Homeಕರ್ನಾಟಕಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

ಒಪಿಎಸ್ ಜಾರಿ ಸಾಧ್ಯವಿಲ್ಲ ಎಂಬ ಸಿದ್ಧ ಉತ್ತರ ಬದಿಗಿಟ್ಟು ಸದನದಲ್ಲಿ ಚರ್ಚೆ ಮಾಡಲಿ: ಹೋರಾಟಗಾರರ ಪಟ್ಟು

- Advertisement -
- Advertisement -

“ನೂತನ ಪಿಂಚಣಿ ಯೋಜನೆ (ಎನ್‌ಪಿಸ್‌) ಕುರಿತು ಚುಕ್ಕಿ ಗುರುತಿನ ಪ್ರಶ್ನೆಯನ್ನು ಕೇಳಿದವರಿಗೆ ಸರ್ಕಾರ ಸಿದ್ಧ ಉತ್ತರವನ್ನು ಈವರೆಗೆ ನೀಡುತ್ತಾ ಬಂದಿದೆ. ಶಾಸಕ ರೇಣುಕಾಚಾರ್ಯರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಜಾರಿಗೊಳಿಸುವ ಯೋಜನೆ ಇಲ್ಲ ಎಂದಿದ್ದಾರೆ. ಇದನ್ನು ಬದಿಗಿಟ್ಟು ಸದನದಲ್ಲಿ ಸರ್ಕಾರ ಚರ್ಚೆ ಮಾಡಬೇಕು” ಎಂದು ’ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ದಯಾನಂದ್ ಒತ್ತಾಯಿಸಿದರು.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಸಿದ್ಧ ಉತ್ತರವನ್ನು ಈಗ ನೀಡಿದ್ದಾರೆ. ಚರ್ಚೆ ಮಾಡುವುದಾಗಿಯೂ ಹೇಳಿದ್ದಾರೆ. ನಾವು ಅದಕ್ಕಾಗಿ ಕಾಯುತ್ತಿದ್ದೇವೆ. ಈ ಚರ್ಚೆ ಆದ ನಂತರ ಸದನದಲ್ಲಿ ಕೈಗೊಂಡ ನಿರ್ಧಾರದ ಆಧಾರದಲ್ಲಿ ನಮ್ಮ ಹೋರಾಟದ ನಿಲುವನ್ನು ವ್ಯಕ್ತಪಡಿಸುತ್ತೇವೆ” ಎಂದಿದ್ದಾರೆ.

“ಒಪಿಎಸ್‌ನಿಂದ ಆರ್ಥಿಕ ಹೊರೆಯಾಗುತ್ತದೆ” ಎಂಬ ಸರ್ಕಾರದ ನಿಲುವನ್ನು ಟೀಕಿಸಿದ ಅವರು, “ಆರ್ಥಿಕ ಹೊರೆಯಾಗುತ್ತದೆ ಎಂಬುದು ಸುಳ್ಳು. ಇಲ್ಲಿಯವರೆಗೆ ಎನ್‌ಪಿಎಸ್ ಜಾರಿಗೊಳಿಸದೆ ಒಪಿಎಸ್‌ ಅನ್ನೇ ಮುಂದುವರಿಸುತ್ತಿರುವ ಪಶ್ಚಿಮ ಬಂಗಾಳದ ಆರ್ಥಿಕ ಸ್ಥಿತಿ ಉತ್ತಮವಾಗಿರುವುದು ಹೇಗೆ? 2021- 22ರಲ್ಲಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಪ್ರಮಾಣ ಶೇ. 12.8ರಷ್ಟಿದೆ. ಕರ್ನಾಟಕದಲ್ಲಿ ಶೇ. 9.5ರಷ್ಟಿದೆ” ಎಂದು ವಿವರಿಸಿದರು.

“ರಾಜಸ್ಥಾನ, ಛತ್ತೀಸ್‌ಘಡ, ಜಾರ್ಖಾಂಡ್‌ ರಾಜ್ಯಗಳಂತೆ ಸರ್ಕಾರ ಚಿಂತನೆ ಮಾಡಬೇಕು. ಹಿಮಾಚಲ ಪ್ರದೇಶದಲ್ಲಿ ವೋಟ್ ಫಾರ್‌ ಒಪಿಎಸ್ ಅಭಿಯಾನ ಮಾಡಿದ್ದೆವು. ಸರ್ಕಾರ ಬದಲಾಗಲು ಕಾರಣವಾದೆವು. ಈಗ ಮೊದಲ ಕ್ಯಾಬಿನೇಟ್‌ನಲ್ಲಿಯೇ ಒಪಿಎಸ್ ಜಾರಿಗೊಳಿಸುವುದಾಗಿ ಸರ್ಕಾರ ಹೇಳಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ನೌಕರರ ಮತಗಳು ನಿರ್ಣಾಯಕವಾಗಲಿವೆ. ಒಂದು ಕ್ಷೇತ್ರದಲ್ಲಿ ಕನಿಷ್ಠ ಮೂರು ಸಾವಿರ ಮತಗಳು ಒಪಿಎಸ್‌ಗಾಗಿ ಬಿದ್ದರೆ, ಫಲಿತಾಂಶ ವ್ಯತಿರಿಕ್ತವಾಗಿರುತ್ತದೆ. ಈ ಎಚ್ಚರಿಕೆ ಆಡಳಿತರೂಢ ಪಕ್ಷಗಳಿಗೆ ಖಂಡಿತ ಇದೆ. ಹೀಗಾಗಿ ಸದನದಲ್ಲಿ ಎನ್‌ಪಿಎಸ್ ರದ್ದುಗೊಳಿಸುವ ಚರ್ಚೆ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಪ್ರಸ್ತುತ ಒಬ್ಬ ಮನುಷ್ಯನ ಜೀವಿತಾವಧಿ ಸರಾಸರಿ 72 ವರ್ಷಗಳು. 60 ವರ್ಷಕ್ಕೆ ನಾವು ನಿವೃತ್ತಿಯಾದರೆ 12 ವರ್ಷಗಳು ಮಾತ್ರ ಪಿಂಚಣಿಯನ್ನು ಸರ್ಕಾರ ಕೊಡಬೇಕಾಗುತ್ತದೆ. ಸರ್ಕಾರ ಮತ್ತು ಸಮಾಜಕ್ಕಾಗಿ ದುಡಿದ ವರ್ಗಕ್ಕೆ ಒಪಿಎಸ್‌ ನೀಡಲು ಸಾಧ್ಯವಿಲ್ಲವಾ? ಎಷ್ಟೋ ಮಂದಿ ನೌಕರರು ಈಗ 500, 1000 ಪಿಂಚಣಿ ಪಡೆಯುತ್ತಾ, ಇಳಿ ವಯಸ್ಸಿನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ದುಡಿಯುತ್ತಿದ್ದಾರೆ” ಎಂದು ವಿಷಾದಿಸಿದರು.

“ಇತ್ತೀಚೆಗೆ ಗಂಗಾವತಿಗೆ ಹೋಗಿದ್ದೆ. ಅನ್ನದಾನಪ್ಪ ಎಂಬುವರ ನೋವಿನ ಕತೆ ಕೇಳಿ ಆತಂಕಗೊಂಡೆ. ಅವರು ಒಟ್ಟು 33 ವರ್ಷ ಸರ್ಕಾರಕ್ಕೆ ಸೇವೆ ಸಲ್ಲಿಸಿದ್ದಾರೆ. 2009ರಲ್ಲಿ ಪರ್ಮನೆಂಟ್ ಮಾಡಲಾಗುತ್ತದೆ. 13 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಅವರಿಗೆ 548 ರೂಪಾಯಿ ಪಿಂಚಣಿ ನಿಗದಿಯಾಗುತ್ತದೆ. ಈ ಹಣದಲ್ಲಿ ಅವರು ಒಂದು ಗ್ಯಾಸ್ ಸಿಲಿಂಡರ್‌ ಕೂಡ ಖರೀದಿಸಲು ಸಾಧ್ಯವಿಲ್ಲ. ವಾರದ ಸಂತೆ ಖರ್ಚು, ಮನೆಯ ಬಾಡಿಗೆ ಕಟ್ಟಲು ಆಗುತ್ತದೆಯಾ? ಸರ್ಕಾರಿ ನೌಕರರು ಒತ್ತಡದ ಸೇವೆಯನ್ನು ಸಲ್ಲಿಸುತ್ತಾ ನಲವತ್ತು ವರ್ಷಕ್ಕೆ ಮಧುಮೇಹ, ರಕ್ತದೊತ್ತಡ ಮೊದಲಾದ ರೋಗಗಳಿಗೆ ತುತ್ತಾಗುತ್ತಾರೆ. ನಿವೃತ್ತಿಯಾದ ಬಳಿಕ ಕನಿಷ್ಠ ಮಾತ್ರೆಗಳನ್ನು ಖರೀದಿಸಲು ಸಾಧ್ಯವಾಗದ ಸ್ಥಿತಿಗೆ ಎನ್‌ಪಿಎಸ್ ತಂದಿಟ್ಟಿದೆ” ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿರಿ: ’ವೋಟ್ ಫಾರ್ ಒಪಿಎಸ್’; ಸರ್ಕಾರಿ ನೌಕರರ ಕೂಗು ಆಲಿಸುವರೇ ಬೊಮ್ಮಾಯಿ?

ಎನ್‌ಪಿಎಸ್‌ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರಾದ ಚಂದ್ರಕಾಂತ ತಳವಾರ ಪ್ರತಿಕ್ರಿಯಿಸಿ, “ಸರ್ಕಾರಿ ನೌಕರರ ಸಮಸ್ಯೆಯ ಕುರಿತು ಚರ್ಚಿಸಬೇಕು ಎಂದು ನೂರಕ್ಕೂ ಹೆಚ್ಚು ಶಾಸಕರು ಆಗ್ರಹಿಸುತ್ತಿದ್ದಾರೆ. ಸದನದಲ್ಲಿ ಮುಖ್ಯಮಂತ್ರಿಯವರು ನೀಡುವ ಮೌಖಿಕವಾದ ಉತ್ತರ ರೆಕಾರ್ಡ್ ಆಗುತ್ತದೆ. ಅವರ ಉತ್ತರದ ಬಳಿಕ ನಮ್ಮ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ. ಒಂದು ಗಟ್ಟಿಯಾದ ಹೋರಾಟಕ್ಕೆ ನಾವು ಮುನ್ನುಡಿಯನ್ನು ಬರೆದಿದ್ದೇವೆ. ಹತ್ತುಗಳಿಂದ ಮಾಡುತ್ತಿರುವ ಅಹೋರಾತ್ರಿ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ಎನ್‌ಪಿಎಸ್ ನೌಕರರ ಸಂಘದ ಸುಮಾರು 20 ಜನ ಮುಖಂಡರು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರನ್ನು ಭೇಟಿಯಾಗಿ ಮಾತನಾಡಿದ್ದಾರೆ. ನಮ್ಮ ಸಂಧ್ಯಾಕಾಲದ ಬದುಕಿನ ಸವಾಲನ್ನು ತಿಳಿಸಿದ್ದೇವೆ. ಚುನಾವಣೆಗೆ ನಿಂತಿದ್ದ ಸಂದರ್ಭದಲ್ಲಿ ಎನ್‌ಪಿಎಸ್ ರದ್ದತಿ ಮಾಡಲು ಹೋರಾಡುವುದಾಗಿ ತಾವು ನೀಡಿದ್ದ ಭರವಸೆಗೆ ಬದ್ಧರಾಗಿರಬೇಕೆಂದು ಕೋರಿದ್ದೇವೆ. ಹೋರಾಟಕ್ಕೆ ಬೆಂಬಲ ನೀಡಬೇಕೆಂದು ತಿಳಿಸಿದ್ದೇವೆ. ಅವರು ತಮ್ಮ ನಿಲುವನ್ನು ಬದಲಿಸಿಕೊಂಡು ನಮ್ಮ ಹೋರಾಟದ ಪರವಾಗಿ ಮಾತನಾಡಿದ್ದಾರೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...