Homeಅಂತರಾಷ್ಟ್ರೀಯನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆ: ಇಂದು ಪ್ರಮಾಣವಚನ

ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆ: ಇಂದು ಪ್ರಮಾಣವಚನ

- Advertisement -
- Advertisement -

ನೇಪಾಳದ ನೂತನ ಪ್ರಧಾನಿಯಾಗಿ ಸಿಪಿಎನ್-ಮಾವೋವಾದಿ ಕೇಂದ್ರದ ಅಧ್ಯಕ್ಷರಾದ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆಯಾಗಿದ್ದಾರೆ. ಇದು ಅವರ ಮೂರನೇ ಅವಧಿಗೆ ಪ್ರಧಾನಿಯಾಗಿ ನೇಮಕವಾಗುತ್ತಿದ್ದು, ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನೇಪಾಳದ ಅಧ್ಯಕ್ಷರಾದ ಬಿದ್ಯಾ ದೇವಿ ಭಂಡಾರಿಯವರು ಬಹುಮತ ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‌ನ ಸದಸ್ಯರು ಸರ್ಕಾರ ರಚನೆಗೆ ಮುಂದೆ ಬರುವಂತೆ ಸೂಚನೆ ನೀಡಿದ್ದರು. ಅದರಂತೆ ಪ್ರಂಚಂಡರವರು 169 ಸದಸ್ಯ ಬಲ ಇರುವುದಾಗಿ ಹಕ್ಕು ಮಂಡಿಸಿದ್ದರು. ಹಾಗಾಗಿ ಅವರನ್ನು ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಸಿಪಿಎನ್-ಯುಎಂಎಲ್ ಪಕ್ಷದ ಅಧ್ಯಕ್ಷ ಕೆ.ಪಿ ಶರ್ಮಾ ಓಲಿ, ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷ ರವಿ ಲಮಿಚ್ಚನೆ, ರಾಷ್ಟ್ರೀಯ ಪ್ರಜಾತಂತ್ರ ಪಕ್ಷದ ರಾಜೇಂದ್ರ ಲಿಂಗ್ಡೆನ್ ಸೇರಿದಂತೆ ಹಲವು ಪಕ್ಷೇತರರು ನೂತನ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ.

275 ಸದಸ್ಯಬಲದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‌ನಲ್ಲಿ 169 ಸದಸ್ಯರು ನೂತನ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಸಿಪಿಎನ್-ಯುಎಂಎಲ್ ಪಕ್ಷವು 78 ಸದಸ್ಯಬಲವನ್ನು ಹೊಂದಿದ್ದರೆ, ಸಿಪಿಎನ್-ಮಾವೋವಾದಿ ಕೇಂದ್ರದ 32 ಸದಸ್ಯರು, ರಾಷ್ಟ್ರೀಯ ಸ್ವತಂತ್ರ ಪಕ್ಷದ 20 ಸದಸ್ಯ ಬಲವನ್ನು ಹೊಂದಿದೆ. ಇತರ ಸಣ್ಣ ಪುಟ್ಟ ಪಕ್ಷಗಳು ನೂತನ ಸರ್ಕಾರದ ಭಾಗವಾಗಿದ್ದಾರೆ.

ನೇಪಾಳಿ ಕಾಂಗ್ರೆಸ್ ಪಕ್ಷವು 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿದ್ದರೂ ಸಹ ಅಧ್ಯಕ್ಷರು ನೀಡಿದ ಗಡುವಿನೊಳಗೆ ಇತರ ಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಈಗಿನ ನೂತನ ಸರ್ಕಾರದಲ್ಲಿ ಮೊದಲ ಎರಡೂವರೆ ವರ್ಷದ ಅವಧಿಗೆ ಸಿಪಿಎನ್-ಮಾವೋವಾದಿ ಕೇಂದ್ರದ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಧಾನಿಯಾದರೆ, ಉಳಿದ ಎರಡೂವರೆ ವರ್ಷಕ್ಕೆ ಸಿಪಿಎನ್-ಯುಎಂಎಲ್ ಪಕ್ಷದ ಅಧ್ಯಕ್ಷ ಕೆ.ಪಿ ಶರ್ಮಾ ಓಲಿಯವರು ಪ್ರಧಾನಿಯಾಗಲಿದ್ದಾರೆ ಎಂದು ಒಪ್ಪಂದ ಮಾಡಿಕೊಂಡಿದ್ದಾರೆ.

ಪುಷ್ಪ ಕಮಲ್ ದಹಾಲ್ ಪ್ರಚಂಡರು ಈ ಮೊದಲು 2008-09 ಮತ್ತು 2016-17 ಅವಧಿಯಲ್ಲಿ ಎರಡು ಬಾರಿ ನೇಪಾಳದ ಪ್ರಧಾನಿಯಾಗಿದ್ದರು. ಇದು ಅವರ ಮೂರನೇ ಅವಧಿಯಾಗಿದೆ.

ಇದನ್ನೂ ಓದಿ: ಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...