Homeಅಂತರಾಷ್ಟ್ರೀಯನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆ: ಇಂದು ಪ್ರಮಾಣವಚನ

ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆ: ಇಂದು ಪ್ರಮಾಣವಚನ

- Advertisement -
- Advertisement -

ನೇಪಾಳದ ನೂತನ ಪ್ರಧಾನಿಯಾಗಿ ಸಿಪಿಎನ್-ಮಾವೋವಾದಿ ಕೇಂದ್ರದ ಅಧ್ಯಕ್ಷರಾದ ಪುಷ್ಪ ಕಮಲ್ ದಹಾಲ್ ಪ್ರಚಂಡ ಆಯ್ಕೆಯಾಗಿದ್ದಾರೆ. ಇದು ಅವರ ಮೂರನೇ ಅವಧಿಗೆ ಪ್ರಧಾನಿಯಾಗಿ ನೇಮಕವಾಗುತ್ತಿದ್ದು, ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನೇಪಾಳದ ಅಧ್ಯಕ್ಷರಾದ ಬಿದ್ಯಾ ದೇವಿ ಭಂಡಾರಿಯವರು ಬಹುಮತ ಹೊಂದಿರುವ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‌ನ ಸದಸ್ಯರು ಸರ್ಕಾರ ರಚನೆಗೆ ಮುಂದೆ ಬರುವಂತೆ ಸೂಚನೆ ನೀಡಿದ್ದರು. ಅದರಂತೆ ಪ್ರಂಚಂಡರವರು 169 ಸದಸ್ಯ ಬಲ ಇರುವುದಾಗಿ ಹಕ್ಕು ಮಂಡಿಸಿದ್ದರು. ಹಾಗಾಗಿ ಅವರನ್ನು ನೂತನ ಪ್ರಧಾನಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಸಿಪಿಎನ್-ಯುಎಂಎಲ್ ಪಕ್ಷದ ಅಧ್ಯಕ್ಷ ಕೆ.ಪಿ ಶರ್ಮಾ ಓಲಿ, ರಾಷ್ಟ್ರೀಯ ಸ್ವತಂತ್ರ ಪಕ್ಷದ ಅಧ್ಯಕ್ಷ ರವಿ ಲಮಿಚ್ಚನೆ, ರಾಷ್ಟ್ರೀಯ ಪ್ರಜಾತಂತ್ರ ಪಕ್ಷದ ರಾಜೇಂದ್ರ ಲಿಂಗ್ಡೆನ್ ಸೇರಿದಂತೆ ಹಲವು ಪಕ್ಷೇತರರು ನೂತನ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದಾರೆ.

275 ಸದಸ್ಯಬಲದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‌ನಲ್ಲಿ 169 ಸದಸ್ಯರು ನೂತನ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದರಲ್ಲಿ ಸಿಪಿಎನ್-ಯುಎಂಎಲ್ ಪಕ್ಷವು 78 ಸದಸ್ಯಬಲವನ್ನು ಹೊಂದಿದ್ದರೆ, ಸಿಪಿಎನ್-ಮಾವೋವಾದಿ ಕೇಂದ್ರದ 32 ಸದಸ್ಯರು, ರಾಷ್ಟ್ರೀಯ ಸ್ವತಂತ್ರ ಪಕ್ಷದ 20 ಸದಸ್ಯ ಬಲವನ್ನು ಹೊಂದಿದೆ. ಇತರ ಸಣ್ಣ ಪುಟ್ಟ ಪಕ್ಷಗಳು ನೂತನ ಸರ್ಕಾರದ ಭಾಗವಾಗಿದ್ದಾರೆ.

ನೇಪಾಳಿ ಕಾಂಗ್ರೆಸ್ ಪಕ್ಷವು 89 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿದ್ದರೂ ಸಹ ಅಧ್ಯಕ್ಷರು ನೀಡಿದ ಗಡುವಿನೊಳಗೆ ಇತರ ಪಕ್ಷಗಳ ಬೆಂಬಲ ಪಡೆದು ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ. ಈಗಿನ ನೂತನ ಸರ್ಕಾರದಲ್ಲಿ ಮೊದಲ ಎರಡೂವರೆ ವರ್ಷದ ಅವಧಿಗೆ ಸಿಪಿಎನ್-ಮಾವೋವಾದಿ ಕೇಂದ್ರದ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಧಾನಿಯಾದರೆ, ಉಳಿದ ಎರಡೂವರೆ ವರ್ಷಕ್ಕೆ ಸಿಪಿಎನ್-ಯುಎಂಎಲ್ ಪಕ್ಷದ ಅಧ್ಯಕ್ಷ ಕೆ.ಪಿ ಶರ್ಮಾ ಓಲಿಯವರು ಪ್ರಧಾನಿಯಾಗಲಿದ್ದಾರೆ ಎಂದು ಒಪ್ಪಂದ ಮಾಡಿಕೊಂಡಿದ್ದಾರೆ.

ಪುಷ್ಪ ಕಮಲ್ ದಹಾಲ್ ಪ್ರಚಂಡರು ಈ ಮೊದಲು 2008-09 ಮತ್ತು 2016-17 ಅವಧಿಯಲ್ಲಿ ಎರಡು ಬಾರಿ ನೇಪಾಳದ ಪ್ರಧಾನಿಯಾಗಿದ್ದರು. ಇದು ಅವರ ಮೂರನೇ ಅವಧಿಯಾಗಿದೆ.

ಇದನ್ನೂ ಓದಿ: ಲಾಲು ಪ್ರಸಾದ್ ವಿರುದ್ಧದ ಭ್ರಷ್ಟಾಚಾರ ಪ್ರಕರಣ; ಸಿಬಿಐನಿಂದ ತನಿಖೆ ಪುನಾರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...