Homeಕರ್ನಾಟಕಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

- Advertisement -
- Advertisement -

“ನೂತನ ಪಿಂಚಣಿ ಯೋಜನೆ (ಎನ್‌ಪಿಸ್‌) ಕುರಿತು ಚುಕ್ಕಿ ಗುರುತಿನ ಪ್ರಶ್ನೆಯನ್ನು ಕೇಳಿದವರಿಗೆ ಸರ್ಕಾರ ಸಿದ್ಧ ಉತ್ತರವನ್ನು ಈವರೆಗೆ ನೀಡುತ್ತಾ ಬಂದಿದೆ. ಶಾಸಕ ರೇಣುಕಾಚಾರ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸುವ ಯೋಜನೆ ಇಲ್ಲ ಎಂದಿದ್ದಾರೆ. ಇದನ್ನು ಬದಿಗಿಟ್ಟು ಸದನದಲ್ಲಿ ಸರ್ಕಾರ ಚರ್ಚೆ ಮಾಡಬೇಕು” ಎಂದು ’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಒತ್ತಾಯಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಸಿದ್ಧ ಉತ್ತರವನ್ನು ಈಗ ನೀಡಿದ್ದಾರೆ. ಚರ್ಚೆ ಮಾಡುವುದಾಗಿಯೂ ಹೇಳಿದ್ದಾರೆ. ನಾವು ಅದಕ್ಕಾಗಿ ಕಾಯುತ್ತಿದ್ದೇವೆ. ಈ ಚರ್ಚೆ ಆದ ನಂತರ ಸದನದಲ್ಲಿ ಕೈಗೊಂಡ ನಿರ್ಧಾರದ ಆಧಾರದಲ್ಲಿ ನಮ್ಮ ಹೋರಾಟದ ನಿಲುವನ್ನು ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ.

“ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ” ಎಂಬ ಸರ್ಕಾರದ ನಿಲುವನ್ನು ಟೀಕಿಸಿದ ಅವರು, “ಆರ್ಥಿಕ ಹೊರೆಯಾಗುತ್ತದೆ ಎಂಬುದು ಸುಳ್ಳು. ಇಲ್ಲಿಯವರೆಗೆ ಎನ್‌ಪಿಎಸ್ ಜಾರಿಗೊಳಿಸದೆ ಒಪಿಎಸ್‌ ಅನ್ನೇ ಮುಂದುವರಿಸುತ್ತಿರುವ ಪಶ್ಚಿಮ ಬಂಗಾಳದ ಆರ್ಥಿಕ ಸ್ಥಿತಿ ಉತ್ತಮವಾಗಿರುವುದು ಹೇಗೆ? 2021- 22ರಲ್ಲಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಪ್ರಮಾಣ ಶೇ. 12.8ರಷ್ಟಿದೆ. ಕರ್ನಾಟಕದಲ್ಲಿ ಶೇ. 9.5ರಷ್ಟಿದೆ” ಎಂದು ವಿವರಿಸಿದರು.

“ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಾಂಡ್‌ ರಾಜ್ಯಗಳಂತೆ ಸರ್ಕಾರ ಚಿಂತನೆ ಮಾಡಬೇಕು. ಹಿಮಾಚಲ ಪ್ರದೇಶದಲ್ಲಿ ವೋಟ್ ಫಾರ್‌ ಒಪಿಎಸ್ ಅಭಿಯಾನ ಮಾಡಿದ್ದೆವು. ಸರ್ಕಾರ ಬದಲಾಗಲು ಕಾರಣವಾದೆವು. ಈಗ ಮೊದಲ ಕ್ಯಾಬಿನೇಟ್‌ನಲ್ಲಿಯೇ ಒಪಿಎಸ್ ಜಾರಿಗೊಳಿಸುವುದಾಗಿ ಸರ್ಕಾರ ಹೇಳಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ನೌಕರರ ಮತಗಳು ನಿರ್ಣಾಯಕವಾಗಲಿವೆ. ಒಂದು ಕ್ಷೇತ್ರದಲ್ಲಿ ಕನಿಷ್ಠ ಮೂರು ಸಾವಿರ ಮತಗಳು ಒಪಿಎಸ್‌ಗಾಗಿ ಬಿದ್ದರೆ, ಫಲಿತಾಂಶ ವ್ಯತಿರಿಕ್ತವಾಗಿರುತ್ತದೆ. ಈ ಎಚ್ಚರಿಕೆ ಆಡಳಿತರೂಢ ಪಕ್ಷಗಳಿಗೆ ಖಂಡಿತ ಇದೆ. ಹೀಗಾಗಿ ಸದನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಚರ್ಚೆ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಪ್ರಸ್ತುತ ಒಬ್ಬ ಮನುಷ್ಯನ ಜೀವಿತಾವಧಿ ಸರಾಸರಿ 72 ವರ್ಷಗಳು. 60 ವರ್ಷಕ್ಕೆ ನಾವು ನಿವೃತ್ತಿಯಾದರೆ 12 ವರ್ಷಗಳು ಮಾತ್ರ ಪಿಂಚಣಿಯನ್ನು ಸರ್ಕಾರ ಕೊಡಬೇಕಾಗುತ್ತದೆ. ಸರ್ಕಾರ ಮತ್ತು ಸಮಾಜಕ್ಕಾಗಿ ದುಡಿದ ವರ್ಗಕ್ಕೆ ಒಪಿಎಸ್‌ ನೀಡಲು ಸಾಧ್ಯವಿಲ್ಲವಾ? ಎಷ್ಟೋ ಮಂದಿ ನೌಕರರು ಈಗ 500, 1000 ಪಿಂಚಣಿ ಪಡೆಯುತ್ತಾ, ಇಳಿ ವಯಸ್ಸಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯುತ್ತಿದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚೆಗೆ ಗಂಗಾವತಿಗೆ ಹೋಗಿದ್ದೆ. ಅನ್ನದಾನಪ್ಪ ಎಂಬುವರ ನೋವಿನ ಕತೆ ಕೇಳಿ ಆತಂಕಗೊಂಡೆ. ಅವರು ಒಟ್ಟು 33 ವರ್ಷ ಸರ್ಕಾರಕ್ಕೆ ಸೇವೆ ಸಲ್ಲಿಸಿದ್ದಾರೆ. 2009ರಲ್ಲಿ ಪರ್ಮನೆಂಟ್ ಮಾಡಲಾಗುತ್ತದೆ. 13 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅವರಿಗೆ 548 ರೂಪಾಯಿ ಪಿಂಚಣಿ ನಿಗದಿಯಾಗುತ್ತದೆ. ಈ ಹಣದಲ್ಲಿ ಅವರು ಒಂದು ಗ್ಯಾಸ್ ಸಿಲಿಂಡರ್‌ ಕೂಡ ಖರೀದಿಸಲು ಸಾಧ್ಯವಿಲ್ಲ. ವಾರದ ಸಂತೆ ಖರ್ಚು, ಮನೆಯ ಬಾಡಿಗೆ ಕಟ್ಟಲು ಆಗುತ್ತದೆಯಾ? ಸರ್ಕಾರಿ ನೌಕರರು ಒತ್ತಡದ ಸೇವೆಯನ್ನು ಸಲ್ಲಿಸುತ್ತಾ ನಲವತ್ತು ವರ್ಷಕ್ಕೆ ಮಧುಮೇಹ, ರಕ್ತದೊತ್ತಡ ಮೊದಲಾದ ರೋಗಗಳಿಗೆ ತುತ್ತಾಗುತ್ತಾರೆ. ನಿವೃತ್ತಿಯಾದ ಬಳಿಕ ಕನಿಷ್ಠ ಮಾತ್ರೆಗಳನ್ನು ಖರೀದಿಸಲು ಸಾಧ್ಯವಾಗದ ಸ್ಥಿತಿಗೆ ಎನ್‌ಪಿಎಸ್ ತಂದಿಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

ಎನ್‌ಪಿಎಸ್‌ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ ಪ್ರತಿಕ್ರಿಯಿಸಿ, “ಸರ್ಕಾರಿ ನೌಕರರ ಸಮಸ್ಯೆಯ ಕುರಿತು ಚರ್ಚಿಸಬೇಕು ಎಂದು ನೂರಕ್ಕೂ ಹೆಚ್ಚು ಶಾಸಕರು ಆಗ್ರಹಿಸುತ್ತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಯವರು ನೀಡುವ ಮೌಖಿಕವಾದ ಉತ್ತರ ರೆಕಾರ್ಡ್ ಆಗುತ್ತದೆ. ಅವರ ಉತ್ತರದ ಬಳಿಕ ನಮ್ಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಒಂದು ಗಟ್ಟಿಯಾದ ಹೋರಾಟಕ್ಕೆ ನಾವು ಮುನ್ನುಡಿಯನ್ನು ಬರೆದಿದ್ದೇವೆ. ಹತ್ತುಗಳಿಂದ ಮಾಡುತ್ತಿರುವ ಅಹೋರಾತ್ರಿ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಎನ್‌ಪಿಎಸ್ ನೌಕರರ ಸಂಘದ ಸುಮಾರು 20 ಜನ ಮುಖಂಡರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ನಮ್ಮ ಸಂಧ್ಯಾಕಾಲದ ಬದುಕಿನ ಸವಾಲನ್ನು ತಿಳಿಸಿದ್ದೇವೆ. ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ಎನ್‌ಪಿಎಸ್ ರದ್ದತಿ ಮಾಡಲು ಹೋರಾಡುವುದಾಗಿ ತಾವು ನೀಡಿದ್ದ ಭರವಸೆಗೆ ಬದ್ಧರಾಗಿರಬೇಕೆಂದು ಕೋರಿದ್ದೇವೆ. ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದೇವೆ. ಅವರು ತಮ್ಮ ನಿಲುವನ್ನು ಬದಲಿಸಿಕೊಂಡು ನಮ್ಮ ಹೋರಾಟದ ಪರವಾಗಿ ಮಾತನಾಡಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...