Homeಕರ್ನಾಟಕಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

- Advertisement -
- Advertisement -

“ನೂತನ ಪಿಂಚಣಿ ಯೋಜನೆ (ಎನ್‌ಪಿಸ್‌) ಕುರಿತು ಚುಕ್ಕಿ ಗುರುತಿನ ಪ್ರಶ್ನೆಯನ್ನು ಕೇಳಿದವರಿಗೆ ಸರ್ಕಾರ ಸಿದ್ಧ ಉತ್ತರವನ್ನು ಈವರೆಗೆ ನೀಡುತ್ತಾ ಬಂದಿದೆ. ಶಾಸಕ ರೇಣುಕಾಚಾರ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸುವ ಯೋಜನೆ ಇಲ್ಲ ಎಂದಿದ್ದಾರೆ. ಇದನ್ನು ಬದಿಗಿಟ್ಟು ಸದನದಲ್ಲಿ ಸರ್ಕಾರ ಚರ್ಚೆ ಮಾಡಬೇಕು” ಎಂದು ’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಒತ್ತಾಯಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಸಿದ್ಧ ಉತ್ತರವನ್ನು ಈಗ ನೀಡಿದ್ದಾರೆ. ಚರ್ಚೆ ಮಾಡುವುದಾಗಿಯೂ ಹೇಳಿದ್ದಾರೆ. ನಾವು ಅದಕ್ಕಾಗಿ ಕಾಯುತ್ತಿದ್ದೇವೆ. ಈ ಚರ್ಚೆ ಆದ ನಂತರ ಸದನದಲ್ಲಿ ಕೈಗೊಂಡ ನಿರ್ಧಾರದ ಆಧಾರದಲ್ಲಿ ನಮ್ಮ ಹೋರಾಟದ ನಿಲುವನ್ನು ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ.

“ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ” ಎಂಬ ಸರ್ಕಾರದ ನಿಲುವನ್ನು ಟೀಕಿಸಿದ ಅವರು, “ಆರ್ಥಿಕ ಹೊರೆಯಾಗುತ್ತದೆ ಎಂಬುದು ಸುಳ್ಳು. ಇಲ್ಲಿಯವರೆಗೆ ಎನ್‌ಪಿಎಸ್ ಜಾರಿಗೊಳಿಸದೆ ಒಪಿಎಸ್‌ ಅನ್ನೇ ಮುಂದುವರಿಸುತ್ತಿರುವ ಪಶ್ಚಿಮ ಬಂಗಾಳದ ಆರ್ಥಿಕ ಸ್ಥಿತಿ ಉತ್ತಮವಾಗಿರುವುದು ಹೇಗೆ? 2021- 22ರಲ್ಲಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಪ್ರಮಾಣ ಶೇ. 12.8ರಷ್ಟಿದೆ. ಕರ್ನಾಟಕದಲ್ಲಿ ಶೇ. 9.5ರಷ್ಟಿದೆ” ಎಂದು ವಿವರಿಸಿದರು.

“ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಾಂಡ್‌ ರಾಜ್ಯಗಳಂತೆ ಸರ್ಕಾರ ಚಿಂತನೆ ಮಾಡಬೇಕು. ಹಿಮಾಚಲ ಪ್ರದೇಶದಲ್ಲಿ ವೋಟ್ ಫಾರ್‌ ಒಪಿಎಸ್ ಅಭಿಯಾನ ಮಾಡಿದ್ದೆವು. ಸರ್ಕಾರ ಬದಲಾಗಲು ಕಾರಣವಾದೆವು. ಈಗ ಮೊದಲ ಕ್ಯಾಬಿನೇಟ್‌ನಲ್ಲಿಯೇ ಒಪಿಎಸ್ ಜಾರಿಗೊಳಿಸುವುದಾಗಿ ಸರ್ಕಾರ ಹೇಳಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ನೌಕರರ ಮತಗಳು ನಿರ್ಣಾಯಕವಾಗಲಿವೆ. ಒಂದು ಕ್ಷೇತ್ರದಲ್ಲಿ ಕನಿಷ್ಠ ಮೂರು ಸಾವಿರ ಮತಗಳು ಒಪಿಎಸ್‌ಗಾಗಿ ಬಿದ್ದರೆ, ಫಲಿತಾಂಶ ವ್ಯತಿರಿಕ್ತವಾಗಿರುತ್ತದೆ. ಈ ಎಚ್ಚರಿಕೆ ಆಡಳಿತರೂಢ ಪಕ್ಷಗಳಿಗೆ ಖಂಡಿತ ಇದೆ. ಹೀಗಾಗಿ ಸದನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಚರ್ಚೆ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಪ್ರಸ್ತುತ ಒಬ್ಬ ಮನುಷ್ಯನ ಜೀವಿತಾವಧಿ ಸರಾಸರಿ 72 ವರ್ಷಗಳು. 60 ವರ್ಷಕ್ಕೆ ನಾವು ನಿವೃತ್ತಿಯಾದರೆ 12 ವರ್ಷಗಳು ಮಾತ್ರ ಪಿಂಚಣಿಯನ್ನು ಸರ್ಕಾರ ಕೊಡಬೇಕಾಗುತ್ತದೆ. ಸರ್ಕಾರ ಮತ್ತು ಸಮಾಜಕ್ಕಾಗಿ ದುಡಿದ ವರ್ಗಕ್ಕೆ ಒಪಿಎಸ್‌ ನೀಡಲು ಸಾಧ್ಯವಿಲ್ಲವಾ? ಎಷ್ಟೋ ಮಂದಿ ನೌಕರರು ಈಗ 500, 1000 ಪಿಂಚಣಿ ಪಡೆಯುತ್ತಾ, ಇಳಿ ವಯಸ್ಸಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯುತ್ತಿದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚೆಗೆ ಗಂಗಾವತಿಗೆ ಹೋಗಿದ್ದೆ. ಅನ್ನದಾನಪ್ಪ ಎಂಬುವರ ನೋವಿನ ಕತೆ ಕೇಳಿ ಆತಂಕಗೊಂಡೆ. ಅವರು ಒಟ್ಟು 33 ವರ್ಷ ಸರ್ಕಾರಕ್ಕೆ ಸೇವೆ ಸಲ್ಲಿಸಿದ್ದಾರೆ. 2009ರಲ್ಲಿ ಪರ್ಮನೆಂಟ್ ಮಾಡಲಾಗುತ್ತದೆ. 13 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅವರಿಗೆ 548 ರೂಪಾಯಿ ಪಿಂಚಣಿ ನಿಗದಿಯಾಗುತ್ತದೆ. ಈ ಹಣದಲ್ಲಿ ಅವರು ಒಂದು ಗ್ಯಾಸ್ ಸಿಲಿಂಡರ್‌ ಕೂಡ ಖರೀದಿಸಲು ಸಾಧ್ಯವಿಲ್ಲ. ವಾರದ ಸಂತೆ ಖರ್ಚು, ಮನೆಯ ಬಾಡಿಗೆ ಕಟ್ಟಲು ಆಗುತ್ತದೆಯಾ? ಸರ್ಕಾರಿ ನೌಕರರು ಒತ್ತಡದ ಸೇವೆಯನ್ನು ಸಲ್ಲಿಸುತ್ತಾ ನಲವತ್ತು ವರ್ಷಕ್ಕೆ ಮಧುಮೇಹ, ರಕ್ತದೊತ್ತಡ ಮೊದಲಾದ ರೋಗಗಳಿಗೆ ತುತ್ತಾಗುತ್ತಾರೆ. ನಿವೃತ್ತಿಯಾದ ಬಳಿಕ ಕನಿಷ್ಠ ಮಾತ್ರೆಗಳನ್ನು ಖರೀದಿಸಲು ಸಾಧ್ಯವಾಗದ ಸ್ಥಿತಿಗೆ ಎನ್‌ಪಿಎಸ್ ತಂದಿಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

ಎನ್‌ಪಿಎಸ್‌ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ ಪ್ರತಿಕ್ರಿಯಿಸಿ, “ಸರ್ಕಾರಿ ನೌಕರರ ಸಮಸ್ಯೆಯ ಕುರಿತು ಚರ್ಚಿಸಬೇಕು ಎಂದು ನೂರಕ್ಕೂ ಹೆಚ್ಚು ಶಾಸಕರು ಆಗ್ರಹಿಸುತ್ತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಯವರು ನೀಡುವ ಮೌಖಿಕವಾದ ಉತ್ತರ ರೆಕಾರ್ಡ್ ಆಗುತ್ತದೆ. ಅವರ ಉತ್ತರದ ಬಳಿಕ ನಮ್ಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಒಂದು ಗಟ್ಟಿಯಾದ ಹೋರಾಟಕ್ಕೆ ನಾವು ಮುನ್ನುಡಿಯನ್ನು ಬರೆದಿದ್ದೇವೆ. ಹತ್ತುಗಳಿಂದ ಮಾಡುತ್ತಿರುವ ಅಹೋರಾತ್ರಿ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಎನ್‌ಪಿಎಸ್ ನೌಕರರ ಸಂಘದ ಸುಮಾರು 20 ಜನ ಮುಖಂಡರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ನಮ್ಮ ಸಂಧ್ಯಾಕಾಲದ ಬದುಕಿನ ಸವಾಲನ್ನು ತಿಳಿಸಿದ್ದೇವೆ. ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ಎನ್‌ಪಿಎಸ್ ರದ್ದತಿ ಮಾಡಲು ಹೋರಾಡುವುದಾಗಿ ತಾವು ನೀಡಿದ್ದ ಭರವಸೆಗೆ ಬದ್ಧರಾಗಿರಬೇಕೆಂದು ಕೋರಿದ್ದೇವೆ. ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದೇವೆ. ಅವರು ತಮ್ಮ ನಿಲುವನ್ನು ಬದಲಿಸಿಕೊಂಡು ನಮ್ಮ ಹೋರಾಟದ ಪರವಾಗಿ ಮಾತನಾಡಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...