Homeಅಂತರಾಷ್ಟ್ರೀಯಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಸಂವಿಧಾನಕ್ಕೆ ತಿದ್ದುಪಡಿ: 2036 ರವರೆಗೂ ರಷ್ಯಾದಲ್ಲಿ ಪುಟಿನ್ ಅಧ್ಯಕ್ಷ?

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 2036 ರವರೆಗೆ ಅಧಿಕಾರ ಹೊಂದಲು ಅನುವು ಮಾಡಿಕೊಡುವ ಸಂವಿಧಾನದ ಬದಲಾವಣೆಗಳನ್ನು ರಷ್ಯಾದ ಹೆಚ್ಚಿನ ಮತದಾರರು ಅಂಗೀಕರಿಸಿದ್ದಾರೆ ಎಂಬ ವರದಿಗಳು ಬಂದಿವೆ. ಬುಧವಾರ ಮುಕ್ತಾಯಗೊಂಡ ವಾರಾಂತ್ಯದ ಜನಾಭಿಪ್ರಾಯ ಸಂಗ್ರಹದಲ್ಲಿ ಅಕ್ರಮಗಳು ನಡೆದಿದ್ದು, ಮತದಾರರ ಮೇಲೆ ಒತ್ತಡ ಹೇರಲಾಗಿದೆ ಎಂಬ ಟೀಕೆಗಳು ಸಹ ಕೇಳಿಬಂದಿವೆ.

ರಾಷ್ಟ್ರದ ಬಹುತೇಕ ಚುನಾವಣೆ ಮುಗಿದಿದ್ದು, 20% ಪ್ರಾಂತದ ಮತಗಳನ್ನು ಎಣಿಸಲಾಗಿದೆ. 72% ಜನರು ಸಾಂವಿಧಾನಿಕ ತಿದ್ದುಪಡಿ ಪರ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರಷ್ಯಾದಲ್ಲಿ ಮೊದಲ ಬಾರಿಗೆ, ಮತ ಚಲಾಯಿಸುವಲ್ಲಿ ಜನಸಂದಣಿ ತಡೆಗಟ್ಟಲು ಮತದಾನಕ್ಕೆ ಒಂದು ವಾರದವರೆಗೂ ಅವಕಾಶ ನೀಡಲಾಗಿತ್ತು.

ಬೃಹತ್ ಪ್ರಚಾರ ಅಭಿಯಾನ ಮತ್ತು ಸಂಘಟಿತ ಸವಾಲನ್ನು ಎದುರಿಸಲು ಪ್ರತಿಪಕ್ಷಗಳು ವಿಫಲವಾದ ಕಾರಣ ಪುಟಿನ್ ಅವರು ಬಯಸಿದ ಫಲಿತಾಂಶವನ್ನು ಪಡೆದರು ಎನ್ನಲಾಗಿದೆ.

ಚುನಾವಣಾ ಅಧಿಕಾರಿಗಳ ಪ್ರಕಾರ, ಮಾಸ್ಕೋ ಮತ್ತು ಪಶ್ಚಿಮ ರಷ್ಯಾದ ಇತರ ಭಾಗಗಳಲ್ಲಿ ಮತದಾನ ಮುಕ್ತಾಯಗೊಳ್ಳುವ ಹೊತ್ತಿಗೆ ಮತದಾನವು 65% ರಷ್ಟಿತ್ತು. ಕೆಲವು ಪ್ರದೇಶಗಳಲ್ಲಿ, ಸುಮಾರು 90% ಅರ್ಹ ಮತದಾರರು ಮತ ಚಲಾಯಿಸಿದ್ದಾರೆ.

ರಷ್ಯಾದ ಪೂರ್ವ ದಿಕ್ಕಿನ ಚುಕ್ಚಿ ಪರ್ಯಾಯ ದ್ವೀಪದಲ್ಲಿ, ಮಾಸ್ಕೋಕ್ಕಿಂತ ಒಂಬತ್ತು ಗಂಟೆಗಳ ಮುಂಚಿತವಾಗಿ ಪ್ರಾಥಮಿಕ ಫಲಿತಾಂಶಗಳನ್ನು ಘೋಷಿಸಿ, 80% ಮತದಾರರು ತಿದ್ದುಪಡಿಗಳನ್ನು ಬೆಂಬಲಿಸಿದ್ದಾರೆ ಎಂದಿದ್ದಾರೆ. ಪೂರ್ವದ ಇತರ ಭಾಗಗಳಲ್ಲಿ, 70% ರಷ್ಟು ಮತದಾರರು ಬದಲಾವಣೆಗಳನ್ನು ಬೆಂಬಲಿಸಿದ್ದಾರೆ ಎಂದು ಅವರು ಹೇಳಿದರು.

ಕ್ರೆಮ್ಲಿನ್ ವಿಮರ್ಶಕರು ಮತ್ತು ಸ್ವತಂತ್ರ ಚುನಾವಣಾ ವೀಕ್ಷಕರು ಮತದಾನದ ಅಂಕಿಅಂಶಗಳನ್ನು ಪ್ರಶ್ನಿಸಿದ್ದಾರೆ.

2024ಕ್ಕೆ ಪುಟಿನ್‌ರವರ ಅಧಿಕಾರವಧಿ ಮುಗಿಯಲಿದೆ. ಆದರೆ ಅದರ ನಂತರವೂ ಸಹ 12 ವರ್ಷಗಳ ಕಾಲ ಅಧ್ಯಕ್ಷರಾಗಿ ಮುಂದುವರೆಯುವಂತೆ ಅವರು ತಂದ ಸಂವಿಧಾನ ತಿದ್ದುಪಡಿಗಳಿಗೆ ರಷ್ಯಾ ಸಂಸತ್ತು ಭಾರೀ ಬಹುಮತದೊಂದಿಗೆ ಅಂಗೀಕರಿಸಿತ್ತು.


ಓದಿ: ಜನ ಮನೆಯಿಂದ ಹೊರಬರದಿರಲು ರಷ್ಯಾ 800 ಸಿಂಹಗಳನ್ನು ಬೀದಿಗೆ ಬಿಟ್ಟಿತೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...