲೇ ನಾವು ಇದೇ ಡಿಸೆಂಬರ್ 27ಕ್ಕೆ ವರ್ಲ್ಡ್ ವೈಡ್ ಸಿನಿಮಾವನ್ನ ರಿಲೀಸ್ ಮಾಡ್ತೀವಿ ಅಂತ ಅನೌನ್ಸ್ ಮಾಡಿದೆ.
ಅವನೇ ಶ್ರೀಮನ್ ನಾರಾಯಣದ ಮೈನ್ ಸ್ಟ್ರೆಂಥ್ ಅಂದ್ರೆ ಅದು ರಕ್ಷಿತ್ ಶೆಟ್ಟಿ ಒಬ್ಬರೇ, ನೇಮೂ ಫೇಮೂ ಇರೋದು ಇವರೊಬ್ಬರದೇ. ಅದ್ರೆ ಜೊತೆಗೆ ಪುಷ್ಕರ್ ಫಿಲಂಸ್ ಬ್ಯಾನರ್ ವಿಚಾರವಾಗಿ ಹೆಸರು ಮಾಡಿದೆ. ಅದು ಬಿಟ್ರೆ, ಸಚಿನ್ ರವಿಗೆ ಇದು ಚೊಚ್ಚಲ ನಿರ್ದೇಶನದ ಸಿನಿಮಾ, ಅಜನೀಶ್ ಲೋಕನಾಥ್ ರಕ್ಷಿತ್ ಶೆಟ್ಟಿ ನೆಚ್ಚಿನ ಸಂಗೀತ ನಿರ್ದೇಶಕನಾಗಿರೋದಿಂದ, ಈ ಹಿಟ್ ಕಾಂಬಿನೇಶನ್ ಮತ್ತೊಮ್ಮೆ ವರ್ಕೌಟ್ ಆಗೋ ಸೂಚನೆ ಸಿಕ್ಕಿದೆ. ಚಿತ್ರದಲ್ಲಿ ರಕ್ಷಿತ್ ಗೆ ನಾಯಕಿಯಾಗಿ ಶಾನ್ವಿಶ್ರೀವಾತ್ಸವ್ ಕಾಣಿಸಿಕೊಂಡಿದ್ದು, ಬಾಲಾಜಿ ಮೋಹನ್, ಪ್ರಮೋದ್ ಶೆಟ್ಟಿ ಮತ್ತು ಅಚ್ಯುತ್ ಕುಮಾರ್ ಮುಖ್ಯಪಾತ್ರಗಳಲ್ಲಿ ಕಾಣಿಸಿಕೊಂದ್ದಾರೆ.

ಕೆ.ಜಿ.ಎಫ್ ಹಿಂದೆ ಬಂದ ಕುರುಕ್ಷೇತ್ರ, ಪೈಲ್ವಾನ್ ವರ್ಕ್ ಆಗ್ಲಿಲ್ಲ
ಅಂದ್ಹಾಗೆ ಕೆ.ಜಿ.ಎಫ್ ಸಿನಿಮಾದ ಪ್ಯಾನ್ ಇಂಡಿಯಾ ಸಕ್ಸಸ್ ನೋಡಿದ್ಮೇಲೆ, ಅದೇ ತರಹ ಪ್ಯಾನ್ ಇಂಡಿಯಾ ಸಿನಿಮಾ ಮಾಡೋ ಭರದಲ್ಲಿ, ಕಿಚ್ಚ ಸುದೀಪ್ ಪೈಲ್ವಾನ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರುಕ್ಷೇತ್ರ ಚಿತ್ರಗಳನ್ನ ಬಹುಭಾಷೆಯಲ್ಲಿ ರಿಲೀಸ್ ಮಾಡಿದ್ರೂ, ಆದ್ರೆ ಕನ್ನಡ ಬಿಟ್ಟು ಬೇರೆ ಯಾವ ಭಾಷೆಯಲ್ಲೂ ಈ ಎರಡೂ ಚಿತ್ರಗಳು ವರ್ಕೌಟ್ ಆಗ್ಲಿಲ್ಲ. ಕೆ.ಜಿ.ಎಫ್ ಸಿನಿಮಾಗಿದ್ದ ಕಂಟೆಂಟ್ ಕ್ವಾಲಿಟಿಯಾಗ್ಲಿ, ಮೇಕಿಂಗ್ ಕ್ವಾಲಿಟಿಯಾಗ್ಲಿ ಈ ಚಿತ್ರಗಳಲ್ಲಿ ಇರಲಿಲ್ಲ ಅನ್ನೋ ರೆಸ್ಪಾನ್ಸ್ ರಿಸಲ್ಟ್ ಆಚೆ ಬಂದಾಯ್ತು.
ಅವನೇ ಶ್ರೀಮನ್ನಾರಾಯಣ ಏನಾಗಬಹುದು…?

ಯಶ್ ಎರಡು ವರ್ಷದ ಪರಿಶ್ರಮಕ್ಕೆ ಕೆ.ಜಿ.ಎಫ್ ಪ್ಯಾನ್ ಇಂಡಿಯಾ ಸಕ್ಸಸ್ ಕೊಟ್ಟಿತ್ತು. ಆದ್ರೆ ದರ್ಶನ್, ಸುದೀಪ್ ಅಂತಹ ಕನ್ನಡದ ದೊಡ್ಡ ಸ್ಟಾರ್ ಗಳ ಸಿನಿಮಾಗಳು ಪ್ಯಾನ್ ಇಂಡಿಯಾ ಲೆವ್ವೆಲ್ ನಲ್ಲಿ ಮಕ್ಕಾಡೆ ಮಲಗಿದ್ವು. ಹೀಗಿರೋವಾಗ ಅದ್ರ ಬೆನ್ನಿಗೇನೇ ಬರ್ತಿರೋ ಅವನೇ ಶ್ರೀಮನ್ ನಾರಾಯಣ ಸಿನಿಮಾ ಏನಾಗಬಹುದು ಅನ್ನೋ ಪ್ರಶ್ನೆಗಳು ಈಗ ಕನ್ನಡ ಚಿತ್ರರಂಗದಲ್ಲಿ ಹುಟ್ಟಿಕೊಂಡಿದೆ. ಅವನೇ ಶ್ರೀಮನ್ ನಾರಾಯಣ ನಿರ್ಮಾಪಕರು ತೆಗೆದುಕೊಂಡಿರೋ ರಿಸ್ಕ್ ಕಂಡು ಬೆಚ್ಚಿ ಬಿದ್ದಿದೆ. ಕೆ.ಜಿ.ಎಫ್ ಹುಟ್ಟಿಸಿದ್ದ ಭರವಸೆ, ವಿಸ್ತರಿಸಿರೋ ಮಾರುಕಟ್ಟೆಯನ್ನ, ಲಾಸ್ಟ್ ಎರಡು ಸಿನಿಮಾಗಳ ಸೋಲು ಕುಗ್ಗಿಸಿವೆ. ಇದನ್ನ ಕಂಡು ಚಿತ್ರರಂಗ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣಕ್ಕೆ ಹೆದರಿ ನಿಂತಿದೆ. ಇಂತಹ ಸಮಯದಲ್ಲಿ ಅವನೇ ಶ್ರೀಮನ್ ನಾರಾಯಣ ಚಿತ್ರತಂಡ ನಾವು ಕೆಜಿಎಫ್ ಗಿಂತ ಯಾವುದ್ರಲ್ಲೂ ಕಡಿಮೆಯಿಲ್ಲ. ನಮ್ಮ ಸಿನಿಮಾ ಅವ್ರಿಗಿಂತ ಒಂದು ಪಟ್ಟು ಜಾಸ್ತೀನಿ ಅನ್ನೋ ಓವರ್ ಕಾನ್ಫಿಡೆನ್ಸ್ ನಲ್ಲಿದೆ.
ಯಡವಟ್ಟಾದ್ರೆ ಬೀದಿಗೆ ಬರ್ತಾರೆ ನಿರ್ಮಾಪಕರು

ಅವನೇ ಶ್ರೀಮನ್ ನಾರಾಯಣ ಸಿನಿಮಾ ನಿರ್ಮಾಪಕರು ಅಂದುಕೊಂಡಂತೆ ಆಗಲಿಲ್ಲ ಅಂದ್ರೆ, ಖಂಡಿತ ನಿರ್ಮಾಪಕರು ಬೀದಿಗೆ ಬರ್ತಾರೆ. ಇರೋಬರೋದನ್ನೆಲ್ಲಾ ಈ ಸಿನಿಮಾ ಮೇಲೆ ಹಾಕಿ, ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿರೋ ಪುಷ್ಕರ್ ಮಲ್ಲಿಕಾರ್ಜುನಯ್ಯರಿಗೆ, ಬರೀ ಕನ್ನಡದಲ್ಲಿ ಮಾತ್ರ ಸಿನಿಮಾ ವರ್ಕೌಟ್ ಆದ್ರೂ ಕಷ್ಟ. ಶತಾಯಗತಾಯ ಎಲ್ಲಾ ಭಾಷೆಯಲ್ಲೂ ಈ ಸಿನಿಮಾ ಚೆನ್ನಾಗಿ ಓಡಿದ್ರೆ ಮಾತ್ರ ಇವ್ರು ಹಾಕಿದ ಬಂಡವಾಳ ವಾಪಸ್ ಬರುತ್ತೆ. ಲಾಭ ಬರುತ್ತೆ. ಇಲ್ಲವಾದಲ್ಲಿ, ಭಾರಿ ತೊಂದರೆ ಎದುರಾಗುತ್ತೆ. ಸಿನಿಮಾ ನಿರ್ಮಾಣದ ಹಂತದಲ್ಲೇ ಕನ್ನಡದವತರಣಿಕೆಯ ಸ್ಯಾಟಿಲೈಟ್ ಮತ್ತಿ ಡಿಜಿಟಲ್ ರೈಟ್ಸ್ ನ ಸೇಲ್ ಮಾಡಿರೋ ಪುಷ್ಕರ್, ಪರಭಾಷೆಯ ಸ್ಯಾಟಿಲೈಟ್ ಮತ್ತು ಡಿಜಿಟಲ್ ರೈಟ್ಸ್ ಒಳ್ಳೆಯ ಬೆಲೆಗೆ ಸೇಲ್ ಆಗುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದಾರೆ. ಕೆ.ಜಿ.ಎಫ್ ಸಿನಿಮಾ ರಿಲೀಸ್ಗೂ ಎರಡು ತಿಂಗಳ ಮೊದ್ಲೇ ಎಲ್ಲಾ ಭಾಷೆಯ ವಿತರಣೆಯ ಹಕ್ಕು, ಡಿಜಿಟಲ್, ಸ್ಯಾಟಿಲೈಟ್ ಹಕ್ಕನ್ನ ವ್ಯಾಪಾರ ಮಾಡಿಕೊಂಡು, ಪ್ರತಿಭಾಷೆಯಲ್ಲೂ ಪ್ರಚಾರ ಕಾರ್ಯವನ್ನ ಆರಂಭಿಸಿದ್ರು, ಆದ್ರೆ ಹಾಗೇ ಕಂಪೇರ್ ಮಾಡೋದಾದ್ರೆ, ಅವನೇ ಶ್ರೀಮನ್ ನಾರಾಯಣ ತಂಡದಿಂದ ಅಂತಹ ಯಾವುದೇ ದೊಡ್ಡಮಟ್ಟದ ಪ್ರೋಗ್ರೇಸೀವ್ ಕೆಲಸ ಆಗಿಲ್ಲ. ಹಾಗಾಗಿ, ಮೂಲಗಳು ಹೇಳೋ ಪ್ರಕಾರ ಈ ಚಿತ್ರದ ಕಂಟೆಂಟ್ ಚೆನ್ನಾಗಿದೇ ಆದ್ರೂ, ಈ ಚಿತ್ರತಂಡ ಮಾಡಿರೋ ಸಾಹಸ ಪ್ರಯೋಗಕ್ಕೆ, ಇವರು ನಿರೀಕ್ಷಿಸಿರೋ 300ಕೋಟಿ ಬರೋದು ದೂರದ ಮಾತು ಅಂತ ಗಾಂಧಿನಗರದ ಸಿನಿಮಾ ಬ್ಯುಸಿನೆಸ್ ಪಂಡಿತರು ಹೇಳ್ತಿದ್ದಾರೆ. ಅದೇನೆ ಇದ್ರೂ ಈ ವರ್ಷಾಂತ್ಯಕ್ಕೆ ರಕ್ಷಿತ್ ಶೆಟ್ಟಿ ಮತ್ತು ಪುಷ್ಕರ್ ವೃತ್ತಿ ಬದುಕಿಗೆ ಟರ್ನಿಂಗ್ ಪಾಯಿಂಟ್ ಆಗಲಿದೆ. ಆದ್ರೆ ಅದು ಪಾಸಿಟೀವಾ..? ನೆಗೆಟೀವಾ..? ಅನ್ನೋದೇ ಸದ್ಯ ಗಾಂಧಿನಗರವನ್ನ ಕಾಡ್ತಿರೋ ಪ್ರಶ್ನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...